ಅಫ್ಘಾನಿಸ್ತಾನ ವಿರುದ್ಧ ಟೆಸ್ಟ್, ಏಕದಿನ ಸರಣಿ ವೇಳಾಪಟ್ಟಿ ಪ್ರಕಟ 
ಕ್ರಿಕೆಟ್

ಭಾರತ vs ಅಫ್ಘಾನಿಸ್ತಾನ ಏಕದಿನ ಸರಣಿ ಪ್ರಕಟಿಸಿದ BCCI; ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ ಕಂಬ್ಯಾಕ್‌ಗೆ ದಿನಾಂಕ ನಿಗದಿ

2026ರ ಟಿ20 ವಿಶ್ವಕಪ್ ಮುಕ್ತಾಯಗೊಂಡ ನಂತರ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ಇದ್ದು, ಮೇ ಅಂತ್ಯದವರೆಗೆ ನಡೆಯಲಿದೆ. ಬಳಿಕ, ಭಾರತವು ಅಫ್ಘಾನಿಸ್ತಾನ ತಂಡಕ್ಕೆ ಆತಿಥ್ಯ ವಹಿಸಲಿದೆ.

2026ರ ಟಿ20 ವಿಶ್ವಕಪ್ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೂನ್ 6 ರಿಂದ ಅಫ್ಘಾನಿಸ್ತಾನ ವಿರುದ್ಧದ ರೋಮಾಂಚಕಾರಿ ತವರು ಸರಣಿಯನ್ನು ಅಂತಿಮಗೊಳಿಸಿದೆ. ರಶೀದ್ ಖಾನ್ ನೇತೃತ್ವದ ತಂಡವು ಒಂದು ಟೆಸ್ಟ್ ಮತ್ತು ಮೂರು ಪಂದ್ಯಗಳ ಏಕದಿನ ಅಂತರರಾಷ್ಟ್ರೀಯ (ODI) ಸರಣಿಗಾಗಿ ಭಾರತ ಪ್ರವಾಸ ಮಾಡಲಿದೆ.

2026ರ ಟಿ20 ವಿಶ್ವಕಪ್ ಮುಕ್ತಾಯಗೊಂಡ ನಂತರ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ಇದ್ದು, ಮೇ ಅಂತ್ಯದವರೆಗೆ ನಡೆಯಲಿದೆ. ಬಳಿಕ, ಭಾರತವು ಅಫ್ಘಾನಿಸ್ತಾನ ತಂಡಕ್ಕೆ ಆತಿಥ್ಯ ವಹಿಸಲಿದೆ. ಈ ಸರಣಿಯು ಭವಿಷ್ಯದ ಪ್ರವಾಸ ಕಾರ್ಯಕ್ರಮದ (ಎಫ್‌ಟಿಪಿ) ಭಾಗವಾಗಿದ್ದು, ಬಿಸಿಸಿಐ ಸೋಮವಾರ ದೃಢಪಡಿಸಿದೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಂಬ್ಯಾಕ್

ಭಾರತೀಯ ಕ್ರಿಕೆಟ್ ಅಭಿಮಾನಿಗಳು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರನ್ನೂ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ರೋಹಿತ್ ಮತ್ತು ಕೊಹ್ಲಿ ಟಿ20ಐ ಮತ್ತು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವುದರಿಂದ, ಏಕದಿನ ಪಂದ್ಯಗಳ ಮೇಲೆ ಮಾತ್ರ ಗಮನ ಹರಿಸಿದ್ದಾರೆ. ಭಾರತ ಶೀಘ್ರದಲ್ಲೇ 2027ರ ಏಕದಿನ ವಿಶ್ವಕಪ್ ಮೇಲೆ ತನ್ನ ಗಮನ ಕೇಂದ್ರೀಕರಿಸಲಿದ್ದು, ಹೆಚ್ಚಿನ ಏಕದಿನ ಕ್ರಿಕೆಟ್ ಇರಲಿದೆ.

ಅಫ್ಘಾನಿಸ್ತಾನ ತಂಡದ ವಿರುದ್ಧದ ಸರಣಿಗೂ ಮುನ್ನ ರೋಹಿತ್ ಮತ್ತು ಕೊಹ್ಲಿ ಇಬ್ಬರೂ ಐಪಿಎಲ್ 2026ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಲಿದ್ದಾರೆ. ಜೂನ್ 14, 17 ಮತ್ತು 20 ರಂದು ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ಧರ್ಮಶಾಲಾ, ಲಖನೌ ಮತ್ತು ಚೆನ್ನೈ ಆತಿಥ್ಯ ವಹಿಸಲಿವೆ. ಎಲ್ಲ ಸ್ಥಳಗಳಲ್ಲಿ, ಚೆನ್ನೈ ಮಾತ್ರ ಟಿ20 ವಿಶ್ವಕಪ್ ಪಂದ್ಯಾವಳಿಯ ಪಂದ್ಯವನ್ನು ಆಯೋಜಿಸಿತ್ತು.

ಏಕದಿನ ಸರಣಿ, ಟೆಸ್ಟ್ ವೇಳಾಪಟ್ಟಿ

* ಜೂನ್ 6ರಂದು ನ್ಯೂ ಚಂಡೀಗಢದಲ್ಲಿ ಟೆಸ್ಟ್ ಆರಂಭವಾಗಲಿದೆ.

* ಜೂನ್ 14 ರಂದು ಮೊದಲ ಏಕದಿನ ಧರ್ಮಶಾಲಾದಲ್ಲಿ ನಡೆಯಲಿದೆ.

* ಜೂನ್ 17 ರಂದು ಎರಡನೇ ಏಕದಿನ ಲಖನೌನಲ್ಲಿ ನಡೆಯಲಿದೆ.

* ಜೂನ್ 20 ರಂದು ಮೂರನೇ ಏಕದಿನ ಚೆನ್ನೈನಲ್ಲಿ ನಡೆಯಲಿದೆ.

ಐತಿಹಾಸಿಕ ಭಾರತ vs ಅಫ್ಘಾನಿಸ್ತಾನ ಟೆಸ್ಟ್

ಅಫ್ಘಾನಿಸ್ತಾನ ತಂಡದ ಭಾರತ ಪ್ರವಾಸವು ನ್ಯೂ ಚಂಡೀಗಢ, ಮುಲ್ಲನ್‌ಪುರದಲ್ಲಿ ನಡೆಯುವ ಏಕೈಕ ಟೆಸ್ಟ್‌ನೊಂದಿಗೆ ಪ್ರಾರಂಭವಾಗುತ್ತದೆ. ಇದು ಮಹಾರಾಜ ಯಾದವೀಂದ್ರ ಸಿಂಗ್ ಪಿಸಿಎ ಕ್ರೀಡಾಂಗಣದಲ್ಲಿ ನಡೆಯುವ ಮೊದಲ ಟೆಸ್ಟ್ ಪಂದ್ಯವಾಗಿದೆ. ಕುತೂಹಲಕಾರಿಯಾಗಿ, ಭಾರತ ಮತ್ತು ಅಫ್ಘಾನಿಸ್ತಾನ ಪರಸ್ಪರ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡಿವೆ. ಆ ಘರ್ಷಣೆ 2018 ರಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿತ್ತು.

ಆ ಪಂದ್ಯದಲ್ಲಿ ಭಾರತ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಿದ್ದರು. ಮುರಳಿ ವಿಜಯ್ ಮತ್ತು ಶಿಖರ್ ಧವನ್ ಶತಕಗಳನ್ನು ಗಳಿಸಿದ್ದರು. ಭಾರತವು ಇನಿಂಗ್ಸ್ ಮತ್ತು 262 ರನ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವೈಮಾನಿಕ ದಾಳಿಗಳನ್ನು ಹಿಮ್ಮೆಟ್ಟಿಸಿದ ಕುವೈತ್; ಏಕಾಂಗಿ ಆಯ್ತಾ ಇರಾನ್?

ಪೈಲಟ್ ಸೀಟಿನ ಪಕ್ಕದಲ್ಲಿ ಮಲಗಿರುವ VSR ವೆಂಚರ್ಸ್ ಮಾಲೀಕ: ಶಾಕಿಂಗ್ Video ಹಂಚಿಕೊಂಡ ಅಜಿತ್ ಪವಾರ್ ಪುತ್ರ, ಬಂಧನಕ್ಕೆ ಒತ್ತಾಯ!

2028ರ ವಿಧಾನಸಭಾ ಚುನಾವಣೆ: Jds ಗೆ ಹೆಚ್ಚು ಕ್ಷೇತ್ರ ಗೆಲ್ಲುವ ಗುರಿ; ಸೀಟು ಹಂಚಿಕೆ ಬಗ್ಗೆ ವಿಜಯಪುರ ಜಿಲ್ಲಾ BJP ನಾಯಕರಲ್ಲಿ ಅಸಮಾಧಾನದ ದಳ್ಳುರಿ!

ಇರಾನ್ ಮೇಲೆ ದಾಳಿ: ಹಿಜ್ಬುಲ್ಲಾ ರಾಕೆಟ್ ದಾಳಿ ಬಳಿಕ ಬೈರುತ್ ಮೇಲೆ ಬಾಂಬ್ ಹಾಕಿದ ಇಸ್ರೇಲ್!

IRGC ಪ್ರಧಾನ ಕಚೇರಿ ಧ್ವಂಸ! ಹಾವಿನ ತಲೆಯನ್ನು ಕತ್ತರಿಸಿದ್ದೇವೆ: ಅಮೆರಿಕ

SCROLL FOR NEXT