ಎಂ ಎಸ್ ಧೋನಿ  
ಕ್ರಿಕೆಟ್

IPL 2026: ಸಿಎಸ್ ಕೆ ಫ್ಯಾನ್ಸ್ ಗೆ ಶಾಕ್, ಕಾಲಿನ ಗಾಯದಿಂದ ಮೊದಲ 2 ವಾರ MS Dhoni ಪಂದ್ಯದಿಂದ ಔಟ್

ಟೂರ್ನಮೆಂಟ್‌ನ 19ನೇ ಆವೃತ್ತಿ ಇಂದು ಶನಿವಾರದಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಆಡಲಿದೆ.

ಭಾರತ ಕ್ರಿಕೆಟ್ ತಂಡದ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರಿಗೆ ಕಾಲಿನ (calf strain) ಗಾಯವಾಗಿದ್ದು, ಅವರು ಐಪಿಎಲ್ 2026ರ ಮೊದಲ ಎರಡು ವಾರಗಳಿಗೆ ಹೊರಗುಳಿಯಲಿದ್ದಾರೆ ಎಂದು ಫ್ರಾಂಚೈಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಟೂರ್ನಮೆಂಟ್‌ನ 19ನೇ ಆವೃತ್ತಿ ಇಂದು ಶನಿವಾರದಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಆಡಲಿದೆ.

CSK ತಂಡವು ಸೋಮವಾರ ತನ್ನ ಮೊದಲ ಪಂದ್ಯವನ್ನು ಮೊದಲ ಆವೃತ್ತಿಯ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ. ಐದು ಬಾರಿ ಪ್ರಶಸ್ತಿ ಗೆದ್ದಿರುವ ಮಹೇಂದ್ರ ಸಿಂಗ್ ಧೋನಿ ಅವರು ಆರಂಭಿಕ ಪಂದ್ಯಗಳನ್ನು ಮಿಸ್ ಮಾಡಿ ಮೊದಲ ಎರಡು ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ ಎಂದು ಸಿಎಸ್ ಕೆ ಹೇಳಿದೆ.

ಎಂಎಸ್ ಧೋನಿ ಅವರು ಈಗ ಕಾಲಿನ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರಣದಿಂದ ಅವರು ಐಪಿಎಲ್ 2026ರ ಮೊದಲ ಎರಡು ವಾರಗಳನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಫ್ರಾಂಚೈಸಿ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ, ತಂಡವು ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಅಭ್ಯಾಸ ಪಂದ್ಯ (ಮ್ಯಾಚ್ ಸಿಮ್ಯುಲೇಷನ್) ವಿಡಿಯೋವನ್ನು ಹಂಚಿಕೊಂಡಿತ್ತು. ಅದರಲ್ಲಿ ಧೋನಿ ಬ್ಯಾಟಿಂಗ್ ಮಾಡಿದ್ದು, ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಮಾಡಿದರು. 44 ವರ್ಷದ ಧೋನಿ ಹಲವು ಅದ್ಭುತ ಶಾಟ್‌ಗಳನ್ನು ಹೊಡೆದು ಚೆಂಡನ್ನು ಗಡಿ ದಾಟಿಸಿದ್ದರು.

ಧೋನಿಯವರು ಆಟದಿಂದ ಹೊರಗುಳಿದಿರುವ ಹಿನ್ನೆಲೆಯಲ್ಲಿ, ಆರಂಭಿಕ ಪಂದ್ಯಗಳಲ್ಲಿ CSK ತಂಡದ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಸಂಜು ಸ್ಯಾಮ್ಸನ್ ವಹಿಸುವ ಸಾಧ್ಯತೆ ಇದೆ. CSK ತಂಡವು ದಾಖಲೆ ಆರನೇ ಐಪಿಎಲ್ ಪ್ರಶಸ್ತಿಗಾಗಿ ಪ್ರಯತ್ನಿಸುತ್ತಿದೆ. ಇತ್ತ, ಮೊದಲು ರಾಜಸ್ಥಾನ ರಾಯಲ್ಸ್ ತಂಡದ ನಾಯಕರಾಗಿದ್ದ ಸ್ಯಾಮ್ಸನ್ ಅವರನ್ನು ಸಿಎಸ್ ಕೆ ತಂಡಕ್ಕೆ ವರ್ಗಾವಣೆ ಮಾಡಲಾಗಿದ್ದು, ರುತುರಾಜ್ ಗಾಯಕ್ವಾಡ್ ನೇತೃತ್ವದ ತಂಡವು ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ಸ್ಯಾಮ್ ಕರನ್ ಅವರನ್ನು ಮತ್ತೊಂದು ತಂಡಕ್ಕೆ ವರ್ಗಾವಣೆ ಮಾಡಿದೆ.

ಇಂಗ್ಲೆಂಡ್‌ನ ಆಲ್‌ರೌಂಡರ್ ಸ್ಯಾಮ್ ಕರನ್ ಗಾಯದ ಕಾರಣದಿಂದ ಐಪಿಎಲ್ 2026ರಿಂದ ಹೊರಗುಳಿದಿದ್ದಾರೆ. ಸೋಮವಾರ ಗೌಹಾಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಸಿಎಸ್ ಕೆ ಮುಖಾಮುಖಿಯಾಗುವಾಗ, ಸ್ಯಾಮ್ಸನ್ ಮತ್ತು ಜಡೇಜಾ ತಮ್ಮ ಹಳೆಯ ತಂಡಗಳ ವಿರುದ್ಧ ಆಡುತ್ತಿರುವುದು ಕುತೂಹಲಕರವಾಗಿರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಮೇಲೆ ನಿಯಂತ್ರಣ: ತೆರಿಗೆ ವ್ಯವಸ್ಥೆ ಜಾರಿಗೆ ಇರಾನ್ ಮುಂದು, ವಿರೋಧವಾಗಿ G7 ಒಕ್ಕೂಟ ರೂಪಿಸಲು ರೂಬಿಯೋ ಕರೆ

ಬೆಂಗಳೂರಿನಲ್ಲಿಂದು IPL 2026 ಉದ್ಘಾಟನೆ: ಕಾಲ್ತುಳಿತ ಘಟನೆ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಹೈ ಅಲರ್ಟ್, ಎಲ್ಲೆಡೆ ಬಿಗಿ ಭದ್ರತೆ

ತಮಿಳುನಾಡು ವಿಧಾನಸಭೆ ಚುನಾವಣೆ- 2026: ಸೀಟು ಹಂಚಿಕೆ ಬಗ್ಗೆ ಅಸಮಾಧಾನ; ಸ್ಪರ್ಧಿಸಲು ಅಣ್ಣಾಮಲೈ ಹಿಂದೇಟು; ಬಿಎಲ್ ಸಂತೋಷ್ ಸಭೆಗೆ ಗೈರು!

ಬಾಲೇಂದ್ರ ಶಾ ಪದಗ್ರಹಣದ ಬೆನ್ನಲ್ಲೇ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅರೆಸ್ಟ್‌

ನಮ್ಮ ರಾಜಕೀಯ ಸಂಸ್ಕೃತಿ ಎಷ್ಟು ಕೆಳಮಟ್ಟಕ್ಕೆ ಇಳಿದಿದೆ: ದೇಶಕ್ಕೆ ಸೇವೆ ಮಾಡಿದವರು ತಲೆಬಾಗಬೇಕೆ? ಸೋಷಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಫೋಟೋ!

SCROLL FOR NEXT