ಮೂರು ದಿನ ಕಾರ್ಖಾನೆಯ ಯಂತ್ರೋಪಕರಣ ಸ್ಥಗಿತ 
ಜಿಲ್ಲಾ ಸುದ್ದಿ

ಎಪಿಎಂಸಿ ಘಟಕ ಇಂದಿನಿಂದ ಸ್ಥಗಿತ

ಮಾಲಿನ್ಯ ನಿಯಂತ್ರಣ ಮಂಡಳಿ ಡಿ.15ರಿಂದ ವಿದ್ಯುತ್ ನಿಲುಗಡೆ ಮಾಡಲಾಗಿದೆ...

ಭದ್ರಾವತಿ: ಮಾಲಿನ್ಯ ನಿಯಂತ್ರಣದ ನಿರ್ದಿಷ್ಟ ಮಾನ ಉಲ್ಲಂಘನೆಗಾಗಿ ಮೈಸೂರು ಕಾಗದ ಕಾರ್ಖಾನೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಡಿ.15ರಿಂದ ವಿದ್ಯುತ್ ನಿಲುಗಡೆ ಮಾಡಲಾಗಿದೆ ಎಂದು  ತಿಳಿದು ಬಂದಿದ್ದು, ಇದನ್ನು ವ್ಯವಸ್ಥಾಪಕ ನಿರ್ದೇಶಕ ನವಿನ್‌ರಾಜ್ ಸಿಂಗ್ ಅವರೂ ಖಚಿತಪಡಿಸಿದ್ದಾರೆ.

ಇನ್ನು ಮೂರು ದಿನಗಳಲ್ಲಿ ಕಾರ್ಖಾನೆಯ ಯಂತ್ರೋಪಕರಣ ಮತ್ತು ಚಿಮಣಿಯನ್ನು ಸ್ವಚ್ಛಗೊಳಿಸಿ ನಿರ್ದಿಷ್ಟಮಾನ ಕಾಪಾಡಿಕೊಳ್ಳಲು ಅವಶ್ಯವಿರುವ ಎಲ್ಲ ಕ್ರಮ ಕೈಗೊಳ್ಳುತ್ತೇವೆ ಎಂದು ನವೀನ್‌ರಾಜ್ ಸಿಂಗ್ ತಿಳಿಸಿದ್ದಾರೆ.

ಕಾರ್ಖಾನೆಯ ಹೊಗೆ ನಳಿಗೆಯಿಂದ ಧೂಳು ಮತ್ತು ಹೊಗೆಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇದು ನಿರ್ದಿಷ್ಟ ಪ್ರಮಾಣಕ್ಕಿಂತ ಹೆಚ್ಚಾಗಿದ್ದುದ್ದರಿಂದ ಮಾಲಿನ್ಯ ನಿಯಂತ್ರಣ ಮಂಡಳಿ ಹಲವಾರು ಬಾರಿ ನೊಟೀಸ್ ನೀಡಿತ್ತು. ಆದರೂ ಕಾರ್ಖಾನೆ ಈ ಬಗ್ಗೆ ಗಮನ ನೀಡಿರಲಿಲ್ಲ. ಆದ ಕಾರಣ ಪ್ರಥಮ ಹಂತದ ಕ್ರಮವಾಗಿ ಮೆಸ್ಕಾಂ ಮೂಲಕ ವಿದ್ಯುತ್ ಪೂರೈಕೆಯನ್ನು ಸೋಮವಾರದಿಂದ ಸ್ಥಗಿತಗೊಳಿಸುವ ತೀರ್ಮಾನವನ್ನು ಮಂಡಳಿ ತೆಗೆದುಕೊಂಡಿದೆ. ಹೀಗಾಗಿ ಇಂದು ಸಂಜೆಯಿಂದ ಕಾಗದ ಉತ್ಪಾದನಾ ಘಟಕ ಸ್ಧಗಿತಗೊಳ್ಳಲಿವೆ.

ಡಿಸಿ ಕಚೇರಿಗೆ ಬೀಗ: ಏತನ್ಮಧ್ಯೆ ಕಾರ್ಖಾನೆಗೆ ವಿದ್ಯುತ್ ನಿಲುಗಡೆ ಮಾಡಿದರೆ ಶಿವಮೊಗ್ಗದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಜಡಿಯುತ್ತೇವೆ ಎಂದು  ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಕೆ.ಟಿ.ಗಂಗಾಧರ ಭಾನುವಾರ ಸಂಜೆ ಕಾರ್ಖಾನೆಗೆ ಭೇಟಿ ನೀಡಿ ಕಾರ್ಮಿಕ ಸಂಘಗಳ ಮುಖಂಡರನ್ನು ಭೇಟಿ ಮಾಡಿ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೂ ಮಾತುಕತೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT