ನಿತ್ಯಾನಂದ ಆಶ್ರಮದ ಭಕ್ತೆ ಸಂಗೀತಾ 
ಜಿಲ್ಲಾ ಸುದ್ದಿ

ನಿತ್ಯಾನಂದ ಆಶ್ರಮದ ಭಕ್ತೆ ಅನುಮಾನಾಸ್ಪದ ಸಾವು

4 ವರ್ಷಗಳಿಂದ ನಿತ್ಯಾನಂದ ಆಶ್ರಮದಲ್ಲಿ ಸ್ವಯಂ ಪ್ರೇರಿತವಾಗಿ ಸನ್ಯಾಸತ್ವ ತರಬೇತಿ ಪಡೆಯುತ್ತಿದ್ದರು...

ರಾಮನಗರ: ಬಿಡದಿ ನಿತ್ಯಾನಂದ ಆಶ್ರಮದಲ್ಲಿ ಸನ್ಯಾಸತ್ವ ತರಬೇತಿ ಪಡೆಯುತ್ತಿದ್ದ ಸಂಗೀತಾ(24) ಎಂಬ ಭಕ್ತೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ತಮಿಳುನಾಡಿನ ತಿರುಚನಾಪಳ್ಳಿ ಮೂಲದ ಸಂಗೀತಾ ಕಳೆದ 4 ವರ್ಷಗಳಿಂದ ನಿತ್ಯಾನಂದ ಆಶ್ರಮದಲ್ಲಿ ಸ್ವಯಂ ಪ್ರೇರಿತವಾಗಿ ಸನ್ಯಾಸತ್ವ ತರಬೇತಿ ಪಡೆಯುತ್ತಿದ್ದರು. ಡಿ.28ರ ರಾತ್ರಿ ಎದೆನೋವು ಕಾಣಿಸಿಕೊಂಡ ಅವರನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಅಲ್ಲಿಂದ ಬಿಜಿಎಸ್ ಅಪೊಲೋ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿಯೇ ಸಂಗೀತಾ ಕೊನೆಯುಸಿರೆಳೆದಿದ್ದಾಳೆ. 'ಸಂಗೀತಾ ಅವರು ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಬಂದಿತ್ತು. ನಮ್ಮ ಕುಟುಂಬದಲ್ಲಿರುವ ಇತರೆ ಸದಸ್ಯರಿಗೆ ಹೃದಯಾಘಾತವಾಗಿರುವ ಇತಿಹಾಸವಿದೆ. ಹಾಗೂ ಮಗಳಿಗೂ ಸಣ್ಣ ಪ್ರಮಾಣದ ಹೃಯಾಘಾತವಾಗಿತ್ತು. ಹೀಗಾಗಿ ಸಂಗೀತಾ ಹೃದಯಾಘಾತದಿಂದಲೇ ಮೃತಪಟ್ಟಿದ್ದಾರೆ ಎನ್ನಲು ಅನುಮಾನವೇ ಇಲ್ಲ.

ಹೀಗಾಗಿ ತಮಿಳುನಾಡಿಗೆ ಶವ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ನಡೆಸಲು ಅನುವುಮಾಡಿಕೊಡಿ. ಅದಕ್ಕೆ ನನ್ನ ಯಾವುದೇ ಅಭ್ಯಂತರ ಇಲ್ಲ' ಎಂದು ಸಂಗೀತಾ ತಾಯಿ ಜಾನ್ಸಿರಾಣಿ ನವಲೂರು ಬಿಡದಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT