ಅಪಘಾತದಲ್ಲಿ ಮೃತಪಟ್ಟವರು 
ಜಿಲ್ಲಾ ಸುದ್ದಿ

ಸಾಗರ ಬಳಿ ಅಪಘಾತ: ಹುಬ್ಬಳ್ಳಿಯ ಐವರ ಸಾವು

ತಾಲೂಕಿನ ಸಿಗಂದೂರು ಮಾರ್ಗದಲ್ಲಿನ ಹುಲಿದೇವರಬನಗ್ರಾಮದ ಸಮೀಪ...

ಸಾಗರ: ತಾಲೂಕಿನ ಸಿಗಂದೂರು ಮಾರ್ಗದಲ್ಲಿನ ಹುಲಿದೇವರಬನಗ್ರಾಮದ ಸಮೀಪ ಶನಿವಾರ ಕಾರು ಮತ್ತು ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಮೃತಪಟ್ಟಿದ್ದಾರೆ.

ಸಂತೋಷ್‌ನಾಯರ್(40), ಅವರ ಪತ್ನಿ ಬಿಂದು (38) ಪುತ್ರಿ ಸಾಧಿಕಾ (6) ಊಮೇಶ್ ಜಾಡರ್ (40) ಅವರ ಪುತ್ರ ರೋಹನ್ (8) ಮೃತರು. ಉಮೇಶ್ ಜಾಡರ್ ಪತ್ನಿ ನಂದಾ, ಮಗಳು ಸುಹಾನಾ ತೀವ್ರವಾಗಿ ಗಾಯಗೊಂಡಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಹುಬ್ಬಳ್ಳಿಯ ಬೊಮ್ಮಾಪುರ ಹೋಲಿಮಠ ಪ್ರದೇಶದವರು ಎಂದು ಗುರುತಿಸಲಾಗಿದೆ. ಸಿಂಗದೂರಿಗೆ ಹೋಗೂತ್ತಿರುವಾಗ ವಾಹನವೊಂದನ್ನು ಹಿಂದಿಕ್ಕಲು ಪ್ರಯತ್ನಿಸಿ, ಎದುರಿನಿಂದ ಬರುತ್ತಿದ್ದ ಬೆಂಗಳೂರಿನ ಖಾಸಗಿ ಬಸ್ಸಿಗೆ ನೇರವಾಗಿ ಅಪ್ಫಳಿಸಿದೆ. ಅಪಘಾತದ ರಭಸಕ್ಕೆ ಕಾರು ಸುಮಾರು 30 ಅಡಿ ಹಿಂದಕ್ಕೆ ಹೋಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಬಸ್ಸಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಸಾಗರ ಡಿವೈಎಸ್ಪಿ ಬಿ.ಎನ್.ನಂದಿನಿ, ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ಮಾದಪ್ಪ. ಪಿಎಸ್‌ಐ ಶಶಿಕಾಂತ್ ಮೊದಲಾದವರು ಭೇಟಿ ನೀಡಿ ಕಾನೂನು ಕ್ರಮ ಜರುಗಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಂಧನ ಬೆಲೆ ಸೇರಿದಂತೆ ಉಕ್ರೇನ್ ಸಂಘರ್ಷದ ಪ್ರತಿಕೂಲ ಪರಿಣಾಮ ಜಾಗತಿಕ ದಕ್ಷಿಣ ದೇಶಗಳ ಮೇಲೆ ಬೀರುತ್ತಿದೆ: UNGA ಯಲ್ಲಿ ಭಾರತ ವಿಷಾದ

ನಾನು ಹೇಳಿದ್ರೂ ಕೇಳೋಲ್ವಾ, ಎಷ್ಟು ಧೈರ್ಯ ನಿನಗೆ? ಮಹಿಳಾ IPS ಅಧಿಕಾರಿ ಜೊತೆ ಅಜಿತ್ ಪವಾರ್ ವಾಗ್ವಾದ; ವಿಡಿಯೋ ವೈರಲ್

MUDA ಕೇಸ್: ಸಿಎಂಗೆ ಕ್ಲೀನ್ ಚಿಟ್ ನೀಡಿದ್ದ ದೇಸಾಯಿ ಆಯೋಗ ವರದಿಗೆ ಸಂಪುಟ ಅನುಮೋದನೆ, ಅಧಿಕಾರಿಗಳು-ಅಕ್ರಮ ಫಲಾನುಭವಿಗಳಿಂದ ನಷ್ಟ ವಸೂಲಿಗೆ ನಿರ್ಧಾರ

ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ನಿರ್ಧಾರ: ಇಡೀ ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕಾಂಗ್ರೆಸ್ ಹೆಬ್ಬೆಟ್ಟಿನ ದಿನಗಳ ನೆನಪಿಸಲು ಹೊರಟಿದೆ..!

ಬೆಂಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮ; ನಗರದ ಹಲವಡೆ ಸಂಚಾರ ಬದಲಾವಣೆ, ಪರ್ಯಾಯ ಮಾರ್ಗಗಳು ಹೀಗಿವೆ...

SCROLL FOR NEXT