ಜೋಫ್ರಾ ಆರ್ಚರ್ 
ಕ್ರಿಕೆಟ್

IPL 2026: 'ಪಂಜಾಬ್ ಕಿಂಗ್ಸ್ ತಂಡಕ್ಕೆ ಆಗಿದ್ದು ನಮಗೂ ಆಗಬಾರದು': ರಾಜಸ್ಥಾನ್ ರಾಯಲ್ಸ್ ವೇಗಿ ಜೋಫ್ರಾ ಆರ್ಚರ್

ಚೋಫ್ರಾ ಆರ್ಚರ್ ತಮ್ಮ ಮೊದಲ ಮೂರು ಓವರ್‌ಗಳಲ್ಲಿಯೇ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅವರನ್ನು ಔಟ್ ಮಾಡಿ 244 ರನ್‌ಗಳ ದೊಡ್ಡ ಗುರಿಯನ್ನು ಬೆನ್ನಟ್ಟುತ್ತಿದ್ದ SRHಗೆ ಶಾಕ್ ನೀಡಿದರು.

ಚಂಡೀಗಢ: ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವನ್ನು ಸೋಲಿಸಿದ ರಾಜಸ್ಥಾನ್ ರಾಯಲ್ಸ್ (RR) ತಂಡಕ್ಕೆ ಪವರ್‌ಪ್ಲೇ ಒಳಗೆ ವೇಗಿ ಜೋಫ್ರಾ ಆರ್ಚರ್ ಅವರು ಪಡೆದ ಮೂರು ಪ್ರಮುಖ ವಿಕೆಟ್‌ಗಳು ನಿರ್ಣಾಯಕವಾಗಿದ್ದವು.

ಗೆಲುವಿನ ನಂತರ ಮಾತನಾಡಿದ ಆರ್ಚರ್, 'ಅಂಕಿಅಂಶಗಳನ್ನು ಹೊರತುಪಡಿಸಿ, ನಾನು ಸಾಕಷ್ಟು ಚೆನ್ನಾಗಿ ಬೌಲಿಂಗ್ ಮಾಡಿದ್ದೇನೆ ಮತ್ತು ಎಲ್ಲ ಬೌಲರ್‌ಗಳು ಚೆನ್ನಾಗಿ ಬೌಲಿಂಗ್ ಮಾಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ನಾವು ನಮ್ಮ ಯೋಜನೆಗಳಿಗೆ ಬದ್ಧರಾಗಿದ್ದೆವು, ನಾವು ನಮ್ಮ ಪ್ರಯತ್ನಗಳಿಗೆ ಬದ್ಧರಾಗಿದ್ದೆವು ಮತ್ತು ಹೀಗಾಗಿ ಇಂದು ರಾತ್ರಿ ನಮಗೆ ಪ್ರತಿಫಲ ಸಿಕ್ಕಿತು' ಎಂದರು.

ಚೋಫ್ರಾ ಆರ್ಚರ್ ತಮ್ಮ ಮೊದಲ ಮೂರು ಓವರ್‌ಗಳಲ್ಲಿಯೇ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅವರನ್ನು ಔಟ್ ಮಾಡಿ 244 ರನ್‌ಗಳ ದೊಡ್ಡ ಗುರಿಯನ್ನು ಬೆನ್ನಟ್ಟುತ್ತಿದ್ದ SRHಗೆ ಶಾಕ್ ನೀಡಿದರು.

ಮೊದಲ ಓವರ್‌ನ ಎರಡನೇ ಎಸೆತದಲ್ಲಿ ಅಭಿಷೇಕ್ ಶರ್ಮಾ ಅವರ ವಿಕೆಟ್ ಪಡೆದ ಅವರು, 'ಪವರ್‌ಪ್ಲೇನಲ್ಲಿ ಹೆಚ್ಚು ವಿಕೆಟ್‌ಗಳನ್ನು ಪಡೆಯುವ ತಂಡವು ಸಾಮಾನ್ಯವಾಗಿ ಪಂದ್ಯವನ್ನು ಗೆಲ್ಲುತ್ತದೆ. ಆದ್ದರಿಂದ ಇದು ಬಹಳಷ್ಟು ಒತ್ತಡ ಹೊಂದಿರುತ್ತದೆ. ಆದರೆ, ನಾನು ಅದನ್ನು ಸ್ವೀಕರಿಸುತ್ತೇನೆ ಮತ್ತು ತಂಡಕ್ಕಾಗಿ ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ' ಎಂದರು.

ಈಗ, ರಾಜಸ್ಥಾನ್ ರಾಯಲ್ಸ್ ತಂಡವು ತಮ್ಮ ಎರಡನೇ ಐಪಿಎಲ್ ಪ್ರಶಸ್ತಿ ಗೆಲುವಿಗೆ ಕೇವಲ ಇನ್ನೆರಡು ಪಂದ್ಯಗಳಲ್ಲಿ ಗೆಲ್ಲಬೇಕಾಗಿದೆ. ಫೈನಲ್ ಪ್ರವೇಶಿಸಲು ಕ್ವಾಲಿಫೈಯರ್ 2ನಲ್ಲಿ ಗುಜರಾತ್ ಟೈಟಾನ್ಸ್ (GT) ಅನ್ನು ಸೋಲಿಸಬೇಕಾಗಿದೆ. ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಎದುರಿಸಲಿದೆ.

'ತಮ್ಮ ತಂಡವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಆವೃತ್ತಿಯ ಕೊನೆಯಲ್ಲಿ ಕುಸಿತ ಕಂಡ ಬಗ್ಗೆ ಎಚ್ಚರದಿಂದಿದ್ದೇವೆ. ತಮ್ಮ ಮೊದಲ ಏಳು ಪಂದ್ಯಗಳಲ್ಲಿ ಅಜೇಯ ಓಟ ಮುಂದುವರಿಸಿದ ನಂತರ, ಸತತ ಆರು ಸೋಲುಗಳನ್ನು ಕಂಡ ಪಂಜಾಬ್ ಕಿಂಗ್ಸ್ (PBKS) ಪ್ಲೇಆಫ್‌ಗೆ ಅರ್ಹತೆ ಪಡೆಯಲಿಲ್ಲ. ಈ ರೀತಿಯನ್ನು ನಾವು ಪುನರಾವರ್ತಿಸಲು ಬಯಸುವುದಿಲ್ಲ' ಎಂದು ಹೇಳಿದರು.

ಪಂದ್ಯಾವಳಿಯಲ್ಲಿ ಮುಂದಿನ ಯೋಜನೆಗಳ ಕುರಿತು ಮಾತನಾಡಿದ ಅವರು, 'ಪ್ರತಿಯೊಂದು ಪಂದ್ಯವನ್ನೂ ನಾವು ಒಂದು ಪಂದ್ಯವೆಂದೇ ನೋಡುತ್ತೇವೆ. ನಾವು ನಮ್ಮ ಉತ್ತುಂಗದಲ್ಲಿದ್ದೇವೆ ಎಂದು ನಾನು ಭಾವಿಸುತ್ತೇನೆ. ಆದರೆ, ಅದನ್ನು ಹೇಳಲು ಬಯಸುವುದಿಲ್ಲ ಮತ್ತು ನಾವು ಸರಿಯಾದ ಸಮಯದಲ್ಲಿ ಸರಿಯಾದ ದಿಕ್ಕಿನಲ್ಲಿ ಹೋಗುತ್ತಿದ್ದೇವೆ. ಪಂಜಾಬ್ ಕಿಂಗ್ಸ್‌ಗೆ ಏನಾಯಿತೋ ಅದು ನಮಗೆ ಆಗಬಾರದು. ಆದ್ದರಿಂದ ನಾವು ಸರಿಯಾದ ಹಾದಿಯಲ್ಲಿದ್ದೇವೆ ಎಂದು ನಾನು ಭಾವಿಸುತ್ತೇನೆ. ಪ್ರತಿ ಪಂದ್ಯದಲ್ಲೂ ಎಲ್ಲರೂ ಉತ್ತಮವಾಗಿ ಆಡುತ್ತಾರೆ ಮತ್ತು ಅದು ಪ್ರಮುಖ ಭಾಗವಾಗಿದೆ' ಎಂದರು.

15 ವರ್ಷದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 12 ಸಿಕ್ಸರ್‌ಗಳು ಮತ್ತು ಐದು ಬೌಂಡರಿಗಳ ಸಹಾಯದಿಂದ 97 ರನ್‌ಗಳನ್ನು ಗಳಿಸಿದರು. ಇದು ರಾಜಸ್ಥಾನ್ ರಾಯಲ್ಸ್ ತಂಡವು 244 ರನ್‌ಗಳ ಬೃಹತ್ ಗುರಿಯನ್ನು ಪೇರಿಸಲು ಸಹಾಯ ಮಾಡಿತು.

ನ್ಯೂ ಚಂಡೀಗಢದ ಮಹಾರಾಜ ಯಾದವಿಂದ್ರ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಲಿರುವ ಕ್ವಾಲಿಫೈಯರ್ 2 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಗುಜರಾತ್ ಟೈಟಾನ್ಸ್ ಅನ್ನು ಎದುರಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT