ಸಿರಿಮನೆ ನಾಗರಾಜ, ನೂರ್ ಜುಲ್ಫೀಕರ್, 
ಜಿಲ್ಲಾ ಸುದ್ದಿ

ನಕ್ಸಲರಾದ ಸಿರಿಮನೆ ನಾಗರಾಜ, ನೂರ್ ಜುಲ್ಫೀಕರ್ ಶರಣು

ಚಿಕ್ಕಮಗಳೂರು: ನಕ್ಸಲ್ ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ ಬರಲು ತೀರ್ಮಾನಿಸಿದ್ದ ನಕ್ಸಲ್ ಮುಖಂಡರಾದ ಸಿರಿಮನೆ ನಾಗರಾಜ ಹಾಗೂ ನೂರ್ ಜುಲ್ಫೀಕರ್ ಅವರು ಸೋಮವಾರ ಚಿಕ್ಕಮಗಳೂರು ಜಿಲ್ಲಾಧಿಕಾರಿ ಶೇಖರಪ್ಪ ಅವರೆದುರು ಶರಣಾಗಿದ್ದಾರೆ.

ಸಿರಿಮನೆ ನಾಗರಾಜ್ ನೂರ್ ಜುಲ್ಫೀಕರ್ ನಕ್ಸಲ್ ಹೋರಾಟ ಬಿಟ್ಟು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಇಬ್ಬರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶರಣಾಗತರಾಗಿದ್ದಾರೆ. ಈ ವೇಳೆ ಪುನರ್ವಸತಿ ಸಮಿತಿಯ ರಾಜ್ಯ ಮತ್ತು ಜಿಲ್ಲಾ ಸದಸ್ಯರ ಸಮ್ಮುಖದಲ್ಲಿ ಶರಣಾಗತರಾಗಿದ್ದಾರೆ. ಈ ವೇಳೆ ಜಿಲ್ಲಾ ವರಿಷ್ಠಾಧಿಕಾರಿ ಆರ್. ಚೇತನ್ ಸೇರಿದಂತೆ ನಾಗರಿಕ ಸಮಾಜದ ಪ್ರತಿನಿಧಿಗಳು ಹಾಜರಿದ್ದರು.

ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ, ಬಿ.ಟಿ ಲಲಿತಾನಾಯಕ್ ಸೇರಿಂದಂತೆ ಪ್ರಮುಖರು ಈ ಕ್ಷಣಕ್ಕೆ ಸಾಕ್ಷಿಯಾಗಿದ್ದರು. ಹಲವು ದಿನಗಳಿಂದ ಗೊಂದಲಕ್ಕೆ ಕಾರಣವಾಗಿದ್ದ ನಕ್ಸಲ್ ಮುಖಂಡರ ಶರಣಾಗತಿಗೆ ಇಂದು ಕಾಲ ಕೂಡಿ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT