ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಜನಾರ್ಧನ ರೆಡ್ಡಿಗೆ ಜಾಮೀನು

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಜನಾರ್ಧನ ರೆಡ್ಡಿ, ಅವರ ಆಪ್ತರಾದ ಖಾರದಪುಡಿ ಮಹೇಶ್ ಮತ್ತು ಅಲಿಖಾನ್ ಸೇರಿದಂತೆ 10 ಮಂದಿಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿ ಕುರಿತಂತೆ ಇಂದು ವಿಚಾರಣೆ ನಡೆಸಿದ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯ ಜನಾರ್ಧನ ರೆಡ್ಡಿ ಮತ್ತು ಅವರ 9 ಮಂದಿ ಆಪ್ತರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಅಕ್ರಮ ಗಣಿಗಾರಿಕೆ ನಡೆಸಿ ಸಿಬಿಐ ಅಧಿಕಾರಿಗಳಿಂದ 2011 ಸೆಪ್ಟೆಂಬರ್ 5ರಂದು ಬಂಧನಕ್ಕೀಡಾಗಿದ್ದ ಜನಾರ್ಧನ ರೆಡ್ಡಿ ವಿರುದ್ಧ ಒಟ್ಟು 7 ಪ್ರಕರಣಗಳ ದಾಖಲಾಗಿದ್ದು, ಈ ಪೈಕಿ ಇಂದು ಜಾಮೀನು ದೊರೆತ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸೇರಿದಂತೆ ಒಟ್ಟು 5 ಪ್ರಕರಣಗಳಲ್ಲಿ ರೆಡ್ಡಿಗೆ ಜಾಮೀನು ದೊರೆತಿದೆ. ಇನ್ನು ಉಳಿದ 2 ಪ್ರಕರಣಗಳಲ್ಲಿ ರೆಡ್ಡಿಗೆ ಜಾಮೀನು ದೊರೆತರೆ ಮಾತ್ರ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಇದೇ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಇನ್ನೂ 1 ಪ್ರಕರಣದಲ್ಲಿ ಮತ್ತು ಒಎಂಸಿ ಗಣಿ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ದೊರೆತರೆ ಮಾತ್ರ ಜನಾರ್ಧನ ರೆಡ್ಡಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಇದೇ ಡಿಸೆಂಬರ್ 3ರಂದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಮತ್ತು ಡಿಸೆಂಬರ್ 16 ರಂದು ಸುಪ್ರೀಂಕೋರ್ಟ್‌ನಲ್ಲಿ ಒಎಂಸಿ ಅಕ್ರಮ ಗಣಿಗಾರಿಕ ಪ್ರಕರಣದ ವಿಚಾರಣೆ ನಡೆಯಲಿದೆ. ಈ ಎರಡೂ ಪ್ರಕರಣಗಳಲ್ಲಿ ಜನಾರ್ಧನ ರೆಡ್ಡಿಗೆ  ಜಾಮೀನು ದೊರೆತರೆ ಮಾತ್ರ ರೆಡ್ಡಿ ಜೈಲಿನಿಂದ ಹೊರಬರುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT