ಭಾನುವಾರ HPCA ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಸತತ ಐದು ಸೋಲುಗಳಿಂದ ಕಂಗೆಟ್ಟಿರುವ ಪಂಜಾಬ್ ತಂಡಕ್ಕೆ ಈ ಗೆಲುವು ಅನಿವಾರ್ಯವಾಗಿದ್ದು, ಪ್ಲೇಆಫ್ಗೆ ತಲುಪಲು ಉಳಿದಿರುವ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕಾಗಿದೆ.
ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಆಡಿರುವ 12 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಸಾಧಿಸುವ ಮೂಲಕ ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ. ಪ್ಲೇಆಫ್ನಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಈ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ.
ಪಂಜಾಬ್ ತಂಡ ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆಗಳನ್ನು ಮಾಡಿದ್ದು, ಹರ್ಪ್ರೀತ್ ಬ್ರಾರ್ ಮತ್ತು ಲಾಕಿ ಫರ್ಗುಸನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಮತ್ತೊಂದೆಡೆ, ರಜತ್ ಪಾಟೀದಾರ್ ಅನುಪಸ್ಥಿತಿಯಲ್ಲಿ ಈ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಜಿತೇಶ್ ಶರ್ಮಾ ಮುನ್ನಡೆಸುತ್ತಿದ್ದಾರೆ. ಜೇಕಬ್ ಡಫಿ ಹೊರಗುಳಿದಿದ್ದು, ಸುಯಾಶ್ ಶರ್ಮಾ ಮತ್ತು ರೊಮಾರಿಯೊ ಶೆಫರ್ಡ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿದ್ದಾರೆ.
ಈ ಆವೃತ್ತಿಯಲ್ಲಿ ಆರ್ಸಿಬಿಯ ಅತ್ಯುತ್ತಮ ಪ್ರದರ್ಶನ ನೀಡುವವರಲ್ಲಿ ರಜತ್ ಪಾಟೀದಾರ್ ಒಬ್ಬರಾಗಿದ್ದು, 10 ಇನಿಂಗ್ಸ್ಗಳಲ್ಲಿ 195 ಸ್ಟ್ರೈಕ್ ರೇಟ್ನಲ್ಲಿ 326 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಅರ್ಧಶತಕಗಳು ಸೇರಿವೆ. ರಜತ್ ಪಾಟೀದಾರ್ ಬದಲಿಗೆ ವೆಂಕಟೇಶ್ ಅಯ್ಯರ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ಪಂದ್ಯದಲ್ಲಿ ಹೊರಗುಳಿದಿದ್ದ ರೊಮಾರಿಯೋ ಶೆಫರ್ಡ್ ಕೂಡ ತಂಡಕ್ಕೆ ಮರಳಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ
ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್ / ನಾಯಕ), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಾಶ್ ಹೇಜಲ್ವುಡ್, ಸುಯಾಶ್ ಶರ್ಮಾ.
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಪ್ರಿಯಾಂಶ್ ಆರ್ಯ, ಪ್ರಭ್ಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ಸೂರ್ಯಾಂಶ್ ಶೆಡ್ಜ್, ಶಶಾಂಕ್ ಸಿಂಗ್, ಅಜ್ಮತುಲ್ಲಾ ಒಮರ್ಜಾಯ್, ಹರ್ಪ್ರೀತ್ ಬ್ರಾರ್, ಲಾಕಿ ಫರ್ಗುಸನ್, ಅರ್ಶದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.