ಬೆಂಗಳೂರಿನಲ್ಲಿ ನ್ಯಾಯಾಂಗ ಅಧಿಕಾರಿ ರಾಘವೇಂದ್ರ ರಾವ್ ಅವರ ಕೊಲೆ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಹಿರಿಯನಾಗರಿಕರಿಗೆ ಸುರಕ್ಷಿತವಲ್ಲ ಬೆಂಗಳೂರು

ಹಿರಿಯ ನಾಗರೀಕರಿಗೆ ಬೆಂಗಳೂರು ಅಸುರಕ್ಷಿತ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಬೆಂಗಳೂರು: ಹಿರಿಯ ನಾಗರೀಕರಿಗೆ ಬೆಂಗಳೂರು ಅಸುರಕ್ಷಿತ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಇಟ್ಟಮಡುವಿನಲ್ಲಿ ವಾಸವಿದ್ದ ನಿವೃತ್ತ ನ್ಯಾಯಾಂಗ ಅಧಿಕಾರಿ ರಾಘವೇಂದ್ರ ರಾವ್ (70) ಎಂಬುವವರನ್ನು ದುಷ್ಕರ್ಮಿಗಳು ರಾಡ್‌ನಿಂದ್ ಹೊಡೆದು ಕೊಲೆ ಮಾಡಿದ್ದಾರೆ. ಅವರ ಪತ್ನಿ ಸುಧಾಕುಮಾರಿ ಎಂಬುವವರ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಘವೇಂದ್ರ ರಾವ್ ಪತ್ನಿಯೊಂದಿಗೆ ಇಟ್ಟಮಡು 10ನೇ ಕ್ರಾಸ್‌ನಲ್ಲಿ ವಾಸವಾಗಿದ್ದರು. ಮನೆಯ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಮಗ ಮಧಸೂದನ್ ಕುಟುಂಬದೊಂದಿಗೆ ವಾಸವಿದ್ದಾರೆ. ಬುಧವಾರ ರಾತ್ರಿ 7.30ರ ಸುಮಾರಿಗೆ ಮನೆಗೆ ಹೋದರು. ಅಡುಗೆ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ಬಿದಿದ್ದ ತಂದೆ ತಾಯಿಯನ್ನು ಆಸ್ಪತ್ರೆಗೆ ಸಾಗಿಸಿದರು. ಅಷ್ಟರಲ್ಲಾಗಲೇ ತಂದೆ ಮೃತಪಟ್ಟಿದ್ದರು.

ಪರಿಚಿತರ ಕೃತ್ಯ?
ಸುಧಾಕುಮಾರಿ ಹಾಕಿಕೊಂಡಿದ್ದ 30 ಗ್ರಾಂ ಮಾಂಗಲ್ಯವನ್ನು ದುಷ್ಕರ್ಮಿಗಳು ದೋಚಿಕೊಂಡು ಹೋಗಿದ್ದಾರೆ. ಚನ್ನಮ್ಮನಕೆರೆ  ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ದುಷ್ಕರ್ಮಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT