ವಿದ್ಯುತ್ ಅಭಾವ 
ಜಿಲ್ಲಾ ಸುದ್ದಿ

ಬೇಸಿಗೆ ಮುನ್ನವೇ ಕರೆಂಟ್ ಖೋತಾ!

ಚಿಕ್ಕಮಗಳೂರು: ಬೇಸಿಗೆ ಆರಂಭವಾಗುವ ಮೊದಲೇ ರಾಜ್ಯದಲ್ಲಿ ವಿದ್ಯುತ್ ಅಭಾವ ತಲೆದೋರಿದೆ. ಒಂದೇ ದಿನದಲ್ಲಿ ವಿದ್ಯುತ್ ಉತ್ಪಾದನೆ ಸುಮಾರು 2 ಸಾವಿರ ಮೆಗಾವಾಟ್ ಕುಸಿದಿದೆ.

ರಾಜ್ಯದಲ್ಲಿ ಕಲ್ಲಿದ್ದಲು ಹಾಗೂ ಜಲವಿದ್ಯುತ್ ಉತ್ಪಾದನಾ ಘಟಕಗಳಿಂದ ಪ್ರತಿದಿನ 7,800 ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಆದರೆ, ಮಂಗಳವಾರ ಬೆಳಗ್ಗೆ 8 ರಿಂದ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಉತ್ಪಾದನೆಯಲ್ಲಿ ಏರುಪೇರು ಉಂಟಾಗಿದ್ದರಿಂದ ಸುಮಾರು 2 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಇದರಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.

ಉಡುಪಿ, ಬಳ್ಳಾರಿ ಹಾಗೂ ರಾಯಚೂರುಗಳಲ್ಲಿ ಕಲ್ಲಿದ್ದಲು ವಿದ್ಯುತ್ ಉತ್ಪಾದನೆ ಕೇಂದ್ರಗಳಿದ್ದು, ಇಲ್ಲಿ ಕಲ್ಲಿದ್ದಲು ಕೊರತೆಯಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಉತ್ಪಾದನೆಯನ್ನು ಮಾಡಲು ಸಾಧ್ಯವಾಗುತ್ತಿಲ್ಲ.

ಏಕಕಾಲದಲ್ಲಿ ಈ ಮೂರು ಕೇಂದ್ರಗಳಲ್ಲಿ ಕಲ್ಲಿದ್ದಲಿನ ಕೊರತೆ ಕಂಡುಬಂದಿದೆ. ಒಳ್ಳಾರಿ ಬಿಟಿಪಿಎಸ್‌ನಲ್ಲಿ 100, ರಾಯಚೂರಿನ ಆರ್‌ಟಿಪಿಎಸ್‌ನಲ್ಲಿ 350, ಉಡುಪಿಯಲ್ಲಿ ಕೇಂದ್ರದಲ್ಲಿ 100 ಮೆಗಾವಾಟ್ ಉತ್ಪಾದನೆಯಾಗುತ್ತಿದೆ. ಅಂದರೆ ಬಳ್ಳಾರಿಯಲ್ಲಿ 450 ಮೆಗಾವಾಟ್, ರಾಯಚೂರಿನಲ್ಲಿ 1330, ಉಡುಪಿಯಲ್ಲಿ 550 ಮೆಗಾವಾಟ್ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ.

ವಿದ್ಯುತ್ ಕೊರತೆಯಿಂದಾಗಿ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಸದ್ಯ ನಗರ ಪ್ರದೇಶಗಳಲ್ಲಿ 3 ರಿಂದ 4 ಗಂಟೆ, ಗ್ರಾಮಾಂತರ ಪ್ರದೇಶಗಳಲ್ಲಿ 9 ಗಂಟೆ ಕಾಲ ಅನಿಯಮಿತ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಬಹಳಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಕಂಪ್ಯೂಟರ್‌ಗಳು ಪವರ್ ಕೊರತೆಯಿಂದಾಗಿ ಸ್ಧಗಿತಗೊಂಡಿವೆ. ಇದು, ಅಭಿವೃದ್ಧಿ ಕೆಲಸಗಳ ಮೇಲೆ ದುಷ್ಪರಿಣಾಮ ಬೀರಿದೆ.


-ಆರ್. ತಾರಾನಾಥ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT