ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಮೆಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯದ ಆಭರಣ ನಾಪತ್ತೆ

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿನ ಆಭರಣಗಳು ನಾಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ.

ಮಂಡ್ಯ: ದಕ್ಷಿಣ ಭಾರತದ ಖ್ಯಾತ ದೇವಾಲಯಗಳಲ್ಲಿ ಒಂದಾಗಿರುವ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿನ ಆಭರಣಗಳು ನಾಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ.

ದೇವಾಲಯದಲ್ಲಿರುವ ಮೂರ್ತಿಗೆ ಹಾಕಲಾಗಿದ್ದ ಆಭರಣಗಳ ಪೈಕಿ ಬಹುತೇಕ ಆಭರಣಗಳು ನಾಪತ್ತೆಯಾಗಿದೆ ಎಂದು ಕೆಲ ಸಂಘಸಂಸ್ಥೆಗಳ ಆರೋಪಿಸಿವೆ. ಇನ್ನು ಈ ಆಭರಣಗಳ ನಿಗೂಢ ನಾಪತ್ತೆಯ ಹಿಂದೆ ದೇವಾಲಯದ ಅರ್ಚಕರಾದ ನರಸರಾಜ ಭಟ್ಟರ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿರುವ ಮೂರ್ತಿಗೆ ಹಾಕಲಾಗುತ್ತಿದ್ದ ಸುಮಾರು 40 ಕ್ಕೂ ಹೆಚ್ಚು ಆಭರಣಗಳು ನಾಪತ್ತೆಯಾಗಿದ್ದು, ನರಸರಾಜ ಭಟ್ಟರೇ ಆಭರಣಗಳನ್ನು ಅಪಹರಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಮೂರ್ತಿಗೆ ಹಾಕಲಾಗಿದ್ದ ವಜ್ರಾಂಗಿ, ಬಿಳಿಕಲ್ಲುಗಳ ಎರಡು ಎಳೆ ಉಡದಾರ, ಚಿನ್ನ ಮತ್ತು ವಜ್ರದ ಹರಳುಗಳಿರುವ ಡಾಬು ಮುಂತಾದ ಸಾಕಷ್ಟು ಆಭರಣಗಳು ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಜರಾಯಿ ಸಚಿವ ಟಿಬಿ ಜಯಚಂದ್ರ ಅವರಿಗೂ ಕೂಡ ದೂರು ನೀಡಲಾಗಿದ್ದು, ಈ ವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಲಾಗಿದೆ ಎಂದು ಭಕ್ತಾದಿಗಳು ಹೇಳಿದ್ದಾರೆ. ಈ ಹಿಂದೆಯೂ ಕೂಡ ಹಲವು ಬಾರಿ ಮೇಲುಕೋಟೆಯಲ್ಲಿ ದೇವರ ಆಭರಣಗಳು ನಾಪತ್ತೆಯಾಗಿರುವ ಕುರಿತು ಆರೋಪಗಳು ಕೇಳಿಬಂದಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT