ಅಂಬಾರಿ ಹೊರುವ ಅರ್ಜುನನ ತಾಲೀಮು (ಸಂಗ್ರಹ ಚಿತ್ರ) 
ದಸರಾ

ಅಂಬಾರಿ ಹೊರುವ ಅರ್ಜುನನಿಗೆ ನೀಡುವ ತರಬೇತಿ ಏನು?

ಅಂಬಾರಿ ಹೊರುವ ಅರ್ಜುನನಿಂಗಂತೂ ದಸರಾ ವೇಳೆ ವಿಶೇಷ ಆತಿಥ್ಯ. ಉದ್ದು. ಗೋಧಿ, ಕುಸುಲಕ್ಕಿ, ಈರುಳ್ಳಿ, ಹಸಿ ತರಕಾರಿಗಳ ದೊಡ್ಡ ಉಂಡೆ ಜೊತೆಗೆ ಬೆಣ್ಣೆ, ಭತ್ತ, ತೆಂಗಿನಕಾಯಿ, ಹಿಂಡಿ, ಕಬ್ಬು, ಬೆಲ್ಲ, ಮೊದಲಾದ ಆಹಾರಗಳನ್ನು ಅರ್ಜುನನಿಗೆ ನೀಡಲಾಗುತ್ತದೆ...

ದಸರಾ ಗಜಪಡೆಗಳ ಪೈಕಿ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗುವ ಅರ್ಜುನನಿಗೆ ವಿಶೇಷ ಸತ್ಕಾರಗಳು ನಡೆಯುತ್ತವೆ. ತಿಂಗಳ ಮುಂಚಿತವಾಗಿ ಮೈಸೂರಿಗೆ ಆಗಮಿಸುವ ಗಜಪಡೆಗೆ ಆರಂಭದಿಂದಲೇ ಭೂರಿ ಭೋಜನ ನೀಡುವ ಮೂಲಕ ಜಂಬೂ ಸವಾರಿಗೆ ಸಿದ್ಧಪಡಿಸಲಾಗುತ್ತದೆ.

ಇನ್ನು ಅಂಬಾರಿ ಹೊರುವ ಅರ್ಜುನನಿಂಗಂತೂ ದಸರಾ ವೇಳೆ ವಿಶೇಷ ಆತಿಥ್ಯ. ಉದ್ದು. ಗೋಧಿ, ಕುಸುಲಕ್ಕಿ, ಈರುಳ್ಳಿ, ಹಸಿ ತರಕಾರಿಗಳ ದೊಡ್ಡ ಉಂಡೆ ಜೊತೆಗೆ ಬೆಣ್ಣೆ, ಭತ್ತ, ತೆಂಗಿನಕಾಯಿ, ಹಿಂಡಿ, ಕಬ್ಬು, ಬೆಲ್ಲ, ಮೊದಲಾದ ಆಹಾರಗಳನ್ನು ಅರ್ಜುನನಿಗೆ ನೀಡಲಾಗುತ್ತದೆ. ಹಸಿರು ಮೇವುಗಳಾಗಿ ಆಲದ ಮರದ ಸೊಪ್ಪು, ಹುಲ್ಲನ್ನು ಆಗಾಗ ನೀಡಲಾಗುತ್ತಿದೆ. ದಿನಕ್ಕೆರಡು ಬಾರಿ ಸ್ನಾನ ಮಾಡಿಸಲಾಗುತ್ತದೆ.

ಇನ್ನು ಜಂಬೂ ಸವಾರಿಯಲ್ಲಿ ಯಾವುದೇ ಅಡೆತಡೆಗೆ ಬಗ್ಗದೆ ಮುನ್ನಡೆಯಲು ಅರ್ಜುನನಿಗೆ 750 ಕೆಜಿ ತೂಕದ ಮರದ ಅಂಬಾರಿಯನ್ನು ಕಟ್ಟಿ, ಉಳಿದ ಆನೆಗಳಿಗೆ ಮರಳಿನ ಮೂಟೆ (ಗಾದಿ ಹಮ್ದಾ)ಯನ್ನು ಕಟ್ಟಿ ದಿನಕ್ಕೆರಡು ಬಾರಿ ತಾಲೀಮು ನೀಡಲಾಗುತ್ತದೆ. ಹಬ್ಬದ ದಿನ ಜಂಬೂ ಸವಾರಿ ನಡೆಯುವ ಅಷ್ಟೂ ಹಾದಿಗಳನ್ನು ಮತ್ತೆ-ಮತ್ತೆ ಅರ್ಜುನನಿಗೆ ಪರಿಚಯಿಸಲಾಗುತ್ತದೆ. ಜನಜಂಗುಳಿ ಮತ್ತು ಕೂಗಾಟಗಳನ್ನು ತಡೆದುಕೊಂಡು ಅರ್ಜುನ ಅಂಬಾರಿಯನ್ನು ಹೊತ್ತು ನಡೆಯಬೇಕಿರುತ್ತದೆ. ಹೀಗಾಗಿ ಅರ್ಜುನ ಆದಷ್ಟೂ ಶಾಂತಿಯಿಂದಿರುವಂತೆ ನೋಡಿಕೊಳ್ಳು ಜವಾಬ್ದಾರಿ  ಮಾವುತರು ಮತ್ತು ಕಾವಾಡಿಗಳದ್ದು.

ಪ್ರತಿದಿನ ಅರಮನೆ ಆವರಣದಿಂದ ಆರಂಭವಾಗುವ ಈ ತಾಲೀಮು ಸುಮಾರು 6 ಕಿ.ಮೀ. ದೂರವಿರುವ ಬನ್ನಿಮಂಟಪದವರೆಗೆ ದಿನನಿತ್ಯ ನಡೆಯುತ್ತದೆ. ಈ ರೀತಿಯ ಮರಳು ತಾಲೀಮನ್ನು ಸುಮುಹೂರ್ತದಲ್ಲಿ ಆರಂಭಿಸಲಾಗುತ್ತದೆ.

ಮರದ ಅಂಬಾರಿ ಕಟ್ಟಿ ಅರ್ಜುನನಿಗೆ ತರಬೇತಿ
ಹಬ್ಬದ ದಿನದಂದು ಅಂಬಾರಿ ಹೊರುವ ಅರ್ಜುನನಿಗೆ ತರಬೇತಿಯಲ್ಲಿ ಚಿನ್ನದ ಅಂಬಾರಿಯ ಬದಲಿಗೆ ಅಷ್ಟೇ ತೂಕದ ಮರದ ಅಂಬಾರಿಯನ್ನು ಹೊರಿಸಲಾಗುತ್ತದೆ. ಮೊದಲಿಗೆ ಅರ್ಜುನನ ಮೇಲೆ ಸುಮಾರು 300 ಕೆಜಿ ಭಾರದ 'ಗಾದಿ ಹಮ್ದಾ' ಎಂದು ಕರೆಯುವ ಮರಳು ತುಂಬಿದ ಚೀಲವನ್ನು ಅದರ ಬೆನ್ನ ಮೇಲೆ ಹಾಸಿ ಮಾರುದ್ದದ ಹಗ್ಗದಿಂದ ಆನೆಯ ಹೊಟ್ಟೆ ಭಾಗಕ್ಕೆ ಸುತ್ತಿ ಬಿಗಿಯಾಗಿ ಕಟ್ಟಲಾಗುತ್ತದೆ. ಬಳಿಕ ಗೋಣಿ ಚೀಲಗಳನ್ನು ಹಾಸಿ ಅದರ ಮೇಲೆ ಕಬ್ಬಿಣದ ತೊಟ್ಟಿಲನ್ನು ಕಟ್ಟಲಾಗುತ್ತದೆ. ಇದಕ್ಕಾಗಿ ಹತ್ತಕ್ಕೂ ಹೆಚ್ಚು ಮಾವುತರು ದುಡಿಯುತ್ತಾರೆ.

ಮೊದಲಿಗೆ ಅರ್ಜುನನ ಮೇಲೆ ಇಡುವ ಮರಳಿನ ಚೀಲವನ್ನು ತೊಟ್ಟಿಯಲ್ಲಿ ಇಡಲಾಗುತ್ತದೆ. ಪ್ರತಿ ದಿನವೂ ಚೀಲಗಳ ಸಂಖ್ಯೆಯನ್ನು ಹೆಚ್ಚಿಸುತ್ತಾ ಹೋಗಲಾಗುತ್ತದೆ. ಈ ರೀತಿಯ ಭಾರವನ್ನು ಅರ್ಜುನ ಮಾತ್ರವಲ್ಲದೆ, ಇತರ ಕೆಲ ಆನೆಗಳಿಗೂ ಕಟ್ಟಿ ಸುಮಾರು 15 ದಿನಗಳ ಕಾಲ ಸರತಿಯ ಸಾಲಿನಲ್ಲಿ ತಾಲೀಮು ನಡೆಸಲಾಗುತ್ತದೆ. ಸುಮಾರು ನೂರು ಕೆಜಿಯಿಂದ ಆರಂಭವಾಗುವ ತಾಲೀಮು 750 ಕೆಜಿಗೆ ಬಂದು ತಲುಪುತ್ತದೆ. ಆ ನಂತರ ಮರದ ಅಂಬಾರಿಯನ್ನು ಕಟ್ಟಿ ತಾಲೀಮು ನಡೆಸಲಾಗುತ್ತದೆ. ಇದಾದ ಬಳಿಕ ದಸರಾ ದಿನದಂದು ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ ಜಂಬೂ ಸವಾರಿ ನಡೆಸಲಾಗುತ್ತದೆ. ಅರಮನೆ ಆವರಣದಿಂದ ಹೊರಡುವ ಈ ಜಂಬೂ ಸವಾರಿ ಸಯ್ಯಾಜಿರಾವ್ ರಸ್ತೆಯ ಮೂಲಕ ಬನ್ನಿಮಂಟಪ ತಲುಪುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT