ರವೀಂದ್ರ ಜಡೇಜಾ 
ಕ್ರಿಕೆಟ್

IPL 2026: GT ಬ್ಯಾಟರ್ ಜೋಸ್ ಬಟ್ಲರ್ ವಿಕೆಟ್ ಪಡೆದು 'You're In My Pocket' ಎಂದ ರವೀಂದ್ರ ಜಡೇಜಾ; ಸಂಭ್ರಮಾಚರಣೆ ವೈರಲ್!

ಜಿಟಿ ನೀಡಿದ 230 ರನ್ ಗುರಿ ಬೆನ್ನತ್ತಿದ ಆರ್‌ಆರ್ ತಂಡವು 152 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು 16.3 ಓವರ್‌ಗಳಲ್ಲಿಯೇ ಸೋಲೊಪ್ಪಿಕೊಂಡಿತು.

ಜೈಪುರದಲ್ಲಿ ನಡೆದ ಗುಜರಾತ್ ಟೈಟಾನ್ಸ್ (GT) ವಿರುದ್ಧದ ರಾಜಸ್ಥಾನ್ ರಾಯಲ್ಸ್ (RR) ಪಂದ್ಯದ ಸಮಯದಲ್ಲಿ ಸ್ಪಿನ್ನರ್ ರವೀಂದ್ರ ಜಡೇಜಾ ವಿಕೆಟ್ ಪಡೆದು ವಿಶೇಷವಾಗಿ ಸಂಭ್ರಮಾಚರಣೆ ಮಾಡಿದ್ದು ಎಲ್ಲರ ಗಮನ ಸೆಳೆಯಿತು. 14 ನೇ ಓವರ್‌ನಲ್ಲಿ ಜಿಟಿ ಬ್ಯಾಟರ್ ಜೋಸ್ ಬಟ್ಲರ್ ಅವರ ವಿಕೆಟ್ ಪಡೆದರು. ರವೀಂದ್ರ ಜಡೇಜಾ ಎಸೆತದಲ್ಲಿ ಡೊನೊವನ್ ಫೆರೇರಾ ಲಾಂಗ್-ಆಫ್‌ನಲ್ಲಿ ಕ್ಯಾಚ್ ಪಡೆದು ಬಟ್ಲರ್ ಅವರನ್ನು ಔಟ್ ಮಾಡಿದರು. ಔಟಾದ ನಂತರ, ಜಡೇಜಾ ಬಟ್ಲರ್ ಕಡೆಗೆ ಸನ್ನೆ ಮಾಡಿ ನಿಮ್ಮ ವಿಕೆಟ್ ಈಗ ನನ್ನ ಜೇಬಿನಲ್ಲಿದೆ ಎಂಬುವಂತೆ ಸನ್ನೆ ಮಾಡಿದರು.

ಶನಿವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್ 84 ರನ್ ಮತ್ತು ಸಾಯಿ ಸುದರ್ಶನ್ ಅವರ 55 ರನ್‌ಗಳ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತು. ಗಿಲ್ 44 ಎಸೆತಗಳಲ್ಲಿ ಒಂಬತ್ತು ಬೌಂಡರಿ ಮತ್ತು ಮೂರು ಸಿಕ್ಸರ್ ಸಹಾಯದಿಂದ 84 ರನ್ ಗಳಿಸಿದರು. ಸಾಯಿ ಸುದರ್ಶನ್ 36 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ 118 ರನ್‌ಗಳ ಆರಂಭಿಕ ಜೊತೆಯಾಟ ನಡೆಸಿದರು.

ಕೊನೆಯ ಹಂತದಲ್ಲಿ, ವಾಷಿಂಗ್ಟನ್ ಸುಂದರ್ (20 ಎಸೆತಗಳಲ್ಲಿ ಔಟಾಗದೆ 37) ಜಿಟಿ ಪರ ಉತ್ತಮ ಪ್ರದರ್ಶನ ನೀಡಿದರು.

ಈ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಆರಂಭದಲ್ಲಿಯೇ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. 16 ಎಸೆತಗಳಲ್ಲಿ 36 ರನ್ ಗಳಿಸಿದ ವೈಭವ್ ಸೂರ್ಯವಂಶಿ ಮತ್ತು 25 ಎಸೆತಗಳಲ್ಲಿ 38 ರನ್ ಗಳಿಸಿದ ರವೀಂದ್ರ ಜಡೇಜಾ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್ ಪ್ರಭಾವ ಬೀರುವಲ್ಲಿ ವಿಫಲವಾದರು.

ಅಂತಿಮವಾಗಿ ಆರ್‌ಆರ್ 152 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು 16.3 ಓವರ್‌ಗಳಲ್ಲಿಯೇ ಸೋಲೊಪ್ಪಿಕೊಂಡಿತು.

ಆರ್‌ಆರ್ ಪರ ಬಲಗೈ ಮಧ್ಯಮ ವೇಗಿ ಬ್ರಿಜೇಶ್ ಶರ್ಮಾ (2/47) ಬೌಲರ್‌ಗಳ ಪೈಕಿ ಉತ್ತಮ ಪ್ರದರ್ಶನ ನೀಡಿದರು. ಯಶ್ ರಾಜ್ ಪುಂಜಾ (1/37) ಮತ್ತು ರವೀಂದ್ರ ಜಡೇಜಾ (1/34) ತಲಾ ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

“ನನ್ನ ಹೃದಯದಲ್ಲಿ ನೆಲೆಸಿರುವ ಪ್ರೀತಿಯ ಜನರೇ…”: ಭಾವನಾತ್ಮಕ ಭಾಷಣದೊಂದಿಗೆ ಆಡಳಿತ ಆರಂಭಿಸಿದ ಸಿಎಂ ವಿಜಯ್, ಉಚಿತ ವಿದ್ಯುತ್ ಯೋಜನೆಗೆ ಅನುಮೋದನೆ..!

ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ರಾಜ್ಯಭಾರ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ, MGR-ಜಯಲಲಿತಾ ಬಳಿಕ CM ಗದ್ದುಗೆ ಏರಿದ ಮತ್ತೊಬ್ಬ ಸಿನಿ ದಿಗ್ಗಜ..!

Tamil Nadu swearing-in ceremony: ವಿಜಯ ಜೊತೆ 9 ಸಚಿವರು ಪ್ರಮಾಣ ವಚನ, ಚೆನ್ನೈಯಲ್ಲಿ ಕಾರ್ಯಕ್ರಮಕ್ಕೆ ಭಾರೀ ಭದ್ರತೆ-Video

D Sudhakar: ಚಿಕಿತ್ಸೆ ಫಲಕಾರಿಯಾಗದೆ ಸಚಿವ ಸುಧಾಕರ್ ನಿಧನ

ಯುದ್ಧಕ್ಕಿಂತ ಶಾಂತಿ ಮುಖ್ಯ: ಕುತೂಹಲ ಮೂಡಿಸಿದ ಪುಟಿನ್ ಹೇಳಿಕೆ, ಶೀಘ್ರದಲ್ಲೇ ರಷ್ಯಾ–ಉಕ್ರೇನ್‌ ಯುದ್ಧ ಅಂತ್ಯ..?

SCROLL FOR NEXT