ಕ್ರಿಕೆಟ್

ಒಂದಲ್ಲ 8 ಗೆಲುವು: 49 ಅಂತ ಕೆಣಕ್ಕಿದ್ದ KKR ಅನ್ನು ಸೋಲಿಸಿ ತಿರುಗೇಟು ನೀಡಿದ RCB ಫ್ರಾಂಚೈಸಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಲೀಗ್ ಹಂತದ ಅಂತ್ಯಕ್ಕೂ ಮುನ್ನವೇ ಲಯಕ್ಕೆ ಮರಳಿದೆ. ಬುಧವಾರ ನಡೆದ ಐಪಿಎಲ್‌ನ 57ನೇ ಪಂದ್ಯದಲ್ಲಿ ಆರ್‌ಸಿಬಿ, ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿದೆ.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಲೀಗ್ ಹಂತದ ಅಂತ್ಯಕ್ಕೂ ಮುನ್ನವೇ ಲಯಕ್ಕೆ ಮರಳಿದೆ. ಬುಧವಾರ ನಡೆದ ಐಪಿಎಲ್‌ನ 57ನೇ ಪಂದ್ಯದಲ್ಲಿ ಆರ್‌ಸಿಬಿ, ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿದೆ. ಈ ಗೆಲುವು ಬೆಂಗಳೂರು ತಂಡವನ್ನು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಕೊಂಡೊಯ್ದಿದೆ. ವಿರಾಟ್ ಕೊಹ್ಲಿ ಶತಕ ಗಳಿಸುವ ಮೂಲಕ ಆರ್‌ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಈ ಸೋಲಿನೊಂದಿಗೆ ಕೋಲ್ಕತ್ತಾ ನೈಟ್ ರೈಡರ್ಸ್‌ಗೆ ಪ್ಲೇಆಫ್‌ನ ಹಾದಿ ಮತ್ತೊಮ್ಮೆ ಕಷ್ಟಕರವಾಗಿದೆ. ಏತನ್ಮಧ್ಯೆ, ಆರ್‌ಸಿಬಿ ಪ್ಲೇಆಫ್‌ನಲ್ಲಿ ತನ್ನ ಸ್ಥಾನವನ್ನು ಬಹುತೇಕ ಭದ್ರಪಡಿಸಿಕೊಂಡಿದೆ. ಈ ಅವಮಾನಕರ ಸೋಲಿನ ನಂತರ, ಸಾಮಾಜಿಕ ಮಾಧ್ಯಮವು ಕೆಕೆಆರ್ ಬಗ್ಗೆ ಹಾಸ್ಯಾಸ್ಪದ ಮೀಮ್‌ಗಳಿಂದ ತುಂಬಿದೆ.

ಇನ್ನು 19ನೇ ಸೀಸನ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೂ ಮುನ್ನ KKR ವೀಡಿಯೊವೊಂದನ್ನು ಬಿಡುಗಡೆ ಮಾಡಿತ್ತು. ಅಲ್ಲಿ ಟ್ರಾಫಿಕ್ ಸಿಗ್ನಲ್ ಅನ್ನು ಕೆಂಪು ದೀಪದೊಂದಿಗೆ ತೋರಿಸಲಾಗಿದ್ದು ಸಿಗ್ನಲ್‌ನಲ್ಲಿರುವ ಟೈಮರ್ 49 ಸಂಖ್ಯೆಯನ್ನು ಪ್ರಮುಖವಾಗಿ ತೋರಿಸುತ್ತದೆ. ಐಪಿಎಲ್ ಇತಿಹಾಸದಲ್ಲಿ 49 ಗಮನಾರ್ಹ ಸಂಖ್ಯೆಯಾಗಿದೆ. ಏಕೆಂದರೆ ಇದು ಲೀಗ್‌ನಲ್ಲಿ ಆರ್‌ಸಿಬಿ ಕೆಕೆಆರ್ ವಿರುದ್ಧ ದಾಖಲಿಸಿದ ಅತ್ಯಂತ ಕಡಿಮೆ ತಂಡದ ಮೊತ್ತವನ್ನು ಪ್ರತಿನಿಧಿಸುತ್ತದೆ. ಇದು ಅಂದು ಎರಡು ಜನಪ್ರಿಯ ಫ್ರಾಂಚೈಸಿಗಳ ಅಭಿಮಾನಿಗಳ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿತ್ತು. ಆದರೆ ಇಂದು ಇದಕ್ಕೆ ಆರ್ ಸಿಬಿ ತಿರುಗೇಟು ನೀಡಿದೆ. ಅದೇ ರೀತಿಯ ಟ್ರಾಫಿಕ್ ಸಿಗ್ನಲ್ ನಲ್ಲಿ ಆರ್ ಸಿಬಿ ಬಸ್ ಯಾವುದೇ ಅಡೆತಡೆ ಇಲ್ಲದೆ ಮುನ್ನುಗುತ್ತಿರುವಂತೆ ತೋರಿಸಲಾಗಿದೆ. ಅಲ್ಲದೆ ಹಸಿರು ದೀಪದಲ್ಲಿ 16 ಪಾಯಿಂಟ್ಸ್ ಎಂದು ತೋರಿಸುವ ಮೂಲಕ ಕೆಕೆಆರ್ ನ ಸ್ಥಾನವನ್ನು ನೆನಪಿಸಿದೆ.

ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 192 ರನ್ ಗಳಿಸಿದ್ದು ಈ ರನ್ ಗುರಿ ಬೆನ್ನಟ್ಟಿದ RCB 194 ರನ್ ಬಾರಿಸಿ ಗೆಲುವಿನ ನಗೆ ಬೀರಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ