ಬ್ಯಾಂಕ್ ಮ್ಯಾನೇಜರ್ ಸಾವಿಗೆ ಶರಣು 
ಜಿಲ್ಲಾ ಸುದ್ದಿ

ಡೆತ್‌ನೋಟ್ ಬರೆದಿಟ್ಟು, ಬ್ಯಾಂಕಿನಲ್ಲೇ ಮ್ಯಾನೇಜರ್ ಆತ್ಮಹತ್ಯೆ

ಡೆತ್‌ನೋಟನ್ನು ಬರೆದಿಟ್ಟು ಬ್ಯಾಂಕ್‌ನಲ್ಲಿನ ಫ್ಯಾನಿಗೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾರೆ...

ಬಳ್ಳಾರಿ: ಬ್ಯಾಂಕ್ ಸಿಬ್ಬಂದಿಯೊಬ್ಬರು ಒಬ್ಬರು ಡೆತ್‌ನೋಟ್ ಬರೆದಿಟ್ಟು, ಬ್ಯಾಂಕಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಮೃತರನ್ನು ಕೃಷ್ಣಮೂರ್ತಿ ಎಂದು ಗುರುತಿಸಲಾಗಿದೆ.

ಬಳ್ಳಾರಿಯ ಕರ್ನಾಟಕ ಬ್ಯಾಂಕ್‌ನಲ್ಲಿ ಮೂರು ವರ್ಷಗಳಿಂದ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೃಷ್ಣಮೂರ್ತಿ ಇಂದು ಬೆಳಿಗ್ಗೆ ಬ್ಯಾಂಕ್ ಅವಧಿಗೂ ಮುನ್ನವೇ, ಬ್ಯಾಂಕ್‌ಗೆ ಆಗಮಿಸಿದ್ದರು ಎನ್ನಲಾಗಿದೆ. ಈ ವೇಳೆ ಡೆತ್‌ನೋಟನ್ನು ಬರೆದಿಟ್ಟು ಬ್ಯಾಂಕ್‌ನಲ್ಲಿನ ಫ್ಯಾನಿಗೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ಈ ವೇಳೆ ಅಲ್ಲಿದ್ದ ಡೆತ್‌ನೋಟ್ ಪತ್ತೆಯಾಗಿದೆ.

ಕೃಷ್ಣಮೂರ್ತಿ ಬರೆದಿರುವ ಡೆತ್‌ನೋಟ್‌ನಲ್ಲಿ, 'ನನ್ನ ಸಾವಿಗೆ ನಾನೇ ಕಾರಣ. ನಾನು ಈ ಹಿಂದೆ ಕೆಲವು ವ್ಯಕ್ತಿಗಳಿಗೆ ನಿಯಮ ಬಾಹಿರವಾಗಿ ಬಾರಿ ಪ್ರಮಾಣದಲ್ಲಿ ಲೋನ್ ನೀಡಿದ್ದೇನೆ. ಆದರೆ ಅವರು ಹಣ ಮರುಪಾವತಿ ಮಾಡಿಲ್ಲ. ಇದರಿಂದಾಗಿ ಮನನೊಂದು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದು ಬರೆಯಲಾಗಿದೆ.

ಈ ಕುರಿತು ಬ್ರಹೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ  ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT