ರಾಜವಂಶಸ್ಥ ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ವಾರ್ಷಿಕ ಪುಣ್ಯಾರಾಧನೆಯ ಧಾರ್ಮಿಕ ಪೂಜಾ ವಿಧಿ ವಿಧಾನ 
ಜಿಲ್ಲಾ ಸುದ್ದಿ

ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಪುಣ್ಯಾರಾಧನೆ

ರಾಜವಂಶಸ್ಥ ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ...

ಮೈಸೂರು: ರಾಜವಂಶಸ್ಥ ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ವಾರ್ಷಿಕ ಪುಣ್ಯಾರಾಧನೆ ಅಂಗವಾಗಿ ಅರಮನೆಯಲ್ಲಿ ಧಾರ್ಮಿಕ ಪೂಜಾ ವಿಧಿ ವಿಧಾನ ಸೋಮವಾರ ನೆರವೇರಿತು.

ಅರಮನೆ ಆವರಣದಲ್ಲಿನ ದೇವಸ್ಥಾನಗಳು, ಚಾಮುಂಡಿಬೆಟ್ಟ, ಮೇಲುಕೋಟೆ ಮತ್ತು ನಂಜನಗೂಡು ಸೇರಿದಂತೆ ನಗರದ 126 ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ, ಆ ಎಲ್ಲ ದೇವಸ್ಥಾನಗಳಿಂದ ಅರಮನೆಗೆ ಪ್ರಸಾದ ಸಲ್ಲಿಸಲಾಯಿತು. ಅರಮನೆ ಆವರಣದಲ್ಲಿ ಒಡೆಯರ್ ಅವರ ಭಾವಚಿತ್ರಕ್ಕೆ ಅವರ ಪತ್ನಿ ಪ್ರಮೋದಾದೇವಿ ಒಡೆಯರ್ ಮಾಲಾರ್ಪಣೆ ಮಾಡಿ, ಪೂಜೆ ಸಲ್ಲಿಸಿದರು.

ಸಂಪ್ರದಾಯದಂತೆ ಅರಮನೆಯಲ್ಲಿನ ಕಲ್ಯಾಣ ಮಂಟಪದಲ್ಲಿ ಬ್ರಹ್ಮತಂತ್ರ ಸ್ವಂತ್ರ ಪರಕಾಲಮಠದ ಶ್ರೀ ಅಭಿನವ ವಾಗೀಶ ಸ್ವಾಮೀಜಿಗಳ ಪಾದಪೂಜೆ ನಡೆಯಿತು. ಶ್ರೀಕಂಠದತ್ತೆ ಒಡೆಯರ್ ಅವರ ಸಹೋದರಿಯರಾದ ಇಂದ್ರಾಕ್ಷಿದೇವಿ, ಮೀನಾಕ್ಷಿದೇವಿ, ಸಂಬಂಧಿ ಚದುರಂಗ ಕಾಂತರಾಜೇ ಅರಸ್ ಸೇರಿದಂತೆ ರಾಜಮನೆತನದವರು, ಗಣ್ಯರು, ಆಹ್ವಾನಿತರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT