ಅರಣ್ಯ ಸಚಿವ ರಮಾನಾಥ ರೈ 
ಜಿಲ್ಲಾ ಸುದ್ದಿ

ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವುದಿಲ್ಲ

ರಾಜ್ಯ ಸರ್ಕಾರ ಜನಸ್ನೇಹಿ, ಜನಪರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ...

ಬೆಳಗಾವಿ: ಡಾ.ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜನಸ್ನೇಹಿ, ಜನಪರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದ್ದಾರೆ.

ಬುಧವಾರ ಮೇಲ್ಮನೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಮಹಾಂತೇಶ ಕವಟಗಿಮಠ ಅವರು ಕಸ್ತೂರಿ ರಂಗನ್ ವರದಿ ಬಗ್ಗೆ ಪ್ರಸ್ತಾಪಿಸಿದರು. ಅದಕ್ಕೆ ಉತ್ತರಿಸಿದ ಅರಣ್ಯ ಸಚಿವರು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೈಸೂರು, ಚಾಮರಾಜನಗರ ಸೇರಿದಂತೆ 10 ಜಿಲ್ಲೆಗಳಿವೆ.

ಈ ಪ್ರದೇಶದಲ್ಲಿ ಅದಿರು ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಲ್ಲು ಮತ್ತು ಮರಳು ಗಣಿಗಾರಿಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿರುವ ಗ್ರಾಮಗಳನ್ನು ಸಂರಕ್ಷಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಈ ಕುರಿತು ಸಾಧಕ-ಬಾಧಕಗಳ ಕುರಿತು ಚರ್ಚಿಸಲು ಸಚಿವ ಸಂಪುಟದ ಉಪ ಸಮಿತಿ ರಚಿಸಲಾಗಿದೆ.

ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಗ್ರಾಮಸ್ಥರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲ. ಹಾಗಾಗಿ, ಯಾರೂ ಆತಂಕಗೊಳ್ಳುವ ಅಗತ್ಯ ಇಲ್ಲ. ಅಲ್ಲದೇ ಈ ಕುರಿತು ತಪ್ಪು ಮಾಹಿತಿ ನೀಡಿ ಅರಣ್ಯ ಪ್ರದೇಶದ ವಾಸಿಗಳಲ್ಲಿ ಯಾರೂ ಗೊಂದಲ ಸೃಷ್ಟಿಸಬಾರದು ಎಂದು ಮನವಿ ಮಾಡಿದರು.

ಡಾ. ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಳಿಸುವ ಸಂಬಂಧ ಕೇಂದ್ರ ಪರಿಸರ ಮತ್ತು ಅರಣ್ಯ ಮಂತ್ರಾಲಯ ಕಳೆದ ಮಾರ್ಚ್ 10 ರಂದು 2ನೇ ಅಧಿಸೂಚನೆ ಹೊರಡಿಸಿದೆ. ಕೇರಳ ರಾಜ್ಯ ಹೊರತುಪಡಿಸಿದರೆ ಬೇರೆ ಯಾವುದೇ ರಾಜ್ಯಗಳು ಕೇಂದ್ರಕ್ಕೆ ತನ್ನ ವರದಿ ನೀಡಿಲ್ಲ.

ರಾಜ್ಯ ಸರ್ಕಾರವು ಶೀಘ್ರವೇ ಜನಪರ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲಿದೆ. ತಮಿಳುನಾಡು, ಗೋವಾ, ಮಹಾರಾಷ್ಟ್ರ ರಾಜ್ಯಗಳು ಇನ್ನೂ ವರದಿ ನೀಡಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT