ಖಾಸಗಿ ಬಸವೊಂದು ಕೆರೆಗೆ ಉರುಳಿ ಬಿದ್ದಿರುವ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕೆರೆಗೆ ಉರುಳಿದ ಖಾಸಗಿ ಬಸ್: ಮೂರಕ್ಕೆ ಏರಿದ ಸಾವಿನ ಸಂಖ್ಯೆ

ಚನ್ನಗಿರಿ(ದಾವಣಗೆರೆ): ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸವೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಸೂಳೆಕೆರೆಗೆ ಖಾಸಗಿ ಬಸ್ ಉರುಳಿ ಬಿದ್ದಿದೆ. ಪರಿಣಾಮ ಬಸ್‌ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಚನ್ನಗಿರಿಯ ಮೂಲದ 30 ವರ್ಷದ ಸವಿತಾ, 55 ವರ್ಷದ ಹರಪ್ಪನಹಳ್ಳಿಯ ಮಹದೇವಪ್ಪ ಎಂದು ಗುರುತಿಸಲಾಗಿದ್ದು, ಆತನ ಗುರುತು ಪತ್ತೆಯಾಗಿಲ್ಲ.

ಸುಮಾರು 40 ಮಂದಿಯನ್ನು ಹೊತ್ತು ಸಾಗುತ್ತಿದ್ದ ಬಸ್ ಸೂಳೆಕೆರೆಗೆ ಬೀಳುತ್ತಿದ್ದಂತೆ ಸ್ಥಳೀಯರು ಹಾಗೂ ಮೀನುಗಾರರು ಬಸ್‌ನಲ್ಲಿದ್ದ ಪ್ರಮಾಣಿಕರನ್ನು ರಕ್ಷಿಸುವಲ್ಲಿ ಯಶ್ವಸಿಯಾಗಿದ್ದಾರೆ. ಇದೀಗ ಕೆರೆಯಲ್ಲಿ ಬಸ್ ಸಂಪೂರ್ಣವಾಗಿ ಮುಳುಗಿದ್ದು, ಕ್ರೌನ್ ಬಳಸಿ ಬಸ್ ಮೇಲಕ್ಕೇತ್ತಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ಪ್ರಯಾಣಿಕರಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.

ಬಸ್‌ನಲ್ಲಿ ಸಿಲುಕಿರುವವರನ್ನು ಮೇಲೆತ್ತುವ ಕಾರ್ಯ ಭರದಿಂದ ಸಾಗಿದೆ. ಮೃತಪಟ್ಟಿರುವ ಇಬ್ಬರು ದಾವಣಿಗೆರೆ ಮೂಲದವರು ಎಂದು ಡಿವೈಎಸ್‌ಪಿ ನ್ಯಾಮೇಗೌಡ ಅವರು ತಿಳಿಸಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದರು.

ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರು. ಪರಿಹಾರ

ಮೃತ ಕುಟುಂಬಕ್ಕೆ ತಲಾ 1 ಲಕ್ಷ ರುಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಚನ್ನಗಿರ ಶಾಸಕ ವಡ್ನಾಲ್ ರಾಜಪ್ಪ ಹೇಳಿದ್ದಾರೆ. ಪರಿಹಾರ ಘೋಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಪಾಕಿಸ್ತಾನದ ಪ್ರಧಾನಿ ಮತ್ತು ಸೇನಾಧಿಕಾರಿ ಶ್ರೇಷ್ಠ ನಾಯಕರು, ನನಗೆ ಪಾಕ್ ಜೊತೆ ಒಳ್ಳೆ ಬಾಂಧವ್ಯವಿದೆ': ಆಫ್ಘಾನಿಸ್ತಾನ ಉದ್ವಿಗ್ನತೆ ಮಧ್ಯೆ ಹಾಡಿಹೊಗಳಿದ Donald Trump-Video

IPL 2026: ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯ, ಮೇ 31ಕ್ಕೆ ಫೈನಲ್ ಪಂದ್ಯ!

'ನೀವೇ CM ಆಗಿ, ಇಲ್ಲದಿದ್ದರೇ ದಲಿತರನ್ನು ಮುಖ್ಯಮಂತ್ರಿ ಮಾಡಿ: ಅಧಿಕಾರವಿದ್ದರೂ ಅವಕಾಶ ನೀಡದಿದ್ದರೇ ಇತಿಹಾಸ ನಿಮ್ಮನ್ನು ಶಪಿಸುತ್ತೆ'

ಅಕ್ರಮ ಮದ್ಯ ನೀತಿ ಹಗರಣ: ಕೇಜ್ರಿವಾಲ್ ಖುಲಾಸೆ ಕುರಿತು ಅಣ್ಣಾ ಹಜಾರೆ ಅಚ್ಚರಿ ಹೇಳಿಕೆ!

ನೇಪಾಳದಲ್ಲಿ 2ನೇ ದಿನವೂ ಲ್ಯಾಂಡ್ ಆಗದ ವಿಮಾನ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ, ಆಕ್ರೋಶ!

SCROLL FOR NEXT