ರೋಹಿತ್ ಶರ್ಮಾ - ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

MI ನಾಯಕನಾಗಿ ಮತ್ತೆ ರೋಹಿತ್ ಶರ್ಮಾ?; ಊಹಾಪೋಹಗಳಿಗೆ ಕಾರಣವಾದ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಅನುಪಸ್ಥಿತಿ!

ಇಬ್ಬರೂ ಆಟಗಾರರು ಲಭ್ಯವಿಲ್ಲದಿದ್ದರೆ, ರೋಹಿತ್ ಶರ್ಮಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ MI ತಂಡವನ್ನು ಮುನ್ನಡೆಸುತ್ತಾರೆಯೇ? ಎನ್ನುವ ವದಂತಿಗಳು ಕೇಳಿಬರುತ್ತಿವೆ.

ಐಪಿಎಲ್ ಪ್ಲೇಆಫ್ ಹಾದಿ ಕಠಿಣವಾಗಿರುವ ಈ ಹೊತ್ತಿನಲ್ಲಿ ಮುಂಬೈ ಇಂಡಿಯನ್ಸ್ (MI) ಇದೀಗ ಮತ್ತೊಂದು ವಿಶಿಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ತಂಡವು ಆಡಿರುವ 10 ಪಂದ್ಯಗಳಲ್ಲಿ ಕೇವಲ ಮೂರರಲ್ಲಿ ಗೆಲುವು ಸಾಧಿಸಿದ್ದು, ಐಪಿಎಲ್ 2026ರ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಉಳಿದ ನಾಲ್ಕು ಪಂದ್ಯಗಳಲ್ಲಿನ ಗೆಲುವುಗಳು ಐಪಿಎಲ್ 2026ರ ಪ್ಲೇಆಫ್‌ಗೆ ಅರ್ಹತೆ ಪಡೆಯಲು ಅತ್ಯಂತ ನಿರ್ಣಾಯಕವಾಗಿದೆ. ಈಮಧ್ಯೆ, ನಾಯಕ ಹಾರ್ದಿಕ್ ಪಾಂಡ್ಯ ಗಾಯದಿಂದ ಬಳಲುತ್ತಿರುವುದರಿಂದ ತಂಡಕ್ಕೆ ಸಂಕಷ್ಟ ಎದುರಾಗಿದೆ.

ಬುಧವಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಕ್ಕಾಗಿ ಮುಂಬೈನಿಂದ ರಾಯ್‌ಪುರಕ್ಕೆ ಪ್ರಯಾಣ ಬೆಳೆಸಿದ ಮುಂಬೈ ಇಂಡಿಯನ್ಸ್ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯ ಮೊದಲ ಬ್ಯಾಚ್‌ನಲ್ಲಿ ಹಾರ್ದಿಕ್ ಪಾಂಡ್ಯ ಇರಲಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಬೆನ್ನು ನೋವಿನಿಂದಾಗಿ ಪಾಂಡ್ಯ ಸೋಮವಾರ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಎಂಐನ ಕೊನೆಯ ಪಂದ್ಯದಿಂದ ಹೊರಗುಳಿದಿದ್ದರು.

ಈ ಐಪಿಎಲ್ ಆವೃತ್ತಿಯಲ್ಲಿ ಆರೋಗ್ಯ ಸಮಸ್ಯೆಗಳಿಂದಾಗಿ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡಿರುವ ಪಾಂಡ್ಯ, ರಾಯ್‌ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ವಿರುದ್ಧ ಗೆಲ್ಲಲೇಬೇಕಾದ ಪಂದ್ಯಕ್ಕೆ ಹೇಗೆ ಸಜ್ಜಾಗುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ. ರಾಯ್‌ಪುರಕ್ಕೆ ಹೋದ ಎಂಐ ಆಟಗಾರರ ಮೊದಲ ಬ್ಯಾಚ್‌ನಲ್ಲಿ ರೋಹಿತ್ ಶರ್ಮಾ ಇದ್ದರು. ಆದಾಗ್ಯೂ, ಇಂಡಿಯಾ ಟುಡೇ ವರದಿ ಪ್ರಕಾರ, ಎಲ್‌ಎಸ್‌ಜಿ ವಿರುದ್ಧ ಎಂಐ ತಂಡದ ಹಂಗಾಮಿ ನಾಯಕರಾಗಿದ್ದ ಸೂರ್ಯಕುಮಾರ್ ಯಾದವ್ ಕೂಡ ಮೊದಲ ಬ್ಯಾಚ್‌ನಲ್ಲಿ ಇರಲಿಲ್ಲ ಎನ್ನಲಾಗಿದೆ.

ಈ ಸನ್ನಿವೇಶದಲ್ಲಿ, ಆಕಸ್ಮಿಕವಾಗಿ ಇಬ್ಬರೂ ಆಟಗಾರರು ಲಭ್ಯವಿಲ್ಲದಿದ್ದರೆ, ರೋಹಿತ್ ಶರ್ಮಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ MI ತಂಡವನ್ನು ಮುನ್ನಡೆಸುತ್ತಾರೆಯೇ? ಎನ್ನುವ ವದಂತಿಗಳು ಕೇಳಿಬರುತ್ತಿವೆ. ಇಂಡಿಯಾ ಟುಡೇ ವರದಿ ಪ್ರಕಾರ, ಮೇ 10ರ ಭಾನುವಾರದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್‌ನ ತಾತ್ಕಾಲಿಕ ನಾಯಕ SKY ಇಲ್ಲದಿರುವ ಸಾಧ್ಯತೆ ಹೆಚ್ಚಿದೆ' ಎನ್ನಲಾಗಿದೆ.

ಪಿಟಿಐ ವರದಿ ಪ್ರಕಾರ, ಮೇ 4 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯ ಮತ್ತು ಮೇ 10 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಮುಂದಿನ ಪಂದ್ಯದ ನಡುವೆ ಐದು ದಿನಗಳ ಅಂತರವಿದ್ದು, ಮುಂಬೈ ಇಂಡಿಯನ್ಸ್ ಆಟಗಾರರು ಮತ್ತು ಸಿಬ್ಬಂದಿ ಪ್ರತ್ಯೇಕ ಬ್ಯಾಚ್‌ಗಳಲ್ಲಿ ರಾಯ್‌ಪುರಕ್ಕೆ ತೆರಳಲಿದ್ದಾರೆ. ಆದಾಗ್ಯೂ, ಸಣ್ಣಪುಟ್ಟ ಸಮಸ್ಯೆ ಇದೆ ಎಂದು ಹೇಳಲಾಗುತ್ತದೆ ಮತ್ತು LSG ವಿರುದ್ಧದ ಪಂದ್ಯಕ್ಕೆ ಅವರಿಗೆ ವಿಶ್ರಾಂತಿ ನೀಡುವಂತೆ ಸೂಚಿಸಲಾಗಿದೆ ಎಂದು ತಂಡದ ಮೂಲವೊಂದು ತಿಳಿಸಿದೆ.

ಮುಂಬೈ ಮತ್ತು ರಾಯ್‌ಪುರದ ನಡುವೆ ಕೆಲವೇ ವಿಮಾನ ಆಯ್ಕೆಗಳು ಲಭ್ಯವಿರುವುದರಿಂದ, ವ್ಯವಸ್ಥಾಪನಾ ಕಾರಣಗಳೂ ಇವೆ. ಬುಧವಾರ ಪ್ರಯಾಣಿಸಿದ ಬ್ಯಾಚ್ ಗುರುವಾರ ರಾಯ್‌ಪುರದಲ್ಲಿ ತರಬೇತಿ ಪಡೆಯುವುದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಂಡಿಟ್ಟು ಸುವೇಂದು ಅಧಿಕಾರಿ ಆಪ್ತನ ಹತ್ಯೆ: CCTV ಪರಿಶೀಲನೆ; ಆರೋಪಿಗಳಿಗಾಗಿ ಪೊಲೀಸರ ತೀವ್ರ ಶೋಧ, ಉತ್ತರ 24 ಪರಗಣದಲ್ಲಿ ಪರಿಸ್ಥಿತಿ ಉದ್ವಿಗ್ನತೆ

ಅಮೇರಿಕಾ ಎಕಾನಮಿ ಕುಸಿತಕ್ಕೆ ದಿನಗಣನೆ, ಐಸಿಯುವಿನಲ್ಲಿ US ಆರ್ಥಿಕತೆ! (ಹಣಕ್ಲಾಸು)

Operation Sindoorಗೆ 1 ವರ್ಷ: 'ಭಾರತ ಯಾವುದನ್ನೂ ಮರೆಯಲ್ಲ-ಯಾರನ್ನೂ ಕ್ಷಮಿಸಲ್ಲ'; ಶತ್ರುರಾಷ್ಟ್ರಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತೀಯ ಸೇನೆ

TVK ವಿಜಯ್ ಗೆ ಮತ್ತೊಂದು ಹಿನ್ನಡೆ: ರಾತ್ರೋರಾತ್ರಿ ದಳಪತಿಗೆ ನೀಡಿದ್ದ ಭದ್ರತೆ ವಾಪಸ್!

ಹಾರ್ಮುಜ್ ನೌಕಾ ದಿಗ್ಬಂಧನ ಉಲ್ಲಂಘನೆ ಆರೋಪ; ಇರಾನ್ ಹಡಗಿನ ಮೇಲೆ ದಾಳಿ, ಅಮೆರಿಕಾ-ಇರಾನ್ ಸಂಘರ್ಷ ತೀವ್ರ..!

SCROLL FOR NEXT