ಟೆಸ್ಟ್ ಚಾಂಪಿಯನ್ ಷಿಪ್ ನಿಂದ ಪಾಕಿಸ್ತಾನ ಕಿಕೌಟ್! 
ಕ್ರಿಕೆಟ್

WTC 2025-27: ಕೇವಲ 9 ಪಂದ್ಯಗಳಲ್ಲೇ ICC ಟೆಸ್ಟ್ ಚಾಂಪಿಯನ್ ಷಿಪ್ ನಿಂದ ಪಾಕಿಸ್ತಾನ ಕಿಕೌಟ್!

ಇಂಗ್ಲೆಂಡ್ ಪ್ರವಾಸದಲ್ಲಿರುವ ಪಾಕಿಸ್ತಾನ ತಂಡ ಹೀನಾಯ ಪ್ರದರ್ಶನ ತೋರಿ ಇದೀಗ ICC ಟೆಸ್ಟ್ ಚಾಂಪಿಯನ್ ಷಿಪ್ ರೇಸ್ ನಿಂದಲೇ ಹೊರಬಿದ್ದಿದೆ.

ಲಂಡನ್: ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ರೇಸ್ ನಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದಿದ್ದು, ಆ ಮೂಲಕ 2025-27ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ರೇಸ್ ನಿಂದ ಹೊರಬಿದ್ದ ಮೊದಲ ತಂಡ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.

ಹೌದು.. ಇಂಗ್ಲೆಂಡ್ ಪ್ರವಾಸದಲ್ಲಿರುವ ಪಾಕಿಸ್ತಾನ ತಂಡ ಹೀನಾಯ ಪ್ರದರ್ಶನ ತೋರಿ ಇದೀಗ ICC ಟೆಸ್ಟ್ ಚಾಂಪಿಯನ್ ಷಿಪ್ ರೇಸ್ ನಿಂದಲೇ ಹೊರಬಿದ್ದಿದೆ.

ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ ತಂಡ ಹೀನಾಯ ಸೋಲನುಭವಿಸಿತ್ತು. ಇದೀಗ ಮೂರನೇ ಮ್ಯಾಚ್​ನಲ್ಲೂ ಮುಗ್ಗರಿಸಿದೆ.

ಈ ಸತತ ಮೂರು ಸೋಲುಗಳೊಂದಿಗೆ ಪಾಕ್ ಪಡೆಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕನಸು ಭಗ್ನಗೊಂಡಿದೆ.

ಕೇವಲ 9 ಪಂದ್ಯಗಳಲ್ಲೇ ಮುಗ್ಗರಿಸಿದ ಪಾಕಿಸ್ತಾನ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ಪಾಕಿಸ್ತಾನ ಕ್ರಿಕೆಟ್ ತಂಡದ ಕನಸು ನುಚ್ಚುನೂರಾಗಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅನುಭವಿಸಿದ 3-0 ಅಂತರದ ಹೀನಾಯ ಸೋಲಿನೊಂದಿಗೆ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ್ ತಂಡ, ಲಂಡನ್‌ನ ದಿ ಓವಲ್‌ನಲ್ಲಿ ನಡೆಯಲಿರುವ ಮಹತ್ವದ ಫೈನಲ್ ರೇಸ್‌ನಿಂದ ಹೊರಬಿದ್ದ ಮೊದಲ ತಂಡ ಎನಿಸಿಕೊಂಡಿದೆ.

ಪಾಕಿಸ್ತಾನ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಈ ವರೆಗೂ ಒಟ್ಟು 9 ಪಂದ್ಯಗಳನ್ನು ಆಡಿದ್ದು ಈ ಪೈಕಿ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ 7 ಪಂದ್ಯಗಳಲ್ಲಿ ಸೋಲು ಕಂಡಿದೆ. ಪಾಕಿಸ್ತಾನದ ಶೇಕಡಾವಾರು ಜಯದ ಪ್ರಮಾಣ 14.81ರಷ್ಟಿದೆ.

ಹೀಗಾಗಿ ಪಾಕಿಸ್ತಾನ ಕೊನೆಯ ಸ್ಥಾನಕ್ಕೆ ಕುಸಿದು ಚಾಂಪಿಯನ್ ಷಿಪ್ ರೇಸಿನಿಂದಲೇ ಹೊರಬಿದ್ದಿದೆ. ಮುಂಬರುವ ಎಲ್ಲಾ ಪಂದ್ಯಗಳನ್ನು ಪಾಕಿಸ್ತಾನ ಗೆದ್ದರೂ ಸಹ ಅಗ್ರ ಎರಡು ಸ್ಥಾನಕ್ಕೇರಲು ಅಗತ್ಯವಿರುವ ಕನಿಷ್ಠ ಸರಾಸರಿಯನ್ನು ತಲುಪಲು ಪಾಕಿಸ್ತಾನ್ ತಂಡಕ್ಕೆ ಸಾಧ್ಯವಿಲ್ಲ.

ಲಾರ್ಡ್ಸ್ ಟೆಸ್ಟ್ ಸೋಲಿನ ಆಘಾತ!

ಪಾಕಿಸ್ತಾನ್ ತಂಡವು ಎಡ್ಜ್​ಬಾಸ್ಟನ್​ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು. ಇದರೊಂದಿಗೆ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ 3-0 ಅಂತರದಿಂದ ವಶಪಡಿಸಿಕೊಂಡಿದೆ. ಈ ಸರಣಿ ಸೋಲಿನೊಂದಿಗೆ ಪಾಕಿಸ್ತಾನ ತಂಡ ಅಧಿಕೃತವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಿಂದ ಹೊರಬಿದ್ದಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರ್ತೀನಿ: ಹಿಂದೂಗಳ ತಂಟೆಗೆ ಹೋದರೆ ಹುಷಾರ್: ಸರ್ಕಾರಕ್ಕೆ ಅಶೋಕ್ ವಾರ್ನಿಂಗ್

'ತಾಕತ್ತಿದ್ದರೆ ಟ್ರೈ ಮಾಡು ಮಗ, ಆಲ್ ದಿ ಬೆಸ್ಟ್ ರಣಹೇಡಿ': ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದ ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಚಾಲೆಂಜ್!

ಪ್ರಿಯಾಂಕ್ ಖರ್ಗೆ ಪರಪ್ಪನ ಅಗ್ರಹಾರ ಜೈಲು ಸೇರುವ ಕಾಲ ಹತ್ತಿರ ಬಂದಿದೆ: ಪ್ರತಾಪ್ ಸಿಂಹ ತಿರುಗೇಟು

ದೆಹಲಿಯಲ್ಲಿ ಮತ್ತೊಂದು ಅವಘಡ: ಸ್ವರೂಪ್ ನಗರದಲ್ಲಿ ಭಾರಿ ಬೆಂಕಿ ಅವಘಡ; 6 ಜನರಿಗೆ ಗಾಯ, ಭರದಿಂದ ಸಾಗಿದ ಕಾರ್ಯಾಚರಣೆ!

ಆಪರೇಷನ್‌ ನಡೆಯುತ್ತಿದ್ದಾಗಲೇ ವಿದ್ಯುತ್‌ ಕಡಿತ; ಮೊಬೈಲ್‌ ಟಾರ್ಚ್‌ ಬೆಳಕಲ್ಲೇ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ! ಬಿಹಾರ ಆಸ್ಪತ್ರೆ ಅವ್ಯವಸ್ಥೆ!