ಕನ್ನಡಿಗ ಕೆ ಎಲ್ ರಾಹುಲ್ 
ಕ್ರಿಕೆಟ್

ಲಂಕಾ ವಿರುದ್ಧ ಏಕದಿನ, ಟೆಸ್ಟ್​ ತಂಡ ಪ್ರಕಟ: ರಿಷಭ್ ಪಂತ್‌ಗೆ ಕೊಕ್; ಕನ್ನಡಿಗ ಕೆ.ಎಲ್ ರಾಹುಲ್ ಉಪನಾಯಕ

ಟೆಸ್ಟ್ ತಂಡದ ಉಪನಾಯಕ ಸ್ಥಾನದಿಂದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಅವರನ್ನು ಕೈಬಿಡಲಾಗಿದೆ.

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಒಂದು ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಿದೆ.

ಏಕದಿನ ಹಾಗೂ ಟೆಸ್ಟ್ ಎರಡೂ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ ಮುಂದುವರೆದರೆ, ಟೆಸ್ಟ್ ತಂಡದ ಉಪನಾಯಕನಾಗಿ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನು ಏಕದಿನ ತಂಡದ ವೈಸ್ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.

ಟೆಸ್ಟ್ ತಂಡದ ಉಪನಾಯಕ ಸ್ಥಾನದಿಂದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಅವರನ್ನು ಕೈಬಿಡಲಾಗಿದೆ.

ಏಕದಿನ ತಂಡದಲ್ಲಿ ಹೊಸಮುಖವಾಗಿ ಮೂವರು ಆಟಗಾರರು ಕಾಣಿಸಿಕೊಂಡಿದ್ದು, ಟೆಸ್ಟ್ ತಂಡದಲ್ಲಿ ಇಬ್ಬರು ಆಟಗಾರರು ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.

ಟೆಸ್ಟ್ ತಂಡದಲ್ಲಿ ಹೊಸ ಮುಖಗಳು

ಮಾನವ್ ಸುತಾರ್ (ಸ್ಪಿನ್ನರ್)

ಗುರ್ನೂರ್ ಬ್ರಾರ್ (ವೇಗದ ಬೌಲರ್).

ಏಕದಿನ ತಂಡದಲ್ಲಿ ಹೊಸ ಮುಖಗಳು

ಗುರ್ನೂರ್ ಬ್ರಾರ್ (ವೇಗದ ಬೌಲರ್)

ಪ್ರಿನ್ಸ್ ಯಾದವ್ (ವೇಗದ ಬೌಲರ್)

ಹರ್ಷ್ ದುಬೆ (ಸ್ಪಿನ್ನರ್)

ಟೆಸ್ಟ್ ತಂಡ

ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಬಿ. ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡ್ಡಿಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್.

ಏಕದಿನ ತಂಡ

ಶುಭ್​ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!