ಮಹೇಂದ್ರ ಸಿಂಗ್ ಧೋನಿ  
ಕ್ರಿಕೆಟ್

IPL 2026: ಕೊನೆಗೂ ಚೆಪಾಕ್ ಮೈದಾನದಲ್ಲಿ ಕಾಣಿಸಿಕೊಂಡ ಧೋನಿ! ಅಭಿಮಾನಿಗಳೊಂದಿಗೆ ಸೆಲ್ಫಿ; ವಿದಾಯದ ಸೂಚನೆಯೇ?

ಧೋನಿ ಇನ್ನೂ ತಮ್ಮ ಭವಿಷ್ಯದ ಬಗ್ಗೆ ಯಾವುದೇ ಹೇಳಿಕೆ ನೀಡದಿದ್ದರೂ, ಐಪಿಎಲ್ 2026 ರ ಸೀಸನ್ ಅವರ ಕೊನೆಯದಾಗಬಹುದು ಎಂಬ ಊಹಾಪೋಹಗಳಿವೆ.

ಚೆನ್ನೈ: ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ವೇಳೆ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಂಡರು. ಚೆನ್ನೈ ಸೂಪರ್ ಕಿಂಗ್ಸ್‌ ಗೆ ಇದು ಕೊನೆಯ ತವರು ಪಂದ್ಯವಾಗಿತ್ತು.

ಸುರೈಶ್ ರೈನಾ ಜೊತೆಗೆ ಕಾಣಿಸಿಕೊಂಡ ಧೋನಿ, ಕ್ರೀಡಾಂಗಣದ ಸುತ್ತಲೂ ಒಂದು ಸುತ್ತು ಹಾಕಿ ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಂಡರು. ಧೋನಿ ಅವರ ಐಪಿಎಲ್ ವೃತ್ತಿ ಜೀವನದ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ. ಆದರೆ ಸೋಮವಾರ, ಧೋನಿ ಆಟಗಾರರೊಂದಿಗೆ ಮಾತುಕತೆ ನಡೆಸುವಾಗ ಶಾಂತವಾಗಿ ಕಾಣುತ್ತಿದ್ದರು. ಸನ್‌ರೈಸರ್ಸ್ ಹೈದರಾಬಾದ್ ಆಟಗಾರರು ಸಹ ಭಾರತದ ದಿಗ್ಗಜ ಆಟಗಾರನಿಗೆ ಗೌರವ ನೀಡಿದರು.

ಧೋನಿ ಇನ್ನೂ ತಮ್ಮ ಭವಿಷ್ಯದ ಬಗ್ಗೆ ಯಾವುದೇ ಹೇಳಿಕೆ ನೀಡದಿದ್ದರೂ, ಐಪಿಎಲ್ 2026 ರ ಸೀಸನ್ ಅವರ ಕೊನೆಯದಾಗಬಹುದು ಎಂಬ ಊಹಾಪೋಹಗಳಿವೆ.

ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಆಗಿರುವುದರಿಂದ ಮತ್ತು ಫ್ರಾಂಚೈಸಿ ಯುವ ಆಟಗಾರರ ಸುತ್ತ ಹೊಸ ತಂಡ ಕಟ್ಟಲು ಎದುರು ನೋಡುತ್ತಿರುವುದರಿಂದ, ಮುಂದಿನ ಐಪಿಎಲ್ ನಲ್ಲಿ ಧೋನಿ ಬಹುತೇಕ ಮರಳುವ ಸಾಧ್ಯತೆ ಇದ್ದಂತಿಲ್ಲ. ಸನ್‌ರೈಸರ್ಸ್ ವಿರುದ್ಧದ ಪಂದ್ಯದ ನಂತರ ಅವರು ನಡೆದುಕೊಂಡ ರೀತಿ ಇದೇ ಅವರ ಕೊನೆಯ ಪಂದ್ಯ ಎನಿಸುತ್ತಿದೆ.

ಸೋಮವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಇಶಾನ್ ಕಿಶನ್ ಐದು ವಿಕೆಟ್‌ಗಳ ಜಯ ಸಾಧಿಸಿದ ನಂತರ ಸನ್‌ರೈಸರ್ಸ್ ಹೈದರಾಬಾದ್ ಇಂಡಿಯನ್ ಪ್ರೀಮಿಯರ್ ಲೀಗ್ ಪ್ಲೇಆಫ್‌ಗೆ ಅರ್ಹತೆ ಪಡೆಯಿತು. ಹೈದರಾಬಾದ್‌ನ ಈ ಗೆಲುವಿನಿಂದಾಗಿ ಗುಜರಾತ್ ಟೈಟಾನ್ಸ್ ನಾಲ್ಕು ತಂಡಗಳ ಪ್ಲೇಆಫ್‌ನಲ್ಲಿ ಸ್ಥಾನ ಪಡೆದುಕೊಂಡಿತು.

ಹಾಲಿ ಚಾಂಪಿಯನ್ ಮತ್ತು ಲೀಗ್‌ನಲ್ಲಿ ಅಗ್ರಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈಗಾಗಲೇ ಅರ್ಹತೆ ಗಳಿಸಿದೆ, ಅಂದರೆ ನಾಕೌಟ್‌ನಲ್ಲಿ ಕೇವಲ ಒಂದು ಸ್ಥಾನ ಮಾತ್ರ ಬಾಕಿ ಉಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!