ಹೆಜ್ಜೇನುಗಳ ದಾಳಿಗೆ ಬಲಿಯಾದ ಶಿವಾರೆಡ್ಡಿ ಮತ್ತು ಶಂಕರ್ 
ಜಿಲ್ಲಾ ಸುದ್ದಿ

ಹೆಜ್ಜೇನುಗಳ ದಾಳಿಗೆ ಇಬ್ಬರು ಬಲಿ

ಟ್ಯಾಂಕ್ ಮೇಲೆ ಕಟ್ಟಿದ್ದ ಹೆಜ್ಜೇನುಗಳು ಏಕಾಏಕಿ ಸಂತೆಯಲ್ಲಿದ್ದ ಜನರ ಮೇಲೆ ದಾಳಿ ನಡೆಸಿದೆ...

ದೇವನಹಳ್ಳಿ: ಹೆಜ್ಜೇನುಗಳ ದಾಳಿಗೆ ಇಬ್ಬರು ಬಲಿಯಾದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ಒಮ್ಮೆಲೆ ಎರಗಿದ ಈ ಹೆಜ್ಜೇನುಗಳು 10 ನಿಮಷಗಳಲ್ಲಿ ಇಬ್ಬರ ಜೀವವನ್ನು ಬಲಿ ತೆಗೆದುಕೊಂಡಿದೆ. ದೇವನಹಳ್ಳಿಯ ಶಿವಾರೆಡ್ಡಿ ಮತ್ತು ಶಂಕರ್ ಮೃತ ದುರ್ದೈವಿಗಳಾಗಿದ್ದಾರೆ.

ದೇವನಹಳ್ಳಿಯಲ್ಲಿ ಇಂದು ಸಂತೆ ದಿನವಾಗಿದ್ದು, ಎಂದಿನಂತೆ ಜನ ಜಂಗುಳಿಯಿಂದ ಕೂಡಿತ್ತು. ಸಂತೆ ಸಮೀಪವಿದ್ದ ನೀರಿನ ಟ್ಯಾಂಕ್ ಮೇಲೆ ಕಟ್ಟಿದ್ದ ಹೆಜ್ಜೇನುಗಳು ಏಕಾಏಕಿ ಸಂತೆಯಲ್ಲಿದ್ದ ಜನರ ಮೇಲೆ ದಾಳಿ ನಡೆಸಿದೆ.

ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಾಯಾಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಮಧ್ಯಾಹ್ನ ಸುಮಾರು 1 ಘಂಟೆಯ ವೇಳೆ ಘಟನೆ ಸಂಭವಿಸಿದೆ. ವೆಂಕಟಗಿರಿ ಕೋಟೆಯವರಾದ ಶಿವಾರೆಡ್ಡಿ ಎಂದಿನಂತೆ ಸಂತೆಯಲ್ಲಿ ಬುಟ್ಟಿ ಮಾರಾಟ ಮಾಡುತ್ತಿದ್ದರು. ಈ ವೇಳೆ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಲು ಮುಂದಾಯಿತು. ಇದನ್ನು ನೋಡಿದ ಸಂತೆಗೆ ಆಗಮಿಸಿದ್ದ ಚಾಲಕ ಶಂಕರ್ ರಕ್ಷಣೆಗಾಗಿ ದೌಡಾಯಿಸಿದರು. ಈ ವೇಳೆ ಶಂಕರ್ ಮೇಲೂ ಹೆಜ್ಜೇನುಗಳು ದಾಳಿ ನಡೆಸಿ ಬಲಿ ತೆಗೆದುಕೊಂಡಿದೆ.

ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ದೇವನಹಳ್ಳಿ ಶಾಸಕ ಪಿಳ್ಳ ಮುನಿಶಾಮಪ್ಪ ಸಂತಾಪ ವ್ಯಕ್ತಪಡಿಸಿದರಲ್ಲದೆ, ಮೃತರ ಕುಟುಂಬಕ್ಕೆ ತಲಾ 10 ಸಾವಿರ ರೂ. ಪರಿಹಾರ ನೀಡುವ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?, ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ