ನಗರ ಪೊಲೀಸ್ ಆಯುಕ್ತ ಎಂ ಎನ್ ರೆಡ್ಡಿ 
ಜಿಲ್ಲಾ ಸುದ್ದಿ

ಸ್ಫೋಟ: ತನಿಖೆ ಚುರುಕು ಇನ್ನೂ ಶಂಕಿತರ ಸುಳಿವಿಲ್ಲ

ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದ ತನಿಖೆ ಚುರುಕುನಿಂದ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ ಎನ್ ರೆಡ್ಡಿ ಹೇಳಿದರು.

ಬೆಂಗಳೂರು: ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದ ತನಿಖೆ ಚುರುಕುನಿಂದ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ ಎನ್ ರೆಡ್ಡಿ ಹೇಳಿದರು.

ದೇಶದ ವಿವಿಧ ತನಿಖಾ ಸಂಸ್ಥೆಗಳು ತನಿಖೆಗೆ ಉತ್ತಮ ಸಹಕಾರ ನೀಡುತ್ತಿದೆ. ಪರಸ್ಪರ ಸಂಯೋಜನೆಯೊಂದಿಗೆ ಕಾರ್ಯಾಚರಣೆ ನಡೆದಿದೆ. ವಿಶೇಷ ತಂಡಗಳಿಗೆ ಒಂದೊಂದು ಜವಾಬ್ದಾರಿ ವಹಿಸಲಾಗಿದ್ದು, ಇದುವರೆಗೂ ಯಾವುದೇ ಶಂಕಿತ ಆರೋಪಿಗಳನ್ನು ಬಂಧಿಸಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.

ಸ್ಫೋಟ ಸಂಭವಿಸಿದ ಸ್ಥಳದ ಸುತ್ತಮುತ್ತಲಿನ ಮಳಿಗೆ, ಹೊಟೆಲ್ ಹಾಗೂ ಇತರೆ ಅಂಗಡಿಗಳ ಸಿಬ್ಬಂದಿ, ಮಾಲೀಕರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳ ವಿಡಿಯೋಗಳನ್ನು ಸಂಗ್ರಹಿಸಿ ಸೂಕ್ಷ್ಮವಾಗಿ ಪರಿಶೀಸಲಾಗುತ್ತಿದೆ ಎಂದರು. ಉಗ್ರರ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡಗಳ ಪುಣೆ. ಚೆನ್ನೈ, ಹೈದರಾಬಾದ್ ಮತ್ತು ಮಧ್ಯಪ್ರದೇಶದಲ್ಲಿ ಶೋಧಕಾರ್ಯ ನಡೆಸುತ್ತಿವೆ. ಅನುಮಾನಾಸ್ಪದ ವ್ಯಕ್ತಿಗಳ ಲಿಚಾರಣೆ ನಡೆಸಲಾಗಿದೆ. ಕೇಂದ್ರ ಗುಪ್ತಚರ ಇಲಾಖೆ, ರಾಷ್ಟ್ರೀಯ ತನಿಖಾ ದಳ, ಭಯೋತ್ಪಾದನ ನಿಗ್ರಹದಳವೂ ಉಗ್ರರ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿವೆ ಎಂದರು.

ಘಟನಾ ಸ್ಥಳದಲ್ಲಿ ಕೆಲವರು ನೀಡಿದ ಹೇಳಿಕೆ ಮೇರೆಗೆ ಶಂಕಿತ ಉಗ್ರರ ರೇಖಾ ಚಿತ್ರವನ್ನು ಸಿದ್ದಪಡಿಸಲಾಗಿದೆ. ಆದರೆ, ಅಂತಿಮ ನಿರ್ಣಯಕ್ಕೆ ಬರುವುದಕ್ಕೆ ಸಾಧ್ಯವಾಗಿಲ್ಲ. ಸಿಸಿ ಕ್ಯಾಮೆರಾಗಳ ವಿಡಿಯೋವನ್ನು ಮತ್ತಷ್ಟು ಸ್ಪಷ್ಟವಾಗಿ ಕಾಣಿಸುವಂತೆ ಮಾಡಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಅಂತಿಮವಾಗಿ ರೇಖಾ ಚಿತ್ರ ಬಿಡುಗಡೆ ಮಾಡಲಾಗುವುದು ಎಂದರು.

ಪೈಪ್ ಬಾಂಬ್ ಬಳಕೆ

ಚರ್ಚ್ಸ್ಟ್ರೀಟ್ ಸ್ಫೋಟಕ್ಕೆ ಪೈಪ್ ಬಾಂಬ್ ಬಳಸಿರುವುದು ವಿಧಿವಿಜ್ಞಾನ ಪ್ರಯೋಗಾಲಯ ಪರೀಕ್ಷೆಯಿಂದ ದೃಢಪಟ್ಟಿದೆ ಸ್ಫೋಟಗೊಂಡಿದ್ದ ಅವಶೇಷಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೇ ಮಾದರಿಯ ಬಾಂಬ್ ಪುಣೆ ಸ್ಫೋಟ ಮತ್ತು ಚೆನ್ನೈ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಸಂಭವಿಸಿದ ಸ್ಫೋಟಕ್ಕೂ ಬಳಸಾಗಿತ್ತು ಎಂದು ರೆಡ್ಡಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT