ಶ್ರೇಯಸ್ ಅಯ್ಯರ್ - ಜಿತೇಶ್ ಶರ್ಮಾ 
ಕ್ರಿಕೆಟ್

IPL 2026: ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ; ರಜತ್ ಪಾಟೀದಾರ್ ಔಟ್; ಜಿತೇಶ್ ಶರ್ಮಾ RCB ನಾಯಕ!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಆಡಿರುವ 12 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಸಾಧಿಸುವ ಮೂಲಕ ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ.

ಭಾನುವಾರ HPCA ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಸತತ ಐದು ಸೋಲುಗಳಿಂದ ಕಂಗೆಟ್ಟಿರುವ ಪಂಜಾಬ್ ತಂಡಕ್ಕೆ ಈ ಗೆಲುವು ಅನಿವಾರ್ಯವಾಗಿದ್ದು, ಪ್ಲೇಆಫ್‌ಗೆ ತಲುಪಲು ಉಳಿದಿರುವ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕಾಗಿದೆ.

ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಆಡಿರುವ 12 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಸಾಧಿಸುವ ಮೂಲಕ ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ. ಪ್ಲೇಆಫ್‌ನಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಈ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ.

ಪಂಜಾಬ್ ತಂಡ ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆಗಳನ್ನು ಮಾಡಿದ್ದು, ಹರ್‌ಪ್ರೀತ್ ಬ್ರಾರ್ ಮತ್ತು ಲಾಕಿ ಫರ್ಗುಸನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಮತ್ತೊಂದೆಡೆ, ರಜತ್ ಪಾಟೀದಾರ್ ಅನುಪಸ್ಥಿತಿಯಲ್ಲಿ ಈ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಜಿತೇಶ್ ಶರ್ಮಾ ಮುನ್ನಡೆಸುತ್ತಿದ್ದಾರೆ. ಜೇಕಬ್ ಡಫಿ ಹೊರಗುಳಿದಿದ್ದು, ಸುಯಾಶ್ ಶರ್ಮಾ ಮತ್ತು ರೊಮಾರಿಯೊ ಶೆಫರ್ಡ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ಈ ಆವೃತ್ತಿಯಲ್ಲಿ ಆರ್‌ಸಿಬಿಯ ಅತ್ಯುತ್ತಮ ಪ್ರದರ್ಶನ ನೀಡುವವರಲ್ಲಿ ರಜತ್ ಪಾಟೀದಾರ್ ಒಬ್ಬರಾಗಿದ್ದು, 10 ಇನಿಂಗ್ಸ್‌ಗಳಲ್ಲಿ 195 ಸ್ಟ್ರೈಕ್ ರೇಟ್‌ನಲ್ಲಿ 326 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಅರ್ಧಶತಕಗಳು ಸೇರಿವೆ. ರಜತ್ ಪಾಟೀದಾರ್ ಬದಲಿಗೆ ವೆಂಕಟೇಶ್ ಅಯ್ಯರ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ಪಂದ್ಯದಲ್ಲಿ ಹೊರಗುಳಿದಿದ್ದ ರೊಮಾರಿಯೋ ಶೆಫರ್ಡ್ ಕೂಡ ತಂಡಕ್ಕೆ ಮರಳಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್ / ನಾಯಕ), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಾಶ್ ಹೇಜಲ್‌ವುಡ್, ಸುಯಾಶ್ ಶರ್ಮಾ.

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI

ಪ್ರಿಯಾಂಶ್ ಆರ್ಯ, ಪ್ರಭ್ಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ಸೂರ್ಯಾಂಶ್ ಶೆಡ್ಜ್, ಶಶಾಂಕ್ ಸಿಂಗ್, ಅಜ್ಮತುಲ್ಲಾ ಒಮರ್ಜಾಯ್, ಹರ್ಪ್ರೀತ್ ಬ್ರಾರ್, ಲಾಕಿ ಫರ್ಗುಸನ್, ಅರ್ಶದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'