ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಮೆಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯದ ಆಭರಣ ನಾಪತ್ತೆ

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿನ ಆಭರಣಗಳು ನಾಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ.

ಮಂಡ್ಯ: ದಕ್ಷಿಣ ಭಾರತದ ಖ್ಯಾತ ದೇವಾಲಯಗಳಲ್ಲಿ ಒಂದಾಗಿರುವ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿನ ಆಭರಣಗಳು ನಾಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ.

ದೇವಾಲಯದಲ್ಲಿರುವ ಮೂರ್ತಿಗೆ ಹಾಕಲಾಗಿದ್ದ ಆಭರಣಗಳ ಪೈಕಿ ಬಹುತೇಕ ಆಭರಣಗಳು ನಾಪತ್ತೆಯಾಗಿದೆ ಎಂದು ಕೆಲ ಸಂಘಸಂಸ್ಥೆಗಳ ಆರೋಪಿಸಿವೆ. ಇನ್ನು ಈ ಆಭರಣಗಳ ನಿಗೂಢ ನಾಪತ್ತೆಯ ಹಿಂದೆ ದೇವಾಲಯದ ಅರ್ಚಕರಾದ ನರಸರಾಜ ಭಟ್ಟರ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿರುವ ಮೂರ್ತಿಗೆ ಹಾಕಲಾಗುತ್ತಿದ್ದ ಸುಮಾರು 40 ಕ್ಕೂ ಹೆಚ್ಚು ಆಭರಣಗಳು ನಾಪತ್ತೆಯಾಗಿದ್ದು, ನರಸರಾಜ ಭಟ್ಟರೇ ಆಭರಣಗಳನ್ನು ಅಪಹರಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಮೂರ್ತಿಗೆ ಹಾಕಲಾಗಿದ್ದ ವಜ್ರಾಂಗಿ, ಬಿಳಿಕಲ್ಲುಗಳ ಎರಡು ಎಳೆ ಉಡದಾರ, ಚಿನ್ನ ಮತ್ತು ವಜ್ರದ ಹರಳುಗಳಿರುವ ಡಾಬು ಮುಂತಾದ ಸಾಕಷ್ಟು ಆಭರಣಗಳು ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಜರಾಯಿ ಸಚಿವ ಟಿಬಿ ಜಯಚಂದ್ರ ಅವರಿಗೂ ಕೂಡ ದೂರು ನೀಡಲಾಗಿದ್ದು, ಈ ವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಲಾಗಿದೆ ಎಂದು ಭಕ್ತಾದಿಗಳು ಹೇಳಿದ್ದಾರೆ. ಈ ಹಿಂದೆಯೂ ಕೂಡ ಹಲವು ಬಾರಿ ಮೇಲುಕೋಟೆಯಲ್ಲಿ ದೇವರ ಆಭರಣಗಳು ನಾಪತ್ತೆಯಾಗಿರುವ ಕುರಿತು ಆರೋಪಗಳು ಕೇಳಿಬಂದಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT