ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

'ಏಕಾಂಗಿಯಾದ ಹಾರ್ದಿಕ್ ಪಾಂಡ್ಯ': PBKS ವಿರುದ್ಧದ ಪಂದ್ಯಕ್ಕೂ ಮುನ್ನ ಒಬ್ಬರೇ ಅಭ್ಯಾಸದಲ್ಲಿ ನಿರತರಾದ ಮುಂಬೈ ನಾಯಕ!

ಮುಂಬೈ ಇಂಡಿಯನ್ಸ್ (MI) ತಂಡವು ಮೇ 10ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಕೊನೆಯ ಬಾರಿಗೆ ಆಡಿತ್ತು. ಆದರೆ, ಕೊನೆಯ ಎಸೆತದಲ್ಲಿ ಸೋಲು ಅನುಭವಿಸಿ ಐಪಿಎಲ್ 2026ರ ಪ್ಲೇಆಫ್ ರೇಸ್‌‌ನಿಂದ ಅಧಿಕೃತವಾಗಿ ಹೊರಬಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಯಲ್ಲಿ ತಂಡದ ಕೊನೆಯ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ಮುಂಬೈ ಇಂಡಿಯನ್ಸ್ (MI) ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಗುರುವಾರ ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧದ ಪಂದ್ಯಕ್ಕೂ ಮುನ್ನ ನೆಟ್ಸ್‌ನಲ್ಲಿ ಏಕಾಂಗಿಯಾಗಿ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು. ಬೆನ್ನು ನೋವಿನಿಂದಾಗಿ ಹಾರ್ದಿಕ್, ಮುಂಬೈ ಇಂಡಿಯನ್ಸ್‌ನ ಕೊನೆಯ ಎರಡು ಪಂದ್ಯಗಳನ್ನು ಆಡಿರಲಿಲ್ಲ ಎನ್ನಲಾಗಿತ್ತು. ಪಂಜಾಬ್ ವಿರುದ್ಧದ ಪಂದ್ಯಕ್ಕೆ ಅವರ ಲಭ್ಯತೆಯ ಕುರಿತು ಫ್ರಾಂಚೈಸಿ ಇನ್ನೂ ಯಾವುದೇ ಮಾಹಿತಿ ನೀಡದಿದ್ದರೂ, ಆಲ್‌ರೌಂಡರ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್ (MI) ತಂಡವು ಮೇ 10ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಕೊನೆಯ ಬಾರಿಗೆ ಆಡಿತ್ತು. ಆದರೆ, ಕೊನೆಯ ಎಸೆತದಲ್ಲಿ ಸೋಲು ಅನುಭವಿಸಿ ಐಪಿಎಲ್ 2026ರ ಪ್ಲೇಆಫ್ ರೇಸ್‌‌ನಿಂದ ಅಧಿಕೃತವಾಗಿ ಹೊರಬಿತ್ತು. ಹಾರ್ದಿಕ್ ಪಂದ್ಯಕ್ಕೂ ಮುನ್ನ ತಂಡವನ್ನು ಸೇರಿಕೊಂಡರು. ಆದರೆ, ಪ್ಲೇಯಿಂಗ್ XI ನಲ್ಲಿ ಇರಲಿಲ್ಲ.

ಪಿಬಿಕೆಎಸ್ ವಿರುದ್ಧದ ಪಂದ್ಯಕ್ಕೂ ಮುನ್ನ, ಹಾರ್ದಿಕ್ ಚೇತರಿಸಿಕೊಳ್ಳುವ ಸ್ಪಷ್ಟ ಲಕ್ಷಣಗಳು ಕಂಡುಬಂದಿವೆ ಮತ್ತು ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದುದು ಕಂಡುಬಂದಿದೆ.

ಮುಂಬೈ ಇಂಡಿಯನ್ಸ್ ತಂಡದ ಉಳಿದ ಮೂರು ಪಂದ್ಯಗಳಲ್ಲಿ ಯುವ ಆಟಗಾರರಿಗೆ ಅವಕಾಶ ನೀಡುವಂತೆ ಭಾರತೀಯ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಫ್ರಾಂಚೈಸಿಯನ್ನು ಒತ್ತಾಯಿಸಿದ್ದಾರೆ.

'ಟಿ20 ಕ್ರಿಕೆಟ್‌ನಲ್ಲಿ ಏರಿಳಿತಗಳು ಸಂಭವಿಸುವುದು ಸಹಜ. ಈ ಆವೃತ್ತಿ ಮುಗಿದ ನಂತರ, ಏನು ತಪ್ಪಾಗಿದೆ ಎಂಬುದನ್ನು ಸರಿಯಾಗಿ ನಿರ್ಣಯಿಸಬೇಕಾಗುತ್ತದೆ. ಆದರೆ ಈ ಹಂತದಲ್ಲಿ, ಹಿರಿಯ ಆಟಗಾರರು ತಮ್ಮಲ್ಲಿರುವ ಎಲ್ಲವನ್ನೂ ನೀಡಿದ್ದಾರೆ ಎಂಬುದು ನನ್ನ ಅಭಿಪ್ರಾಯ. ಈಗ, ಉಳಿದ ಪಂದ್ಯಗಳಲ್ಲಿ ಕಿರಿಯ ಆಟಗಾರರಿಗೆ ಅವಕಾಶ ನೀಡಲು ಇದು ಸರಿಯಾದ ಅವಕಾಶವಾಗಿರಬಹುದು. ಈ ಯುವಕರು ಒತ್ತಡವನ್ನು ಹೇಗೆ ನಿಭಾಯಿಸುತ್ತಾರೆ ಮತ್ತು ಅವರು ತಮ್ಮಲ್ಲಿಟ್ಟಿರುವ ನಂಬಿಕೆಯನ್ನು ಸಮರ್ಥಿಸಿಕೊಳ್ಳಬಹುದೇ ಎಂಬುದನ್ನು ಫ್ರಾಂಚೈಸಿ ಅರ್ಥಮಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ' ಎಂದು ಅವರು ಸ್ಟಾರ್ ಸ್ಪೋರ್ಟ್ಸ್‌ನ 'ಅಮುಲ್ ಕ್ರಿಕೆಟ್ ಲೈವ್' ನಲ್ಲಿ ನಡೆದ ಚಾಟ್‌ನಲ್ಲಿ ಹೇಳಿದರು.

ಪಿಬಿಕೆಎಸ್ ವಿರುದ್ಧದ ಪಂದ್ಯ ಮುಂಬೈ ತಂಡಕ್ಕೆ ಅತ್ಯಂತ ಕಠಿಣವಾದರೂ, ಶ್ರೇಯಸ್ ಅಯ್ಯರ್ ನೇತೃತ್ವದ ಫ್ರಾಂಚೈಸಿ ಈ ಆವೃತ್ತಿಯಲ್ಲಿ ಸತತ ನಾಲ್ಕು ಸೋಲುಗಳನ್ನು ಅನುಭವಿಸಿರುವುದರಿಂದ ಗೆಲುವಿನ ಅವಶ್ಯಕತೆಯಿದೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರ-2ರಲ್ಲಿ ಸ್ಥಾನವನ್ನು ಪಡೆಯಲು ಪಂಜಾಬ್‌ಗೆ, ಮುಂಬೈ ವಿರುದ್ಧದ ಗೆಲುವು ನಿರ್ಣಾಯಕವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamil Nadu Assembly: ವಿಜಯ್ ವಿಶ್ವಾಸಮತ ಯಾಚನೆ, ಕಾಂಗ್ರೆಸ್, ಸಿಪಿಎಂ, ವಿಸಿಕೆ ಬೆಂಬಲ ಘೋಷಣೆ!

ಮಿತವ್ಯಯಕ್ಕೆ ಪ್ರಧಾನಿ ಮೋದಿ ಹೆಜ್ಜೆ: ಎಸ್‌ಪಿಜಿ ಭದ್ರತಾ ಪಡೆ ವಾಹನಗಳ ಸಂಖ್ಯೆ ಶೇ.50ರಷ್ಟು ಕಡಿತ,ಬಿಜೆಪಿ ಸಿಎಂಗಳಿಗೂ ಸೂಚನೆ, EV ಗೆ ಆದ್ಯತೆ

ಬೆಂಗಳೂರು: ಪ್ರಧಾನಿ ಮೋದಿ ಸಾಗುತ್ತಿದ್ದ ಮಾರ್ಗದಲ್ಲಿ ಟೈಮರ್ ಪತ್ತೆ! ದೊಡ್ಡ ಸಂಚಿನ ಶಂಕೆ

Gold Tariffs- ಚಿನ್ನ ಖರೀದಿಸಬೇಡಿ ಎಂದು ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಕೇಂದ್ರ ಕ್ರಮ: ಚಿನ್ನ-ಬೆಳ್ಳಿ ಆಮದು ಸುಂಕ ಶೇ.15ಕ್ಕೆ ಏರಿಕೆ

LOP ಅಂದ್ರೆ 'ರಬ್ಬರ್ ಸ್ಟ್ಯಾಂಪ್' ಅಲ್ಲ: CBI ನಿರ್ದೇಶಕರ ಆಯ್ಕೆ ಪ್ರಕ್ರಿಯೆ ವಿರುದ್ಧ ತಿರುಗಿಬಿದ್ದ ರಾಹುಲ್!

SCROLL FOR NEXT