ಎಚ್.ಎಸ್. ದೊರೆ ಸ್ವಾಮಿ ಹಾಗೂ ಗೌರಿ ಲಂಕೇಶ್ ಜೊತೆ ಸಿರಿಮನೆ ನಾಗರಾಜ ಹಾಗೂ ನೂರ್ ಜುಲ್ಫೀಕರ್ 
ಜಿಲ್ಲಾ ಸುದ್ದಿ

ನಕ್ಸಲ್ ನಾಯಕರಿಬ್ಬರು ಶರಣು

ದಶಕಕ್ಕೂ ಹೆಚ್ಚು ಕಾಲ ನಕ್ಸಲ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇಬ್ಬರು ನಕ್ಸಲರು...

ಚಿಕ್ಕಮಗಳೂರು: ದಶಕಕ್ಕೂ ಹೆಚ್ಚು ಕಾಲ ನಕ್ಸಲ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇಬ್ಬರು ನಕ್ಸಲರು  ಸೋಮವಾರ ಜಿಲ್ಲಾಡಳಿತದ ಎದುರು ಶರಣಾದರು.

ಸಿರಿಮನೆ ನಾಗರಾಜ್, ನೂರ್ ಜುಲ್ಫಿಕರ್ ಶರಣಾದವರು. ಇವರಿಬ್ಬರೂ  2002ರ ನಂತರ ನಕ್ಸಲ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅವರ ವಿರುದ್ಧ ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಾನಾ ಪ್ರಕರಣಗಳು ದಾಖಲಾಗಿದ್ದು, ತಲೆ ಮರೆಸಿಕೊಂಡಿದ್ದರು.

ಬೆಳಗ್ಗೆ 11.30ಕ್ಕೆ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆ ಸ್ವಾಮಿ ಹಾಗೂ ಗೌರಿ ಲಂಕೇಶ್ ಅವರು ಜಿಲ್ಲಾಧಿಕಾರಿ ಶೇಖರಪ್ಪ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿ ಶರಣಾಗತಿ ಸಂಬಂಧ ಮಾತುಕತೆ ನಡೆಸಿದರು. ಮಧ್ಯಾಹ್ನ 2.28ರ ವೇಳೆಗೆ ನಕ್ಸಲ್ ನಾಯಕರಿಬ್ಬರೂ ಪ್ರವಾಸಿ ಮಂದಿರದ ಮುಂಭಾಗಕ್ಕೆ ಬಂದರು. ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಎದುರು ಹಾಜರಾದರು. ಅಲ್ಲಿ ಇಬ್ಬರಿಂದಲೂ ಹೇಳಿಕೆ ಪಡೆದು ಲಿಖಿತವಾಗಿ ದಾಖಲಿಸಿಕೊಳ್ಳಲಾಯಿತು. ಈ ಪ್ರಕ್ರಿಯೆ ಮುಗಿದ ನಂತರ ಸಿರಿಮನೆ ನಾಗರಾಜ್, ನೂರ್ ಜುಲ್ಫಿಕರ್ ಅವರನ್ನು ಸಮಾಜದ ಮುಖ್ಯವಾಹಿನಿಗೆ ಮರಳಲು ಅವಕಾಶ ಕಲ್ಪಿಸಿದ ಸಮಿತಿ ಸದಸ್ಯರ ಎದುರು ಹಾಜರಾದರು

ಸಿರಿಮನೆ ನಾಗರಾಜ ಹಾಗೂ ನೂರ್ ಜುಲ್ಫೀಕರ್ ಅವರನ್ನು ಸೋಮವಾರ ಸಂಜೆ 8.30ಕ್ಕೆ ಶೃಂಗೇರಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಮಂಗಳವಾರ ಇವರನ್ನು ಕೊಪ್ಪ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

Thyroid Cancer: ಗುರುತೇ ಸಿಗಲಾರದಷ್ಟು ಬದಲಾದ ನಟ! 'ರಾಯ್' ಗೆ ಬೇಕಾಗಿದೆ ನೆರವಿನ ಹಸ್ತ..Video

SCROLL FOR NEXT