ಅರಣ್ಯ ಸಚಿವ ರಮಾನಾಥ ರೈ 
ಜಿಲ್ಲಾ ಸುದ್ದಿ

ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವುದಿಲ್ಲ

ರಾಜ್ಯ ಸರ್ಕಾರ ಜನಸ್ನೇಹಿ, ಜನಪರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ...

ಬೆಳಗಾವಿ: ಡಾ.ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜನಸ್ನೇಹಿ, ಜನಪರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ.

ಬುಧವಾರ ಮೇಲ್ಮನೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಮಹಾಂತೇಶ ಕವಟಗಿಮಠ ಅವರು ಕಸ್ತೂರಿ ರಂಗನ್ ವರದಿ ಬಗ್ಗೆ ಪ್ರಸ್ತಾಪಿಸಿದರು. ಅದಕ್ಕೆ ಉತ್ತರಿಸಿದ ಅರಣ್ಯ ಸಚಿವರು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೈಸೂರು, ಚಾಮರಾಜನಗರ ಸೇರಿದಂತೆ 10 ಜಿಲ್ಲೆಗಳಿವೆ.

ಈ ಪ್ರದೇಶದಲ್ಲಿ ಅದಿರು ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಲ್ಲು ಮತ್ತು ಮರಳು ಗಣಿಗಾರಿಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿರುವ ಗ್ರಾಮಗಳನ್ನು ಸಂರಕ್ಷಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಈ ಕುರಿತು ಸಾಧಕ-ಬಾಧಕಗಳ ಕುರಿತು ಚರ್ಚಿಸಲು ಸಚಿವ ಸಂಪುಟದ ಉಪ ಸಮಿತಿ ರಚಿಸಲಾಗಿದೆ.

ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಗ್ರಾಮಸ್ಥರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ. ಹಾಗಾಗಿ, ಯಾರೂ ಆತಂಕಗೊಳ್ಳುವ ಅಗತ್ಯ ಇಲ್ಲ. ಅಲ್ಲದೇ ಈ ಕುರಿತು ತಪ್ಪು ಮಾಹಿತಿ ನೀಡಿ ಅರಣ್ಯ ಪ್ರದೇಶದ ವಾಸಿಗಳಲ್ಲಿ ಯಾರೂ ಗೊಂದಲ ಸೃಷ್ಟಿಸಬಾರದು ಎಂದು ಮನವಿ ಮಾಡಿದರು.

ಡಾ. ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಪರಿಸರ ಮತ್ತು ಅರಣ್ಯ ಮಂತ್ರಾಲಯ ಕಳೆದ ಮಾರ್ಚ್ 10 ರಂದು 2ನೇ ಅಧಿಸೂಚನೆ ಹೊರಡಿಸಿದೆ. ಕೇರಳ ರಾಜ್ಯ ಹೊರತುಪಡಿಸಿದರೆ ಬೇರೆ ಯಾವುದೇ ರಾಜ್ಯಗಳು ಕೇಂದ್ರಕ್ಕೆ ತನ್ನ ವರದಿ ನೀಡಿಲ್ಲ.

ರಾಜ್ಯ ಸರ್ಕಾರವು ಶೀಘ್ರವೇ ಜನಪರ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲಿದೆ. ತಮಿಳುನಾಡು, ಗೋವಾ, ಮಹಾರಾಷ್ಟ್ರ ರಾಜ್ಯಗಳು ಇನ್ನೂ ವರದಿ ನೀಡಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT