ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

ಸೆಪ್ಟೆಂಬರ್ 27 ರಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ಸರಣಿಗೆ ಭಾರತದ 15 ಸದಸ್ಯರ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಸಮಿತಿ ಇಂದು ಅಧಿಕೃತವಾಗಿ ಪ್ರಕಟಿಸಿದೆ.

ನವದೆಹಲಿ: ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿ(ಬಿಸಿಸಿಐ) ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡವನ್ನು ಬುಧವಾರ ಪ್ರಕಟಿಸಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಹಾರ್ದಿಕ್ ಪಾಂಡ್ಯ ಮತ್ತು ರಿಷಭ್ ಪಂತ್ ಅವರನ್ನು ಮತ್ತೆ ಕಡೆಗಣಿಸಲಾಗಿದ್ದು, ಇಬ್ಬರನ್ನೂ ಆಯ್ಕೆ ಮಾಡಿಲ್ಲ. ಆದರೆ ರುತುರಾಜ್ ಗಾಯಕ್ವಾಡ್ ಅವರು ಏಕದಿನ ತಂಡಕ್ಕೆ ಮರಳಿದ್ದಾರೆ.

ಸೆಪ್ಟೆಂಬರ್ 27 ರಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ಸರಣಿಗೆ ಭಾರತದ 15 ಸದಸ್ಯರ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಸಮಿತಿ ಇಂದು ಅಧಿಕೃತವಾಗಿ ಪ್ರಕಟಿಸಿದೆ.

ಮುಂದಿನ ತಿಂಗಳು ನಡೆಯಲಿರುವ ವಿಂಡೀಸ್ ವಿರುದ್ಧದ ಟಿ20ಐ ಸರಣಿಗೆ ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಕೂಡ ಸ್ಥಾನ ಪಡೆದಿಲ್ಲ.

ವಿರಾಟ್ ಕೊಹ್ಲಿ, ರೋಹಿತ್​ ಶರ್ಮಾಗೆ ಚಾನ್ಸ್

ಸುಮಾರು ಎರಡು ತಿಂಗಳ ವಿರಾಮದ ಬಳಿಕ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಮತ್ತೆ ಏಕದಿನ ತಂಡಕ್ಕೆ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ.

ಈ ಹಿಂದೆ ಇಂಗ್ಲೆಂಡ್ ಪ್ರವಾಸದ ವೇಳೆ ರೋಹಿತ್ ಅವರು ತಮ್ಮ ಭವಿಷ್ಯದ ಕುರಿತು ಇದ್ದ ಎಲ್ಲ ಅನುಮಾನಗಳಿಗೆ ಲಾರ್ಡ್ಸ್ ಮೈದಾನದಲ್ಲಿ ಭರ್ಜರಿ 137 ರನ್‌ ಗಳಿಸುವ ಮೂಲಕ ಉತ್ತರ ನೀಡಿದ್ದರು. ಇದೀಗ ಮತ್ತೊಮ್ಮೆ ಸ್ಥಾನ ಗಿಟ್ಟಿಸುವ ಮೂಲಕ ವಿಶ್ವಕಪ್​ ಆಸೆಯನ್ನು ಜೀವಂತವಾಗಿ ಇರಿಸಿಕೊಂಡಿದ್ದಾರೆ.

ಮತ್ತೊಂದೆಡೆ, ಏಷ್ಯನ್ ಗೇಮ್ಸ್ ಟಿ20 ಕ್ರಿಕೆಟ್ ಅಭಿಯಾನಕ್ಕಾಗಿ ವಿಂಡೀಸ್ ವಿರುದ್ಧದ ಈ ಸರಣಿಯಲ್ಲಿ ಭಾರತೀಯ ತಂಡವು ಕೆಲವೊಂದು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲಿದೆ.

ಏಕದಿನ ಸರಣಿಯ ಪಂದ್ಯಗಳು ಸೆಪ್ಟೆಂಬರ್ 27 ರಂದು ತಿರುವನಂತಪುರ, ಸೆಪ್ಟೆಂಬರ್ 30 ರಂದು ಗುವಾಹಟಿ ಹಾಗೂ ಅಕ್ಟೋಬರ್ 3 ರಂದು ಹೊಸ ಚಂಡೀಘಢದಲ್ಲಿ ನಡೆಯಲಿವೆ.

ಏಕದಿನ ಸರಣಿಗೆ ಭಾರತ ತಂಡ

ಶುಭಮಾನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆ.ಎಲ್. ರಾಹುಲ್ (ಉಪನಾಯಕ/ವಿಕೆಟ್ ಕೀಪರ್), ಧ್ರುವ ಜುರೆಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಕುಲ್‌ದೀಪ್ ಯಾದವ್, ಪ್ರಸಿದ್ಧ ಕೃಷ್ಣ, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಔಕಿಬ್ ನಬಿ, ಯಶಸ್ವಿ ಜೈಸ್ವಾಲ್ ಹಾಗೂ ನಮನ್ ಧೀರ್ ಸ್ಥಾನ ಪಡೆದಿದ್ದಾರೆ.

ಟಿ20ಐ ಸರಣಿಗೆ ಭಾರತ ತಂಡ

ಶ್ರೇಯಸ್ ಐಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮ (ಉಪನಾಯಕ), ಶಿವಂ ದುಬೆ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್ ಮತ್ತು ಮಯಾಂಕ್ ಯಾದವ್ ಸ್ಥಾನ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ

ಯುದ್ಧದ ಕಿಡಿ ಹೊತ್ತಿಸಲು ಬಂದಿತ್ತಾ ಪಾಕ್ ನೌಕಾಪಡೆ ಹಡಗು? ಭಾರತೀಯ ಕ್ಯಾಪ್ಟನ್ ಚಾಣಾಕ್ಷತನದಿಂದ ತಪ್ಪಿದ ಭಾರೀ ದುರಂತ!