ಶೂಟೌಟ್ ಗೊಳಗಾದ ವೀರೇಂದ್ರ ಗುಪ್ತಾ 
ಜಿಲ್ಲಾ ಸುದ್ದಿ

ಶೂಟೌಟ್: 7 ಲಕ್ಷ ಲೂಟಿ

ಬ್ಯಾಂಕಿನಿಂದ ಹಣ ಡ್ರಾ ಮಾಡಿ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ...

ಸೂಲಿಬೆಲಿ: ಬ್ಯಾಂಕಿನಿಂದ ಹಣ ಡ್ರಾ ಮಾಡಿ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಬೈಕಿನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ಪಿಸ್ತೂಲಿನಿಂದ ಗುಂಡು ಹಾರಿಸಿ 7.30 ಲಕ್ಷ ಹಣ ದೋಚಿಕೊಂಡು ಹೋದ ಘಟನೆ ಹೊಸಕೋಟೆ ತಾಲೂಕಿನ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಹಾಡಹಗಲೇ ನಡೆದಿದೆ.

ವಾರ್ಮ್ ಗೇರ್ಸ್ ಪ್ರೈವೇಟ್  ಲಿ. ಕಾರ್ಖಾನೆಯ ಅಕೌಂಟ್ ಸೂಪರ್‌ವೈಸರ್ ವೀರೇಂದ್ರ ಗುಪ್ತಾ (28) ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿರೇಂದ್ರ ಗುಪ್ತಾ ಗುರುವಾರ ಮಧ್ಯಾಹ್ನ ಹೊಸಕೋಟೆ ಎಸ್‌ಬಿಎಂ ಬ್ಯಾಂಕಿನಿಂದ 7.30 ಲಕ್ಷ ಹಣ ಡ್ರಾ ಮಾಡಿಕೊಂಡು ಕಾರ್ಖಾನೆಯ ಕಾರಿನಲ್ಲಿ ಬಂದಿದ್ದಾರೆ. ಸುಮಾರು 3.40 ವೇಳೆಗೆ ಗುಪ್ತಾ ಕಾರ್ಖಾನೆಯ ಗೇಟಿನ ಮುಂಭಾಗದಲ್ಲಿ ಹಣದ ಚೀಲದೊಂದಿಗೆ ಕಾರಿಳಿದಿದ್ದಾರೆ.

ಚಾಲಕ ಕಾರನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದಂತೆಯೇ ಬೈಕಿನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳು ಗುಪ್ತಾ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿ ಅವರಲ್ಲಿದ್ದ ಹಣದ ಚೀಲವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಗುಂಡಿನ ಶಬ್ದ ಕೇಳಿದ ಕಾರಿನ ಚಾಲಕ ಮತ್ತು ಕಾರ್ಖಾನೆ ಸಿಬ್ಬಂದಿ ಬರುವಷ್ಟರಲ್ಲಿ ವೀರೇಂದ್ರ ಗುಪ್ತಾ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅವರನ್ನು ಹೊಸಕೋಟೆ ಎಂವಿಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ನಂತರ ಹೆಚ್ಚನಿ ಚಿಕಿತ್ಸೆಗಾಗಿ ಬೆಂಗಳೂರಿನ ಇಂದಿರಾನಗರದಲ್ಲಿರುವ ಆಕ್ಸಿನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಿಬ್ಬೊಟ್ಟೆ, ತೊಡೆ ಇತರೆ ಭಾಗದಲ್ಲಿ ಗುಂಡುಗಳು ಹೊಕ್ಕಿದ್ದು ವಿರೇಂದ್ರ ಗುಪ್ತಾ ಸಾವು, ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಡಹಗಲೇ ನಡೆದ ಈ ಕೃತ್ಯದಿಂದ ಇಡೀ ಕೈಗಾರಿಕೆ ಪ್ರದೇಶ ಬೆಚ್ಚಿ ಬಿದ್ದಿದೆ. ವಿರೇಂದ್ರಿ ಗುಪ್ತಾ ಹಣ ಡ್ರಾ ಮಾಡಿಕೊಂಡು ಬರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಇದೇ ಮೊದಲ ಬಾರಿಗೆ ಪಿಸ್ತೂಲ್ ಬಳಸಿ ಹಣ ದೋಚಿರುವ ಪ್ರಕರಣ ಪಿಲ್ಲಗುಂಪೆ ಬಳಸಿ ಹಣ ದೋಚಿರುವ ಪ್ರಕರಣ ಪಿಲ್ಲಗುಂಪೆ ಕೈಗಾರಿಕೆ ಪ್ರದೇಶದಲ್ಲಿ ನಡೆದಿದೆ. ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ದಾಳಿ ಮಾಡಿ ಹಣದ ಚೀಲದಿಂದ ಪರಾರಿಯಾಗಿರುವ ದುಷ್ಕರ್ಮಿಗಳು ಕಾರ್ಖಾನೆಯ ಎಡ ಭಾಗದ ನೀಲಗಿರಿ ತೋಪಿನ ಕಾಲು ದಾರಿಯಲ್ಲಿ ಪರಾರಿಯಾದರು ಎನ್ನಲಾಗಿದೆ. ಘಟನೆಯ ವಿಷಯ ತಿಳಿದ ಕೇಂದ್ರ ವಲಯ ಐಜಿಪಿ ಸೈಯಾದ್ ಉಲ್ಫತ್ ಹುಸೇನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಕುಮಾರ್ ಬಾನೋತ್, ಹೆಚ್ಚುವರಿ ಎಸ್ಪಿ ಅಮದ್ ಅಹಮದ್, ಡಿವೈಎಸ್ಪಿ ಬಲರಾಮೇಗೌಡ, ಸಿಪಿಐ ಪುಟ್ಟ ಹೋಬಳ ರೆಡ್ಡಿ, ಸತೀಶ್, ಐಎಸ್‌ಐ ನವೀನ್ ಇತರ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT