ಪಶ್ಚಿಮ ಘಟ್ಟದ ಒಂದು ನೋಟ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಎತ್ತಿನಹೊಳೆ ಯೋಜನೆ: ತೀವ್ರಗೊಂಡ ವಿರೋಧ

ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಿದೆ ..

ಹಾಸನ: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಿದೆ ಎನ್ನಲಾಗಿರುವ ಎತ್ತಿನಹೊಳೆ ಯೋಜನೆಗೆ ರೈತರು, ಚುನಾಯಿತ ಪ್ರತಿನಿಧಿಗಳು ಮತ್ತು ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಸೋಮವಾರ ಸಕಲೇಶಪುರದಲ್ಲಿ ನೀರಾವರಿ ಇಲಾಖೆ ಆಯೋಜಿಸಿದ್ದ ಚರ್ಚೆಯಲ್ಲಿ, ಈ ಯೋಜನೆಯನ್ನು ಕೈಬಿಟ್ಟು ಆ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಪೂರೈಸಲು ಪರ್ಯಾಯ ಕಂಡುಹಿಡಿಯುವಂತೆ ಸಣ್ಣ ಮತ್ತು ಭಾರಿ ನೀರಾವರಿ ಸಚಿವ ಎಂ ಬಿ ಪಾಟಿಲ್ ಅವರಿಗೆ ಆಗ್ರಹಿಸಿದ್ದಾರೆ.

ಸಕಲೇಶಪುರದ ಮಾಜಿ ಶಾಸಕ ಎಚ್ ಎಂ ವಿಶ್ವನಾಥ್ ಮಾತನಾಡಿ, ಸರ್ಕಾರ ಪಶ್ಚಿಮ ಘಟ್ಟಗಳಲ್ಲಿ ಈ ಯೋಜನೆ ಕೈಗೆತ್ತಿಕೊಂಡು ಬಿಕ್ಕಟ್ಟು ಸೃಷ್ಟಿಸುತ್ತಿದೆ ಎಂದು ಅಪಾದಿಸಿದ್ದಾರೆ.

ಈ ಪ್ರದೇಶದ ಜನರನ್ನು ಹಾಗು ಚುನಾಯಿತ ಪ್ರತಿನಿಧಿಗಳನ್ನು ಗಣನೆಗೆ ತೆಗೆದುಕೊಳ್ಳದೆ ಸರ್ಕಾರ ಈ ಯೋಜನೆ ಕೈಗೆತ್ತಿಕೊಂಡಿದೆ ಎಂದು ದೂರಿರುವ ಪರಿಸರವಾದಿ ಹಾಗು ಜನಪದ ಹೋರಾಟ ಸಮಿತಿಯ ಅಧ್ಯಕ್ಷ ಎಚ್ ಎ ಕಿಶೋರ್ ಕುಮಾರ್ ಈ ಯೋಜನೆ ಪ್ರಾರಂಭಿಸುವುದಕ್ಕೂ ಮುಂಚೆ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕಿತ್ತು ಎಂದಿದ್ದಾರೆ.

ಈ ಯೋಜನೆ ಅವೈಜ್ಞಾನಿಕವಾಗಿದ್ದು, ಇದರಿಂದ ೧೦ ಟಿಎಂಸಿ ನೀರು ಕೂಡ ದೊರೆಯುವುದಿಲ್ಲ. ಆದುದರಿಂದ ಈ ಭಾಗದ ಜನ ಈ ಯೋಜನೆ ಪೂರ್ಣಗೊಳಿಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ದಶಕಗಳಿಂದ ತೊಂದರೆ ಅನುಭವಿಸುತ್ತಿರುವ ಈ ಭಾಗದ ರೈತರ ಮೂಲ ಸೌಕರ್ಯಗಳ ಬಗ್ಗೆ ಮೊದಲು ಸರ್ಕಾರ ಗಮನ ಹರಿಸಬೇಕು ಎಂದಿದ್ದಾರೆ ಪರಿಸರವಾದಿ ವಿಕ್ರಮ್ ಗೌಡ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT