ಪತ್ನಿ ಕಲಾವತಿಯನ್ನು ಕೊಲೆಗೈದ ಆರೋಪ ಹೊತ್ತಿರುವ ಮುನಿರೆಡ್ಡಿ 
ಜಿಲ್ಲಾ ಸುದ್ದಿ

ಒಲಿದು ವರಿಸಿದವಳ ಮಸಣಕ್ಕೆ ಅಟ್ಟಿದ ಪತಿರಾಯ

ಮುನೇಕೊಳಲು ಸಮೀಪದ ಭುವನೇಶ್ವರಿ ಬಡಾವಣೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆಗೈದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಲು ಯತ್ನಿಸಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬೆಂಗಳೂರು: ಮುನೇಕೊಳಲು ಸಮೀಪದ ಭುವನೇಶ್ವರಿ ಬಡಾವಣೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆಗೈದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಲು ಯತ್ನಿಸಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕಲಾವತಿ (26) ಕೊಲೆಯಾದವರು. ಈಕೆಯ ಪತಿಯ ಮುನಿರೆಡ್ಡಿ (38)ಯನ್ನು ಎಚ್‌ಎಎಲ್ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶ ಮೂಲದ ಮುನಿರೆಡ್ಡಿ ಮತ್ತು ಕಲಾವತಿ 7 ವರ್ಷ ಹಿಂದೆ ಪ್ರೀತಿಸಿ ಪಾಲಕರ ವಿರೋಧದ ನಡುವೆ ಮದುವೆಯಾಗಿದ್ದರು. 5 ವರ್ಷದ ಮಗಳೊಂದಿಗೆ ಮುನೇಕೊಳಲುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಲಾವತಿ ಬೇಬಿಕೇರ್‌ನಲ್ಲಿ ಕೆಲಸ ಮಾಡುತ್ತಿದ್ದು, ಮುನಿರೆಡ್ಡಿ ಬಟ್ಟೆ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿದ್ದ.

ಮಧ್ಯವ್ಯಸನಿಯಾಗಿದ್ದ ಮುನಿರೆಡ್ಡಿ, ಸಂಪಾದನೆ ಮಾಡಿದ ಹಣವನ್ನು ಮದ್ಯ ಸೇವನೆಗೆ ಖರ್ಚು ಮಾಡುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು. ಸೋಮವಾರ ಬೆಳಗ್ಗೆ ಶಾಲೆಗೆ ತೆರಳಿದ ಬಳಿಕ ದಂಪತಿ ನಡುವೆ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದಾಗ ಮುನಿರೆಡ್ಡಿ, ಸೀರೆಯಿಂದ ಪತ್ನಿ ಕೊಲೆಗೈದು ಬಳಿಕ ನೇಣು ಬಿಗಿದುಕೊಂಡಿರುವಂತೆ ಬಿಂಬಿಸಲು ಶವಕ್ಕೆ ನೇಣು ಹಾಕಿದ್ದಾನೆ.

ನಂತರ ಮನೆಗೆ ಬೀಗ ಹಾಕಿಕೊಂಡು ಶಾಲೆಯಿಂದ ಮಗಳನ್ನು ಕರೆದೊಯ್ದು ಹೊಸೂರು ರಸ್ತೆಯಲ್ಲಿರುವ ಅಜ್ಜಿ ಮನೆಗೆ ಬಿಟ್ಟಿದ್ದಾನೆ. ಬಳಿಕ ಪತ್ನಿ ಸಹೋದರನಿಗೆ ಕರೆಮಾಡಿ, ಕಲಾವತಿ ಆತ್ಮಹತ್ಯೆ ಮಾಡಿಕೊಂಡು ಬಿಟ್ಟಿದ್ದಾಳೆ ಎಂದು ಹೇಳಿದ್ದಾನೆ. ಭಯಗೊಂಡ ಸಹೋದರ ಮಂಗಳವಾರ ಸಂಜೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT