ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯ 
ಜಿಲ್ಲಾ ಸುದ್ದಿ

ವಿವಿಗಳಿಗೆ ಅನುದಾನ ಕೇಂದ್ರಕ್ಕೆ ಮನವಿ

2011-12ನೇ ಸಾಲಿನಲ್ಲಿ ಕೃಷಿ ವಿಶ್ವವಿದ್ಯಾಲಯಕ್ಕೆ ರೂ.50 ಕೋಟಿ ಮಂಜೂರು ಮಾಡಿದೆ...

ನವದೆಹಲಿ: ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ವಿಶೇಷ ಅನುದಾನ ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಬಾಕಿ ಅನುದಾನ ನೀಡುವಂತೆ ಕರ್ನಾಟಕ ಸರ್ಕಾರ ದೆಹಲಿ ವಿಶೇಷ ಪ್ರತಿನಿಧಿ ಅಪ್ಪಾಜಿ ನಾಡಗೌಡ ಕೇಂದ್ರ ಕೃಷಿ ಸಚಿವ ರಾಧ ಮೋಹನ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.

ತೋಟಗಾರಿಕೆ ವಿಶ್ವವಿದ್ಯಾಲಯವು 2008ರಲ್ಲಿ ಪ್ರಾರಂಭಗೊಂಡಿದ್ದು, ತೋಟಗಾರಿಕೆ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ನಡೆಯುತ್ತಿದೆ. ಕೇಂದ್ರ ಸರ್ಕಾರವು ವಿಶೇಷ ಅನುದಾನ ನೀಡಿ ವಿಶ್ವವಿದ್ಯಾಲಯವನ್ನು ಉತ್ತೇಜಿಸಬೇಕು.

ವಿಶ್ವವಿದ್ಯಾಲಯದ ಅಭಿವೃದ್ಧಿ, ಹೆಚ್ಚಿನ ಸಂಶೋಧನೆ ಹಾಗೂ ಶಿಕ್ಷಣ ನೀಡಲು ಅನುಕೂಲವಾಗುವಂತೆ ಅನುದಾನ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಕೋರಿದ್ದಾರೆ.

ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ವಿಶೇಷ ಘಟಕ ಯೋಜನೆಯಡಿ(ಎಸ್‌ಎಫ್‌ಸಿ) ರೂ.35 ಕೋಟಿ ಬಾಕಿ ಅನುದಾನ ಬಿಡುಗಡೆ ಮಾಡಬೇಕು. ಕೇಂದ್ರ ಸರ್ಕಾರ ಈ ಯೋಜನೆಯಡಿ 2011-12ನೇ ಸಾಲಿನಲ್ಲಿ ಕೃಷಿ ವಿಶ್ವವಿದ್ಯಾಲಯಕ್ಕೆ ರೂ.50 ಕೋಟಿ ಮಂಜೂರು ಮಾಡಿದೆ. ಆದರೆ ಕೇವಲ ರೂ.15 ಕೋಟಿ ಬಿಡುಗಡೆ ಮಾಡಿದೆ.

ಉಳಿದ ರೂ.35 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ನೆರವಾಗುವಂತೆ ಕೃಷಿಸಚಿವರಿಗೆ ಸಲ್ಲಿಸಿರುವ ಮನವಿಯಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಶಿವಮೊಗ್ಗ: ನಡು ರಸ್ತೆಯಲ್ಲೇ ಕಬ್ಬಿಣದ ರಾಡ್ ನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, Video ವೈರಲ್ ಬಳಿಕ ಆರೋಪಿ ಬಂಧನ!