ವೈಭವ್ ಸೂರ್ಯವಂಶಿ online desk
ಕ್ರಿಕೆಟ್

ಮತ್ತೊಬ್ಬ ಕ್ರಿಕೆಟ್ ಲೆಜೆಂಡ್ ದಾಖಲೆ ಮುರಿಯಲು ಕ್ರಿಕೆಟ್ ಕಿಡ್ ವೈಭವ್ ಸೂರ್ಯವಂಶಿ ಸಜ್ಜು

ಈ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಪ್ಲೇಯಿಂಗ್ 11 ನಲ್ಲಿ ಆಡುವ ಅವಕಾಶ ಸಿಕ್ಕಿದರೆ, ಅವರು ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಲೆಜೆಂಡ್ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿಯಲಿದ್ದಾರೆ.

ನವದೆಹಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಸೆಪ್ಟೆಂಬರ್ 13 ರಂದು ಭಾರತದಲ್ಲಿ ಆರಂಭವಾಗಲಿದೆ. ಈ ಸರಣಿಗೆ ವೈಭವ್ ಸೂರ್ಯವಂಶಿಯನ್ನು ಆಯ್ಕೆ ಮಾಡಲಾಗಿದೆ. ವೈಭವ್​ಗೆ ಪ್ಲೇಯಿಂಗ್ 11ನಲ್ಲಿ ಆಡುವ ಅವಕಾಶ ಸಿಗುವುದನ್ನು ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಎದುರು ನೋಡುತ್ತಿದ್ದಾರೆ.

ಈ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಪ್ಲೇಯಿಂಗ್ 11 ನಲ್ಲಿ ಆಡುವ ಅವಕಾಶ ಸಿಕ್ಕಿದರೆ, ಅವರು ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಲೆಜೆಂಡ್ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿಯಲಿದ್ದಾರೆ.

ಈ ವರೆಗೂ ವೈಭವ್ ಸೂರ್ಯವಂಶಿ ಟೀಂ ಇಂಡಿಯಾ ಪರ 6 ಟಿ20 ಪಂದ್ಯಗಳನ್ನು ಆಡಿದ್ದು, ಎಲ್ಲಾ ಪಂದ್ಯಗಳನ್ನೂ ವಿದೇಶಿ ನೆಲದಲ್ಲಿ ಆಡಿದ್ದಾರೆ. ಇದೇ ಮೊದಲ ಬಾರಿಗೆ ತವರು ನೆಲದಲ್ಲಿ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಲಿದ್ದಾರೆ.

ಸೆಹ್ವಾಗ್ ಭಾರತ ಪರ 19 ಟಿ20 ಪಂದ್ಯಗಳನ್ನು ಆಡಿದ್ದು, 145.38 ಸ್ಟ್ರೈಕ್ ರೇಟ್‌ನಲ್ಲಿ 16 ಸಿಕ್ಸರ್ ಗಳೊಂದಿಗೆ 394 ರನ್ ಗಳಿಸಿದ್ದಾರೆ. ಇನ್ನು ವೈಭವ್ ಸೂರ್ಯವಂಶಿ 6 ಪಂದ್ಯಗಳಲ್ಲಿ ಇದುವರೆಗೆ ಒಟ್ಟು 14 ಸಿಕ್ಸರ್‌ಗಳನ್ನು ಗಳಿಸಿದ್ದಾರೆ. ಈ ಸರಣಿಯಲ್ಲಿ ವೈಭವ್, 3 ಸಿಕ್ಸರ್‌ಗಳನ್ನು ಗಳಿಸಿದರೆ ಸೆಹ್ವಾಗ್ ಅವರನ್ನು ಹಿಂದಿಕ್ಕಲ್ಲಿದ್ದಾರೆ.

ಇನ್ನು ಭಾರತದ ಪರ ಅತ್ಯಧಿಕ ಸಿಕ್ಸರ್​ಗಳನ್ನು ಬಾರಿಸಿದವರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅಗ್ರಸ್ಥಾನದಲ್ಲಿದ್ದು, ಇಲ್ಲಿಯವರೆಗೆ 205 ಸಿಕ್ಸರ್‌ಗಳನ್ನು ಗಳಿಸಿದ್ದರೆ. ಸೂರ್ಯಕುಮಾರ್ ಯಾದವ್ 179 ಸಿಕ್ಸರ್‌ಗಳೊಂದಿಗೆ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. 126 ಸಿಕ್ಸರ್‌ಗಳೊಂದಿಗೆ ಹಾರ್ದಿಕ್ ಪಾಂಡ್ಯ ಮೂರನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 124 ಸಿಕ್ಸರ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅಭಿಷೇಕ್ ಶರ್ಮಾ 104 ಸಿಕ್ಸರ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ; ಸೆ. 15 ರಿಂದ ರಾಜ್ಯಾದ್ಯಂತ ಹೋರಾಟ

ಬ್ರಿಕ್ಸ್‌ನಲ್ಲಿ ಪಹಲ್ಗಾಮ್ ದಾಳಿ ಬಗ್ಗೆ ಮಾತ್ರ ಖಂಡನೆ: ಗಾಜಾ ಬಗ್ಗೆ ಮೌನ ಏಕೆ?; ಗೋಳಾಡಿದ ಮೊಹಬೂಬಾ ಮುಫ್ತಿ!

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ BRICS; ಭಾರತಕ್ಕೆ ಅತಿ ದೊಡ್ಡ ರಾಜತಾಂತ್ರಿಕ ಗೆಲುವು!