ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪೊಲೀಸರ ಪರಿಶೀಲನೆ 
ಕ್ರಿಕೆಟ್

IPL 2026: ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಗಳ ಬಗ್ಗೆ ಇರಲಿ ಎಚ್ಚರ- ಪೊಲೀಸರ ವಾರ್ನಿಂಗ್

ಟಿಕೆಟ್ ಖರೀದಿ ಸಂದರ್ಭದಲ್ಲಿ ವಂಚನೆಗಳು ನಡೆಯುವ ಸಾಧ್ಯತೆಯಿದ್ದು, ನಕಲಿ ಲಿಂಕ್ ಗಳು ಅಥವಾ ಕೊನೆ ಕ್ಷಣದ ವ್ಯವಹಾರದ ವಂಚನೆಗಳ ಜಾಲಕ್ಕೆ ಬೀಳದಿರಿ ಎಂದು ಈಶಾನ್ಯ ವಿಭಾಗದ ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್(IPL )ಟೂರ್ನಿಗಳು ಸದ್ಯದಲ್ಲಿ ಆರಂಭ ಆಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಇಂದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿ, ಬಂದೋಬಸ್ತ್ ವ್ಯವಸ್ಥೆಗಳ ಕುರಿತು ಪರಿಶೀಲಿಸಿದರು.

ಸ್ಟ್ಯಾಂಡ್‌ಗಳು, ಹೋಲ್ಡಿಂಗ್ ಏರಿಯಾ ಮತ್ತಿತರ ಇತರ ಸ್ಥಳಗಳಲ್ಲಿ ಭದ್ರತೆ ಕುರಿತು KSCA, DNA, NDA ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಈ ಮಧ್ಯೆ ಟಿಕೆಟ್ ಖರೀದಿ ಸಂದರ್ಭದಲ್ಲಿ ವಂಚನೆಗಳು ನಡೆಯುವ ಸಾಧ್ಯತೆಯಿದ್ದು, ನಕಲಿ ಲಿಂಕ್ ಗಳು ಅಥವಾ ಕೊನೆ ಕ್ಷಣದ ವ್ಯವಹಾರದ ವಂಚನೆಗಳ ಜಾಲಕ್ಕೆ ಬೀಳದಿರಿ ಎಂದು ಈಶಾನ್ಯ ವಿಭಾಗದ ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಐಪಿಎಲ್ ನ ಜ್ವರ ಹೆಚ್ಚಾಗಿದೆ. ಅದರೊಂದಿಗೆ ಟಿಕೆಟ್ ಸ್ಕ್ಯಾಮ್ ನ ವಂಚನೆಗಳು ಕೂಡ ಹೆಚ್ಚಾಗುತ್ತಿದೆ. ನಕಲಿ ಲಿಂಕ್ ಗಳು ಅಥವಾ ಕೊನೆ ಕ್ಷಣದ ವ್ಯವಹಾರದ ವಂಚನೆಗಳ ಜಾಲಕ್ಕೆ ಬೀಳದಿರಿ! ಐಪಿಎಲ್ ಟಿಕೆಟ್ ಗಳನ್ನ ಕೇವಲ ಅಧಿಕೃತ ಮೂಲಗಳ ಮುಖೇನ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ನೆನಪಿರಲಿ! ನೀವು ಹಣ ಪಾವತಿಸುವ ಮುನ್ನ ಒಂದೊಮ್ಮೆ ಪರಿಶೀಲಿಸಿ. ತುರ್ತು ಸಂದರ್ಭಗಳಲ್ಲಿ 112 ಸಂಖ್ಯೆಗೆ ಕರೆ ಮಾಡಿ, ದೂರನ್ನು ವರದಿ ಮಾಡಿ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET-UG 2026 ಪ್ರಶ್ನೆ ಪತ್ರಿಕೆ ಲೀಕ್ ಕಿಂಗ್ ಪಿನ್, ಪುಣೆಯ ಕೆಮಿಸ್ಟ್ರಿ 'ಲೆಕ್ಚರರ್' ಬಂಧಿಸಿದ ಸಿಬಿಐ!

ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ: ಅಕ್ಟೋಬರ್ 7ಕ್ಕೆ ಅಂತಿಮ ಪಟ್ಟಿ ಪ್ರಕಟ! ಹೇಗೆ ಮಾಡಲಾಗುತ್ತದೆ?

IPL 2026: ನಿರ್ಣಾಯಕ ಹಂತದಲ್ಲಿ RCB ತಂಡ ಸೇರಿದ ಮತ್ತೊಬ್ಬ ಮಾರಕ ವೇಗಿ; ಬೆಂಗಳೂರು ತಂಡಕ್ಕೆ ಆನೆಬಲ

ಉದ್ಯೋಗವಿಲ್ಲದ ಕೆಲವರು ಜಿರಳೆಗಳ ರೀತಿ, ಮಾಧ್ಯಮ, ಕಾರ್ಯಕರ್ತರ ಸೋಗಿನಲ್ಲಿ ವ್ಯವಸ್ಥೆ ಮೇಲೆ ದಾಳಿ ಮಾಡ್ತಾರೆ: CJI ಸೂರ್ಯಕಾಂತ್

ಪ್ರಧಾನಿ ನರೇಂದ್ರ ಮೋದಿ ಬೆಂಗಾವಲು ಪಡೆಯಲ್ಲಿ 'ಸೂಪರ್ ಕಾರ್'ಗಳು; ವಿಶೇಷತೆ ಏನು?

SCROLL FOR NEXT