ಸಾಮೂಹಿಕ ನಕಲು 
ಜಿಲ್ಲಾ ಸುದ್ದಿ

ಸಾಮೂಹಿಕ ನಕಲು: ಪ್ರಾಂಶುಪಾಲ ಬಂಧನ

ಬನಶಂಕರಿಯ ಬಿಎನ್‌ಎಂ ಕಾಲೇಜಿನಲ್ಲಿ ಬಿಬಿಎಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಿಸುತ್ತಿದ್ದ ಪ್ರಾಂಶುಪಾಲ...

ಬೆಂಗಳೂರು: ಬನಶಂಕರಿಯ ಬಿಎನ್‌ಎಂ ಕಾಲೇಜಿನಲ್ಲಿ ಬಿಬಿಎಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಿಸುತ್ತಿದ್ದ ಪ್ರಾಂಶುಪಾಲ ಶ್ರೀನಿವಾಸ ರಾವ್ ಮಾನೆ ಬೆಂಗಳೂರು ವಿಶ್ವವಿದ್ಯಾಲಯ ಮೌಲ್ಯ ಮಾಪನ  ಕುಲಸಚಿವ ಡಾ. ನಿಂಗೇಗೌಡ ಅವರಿಗೆ ಸಿಕ್ಕಿಬಿದ್ದಿದ್ದಾರರೆ. ಮಾನೆ ಅವರನ್ನು ಬಂಧಿಸಲಾಗಿದೆ . ಬಿಎನ್‌ಎಂ ಕಾಲೇಜಿನಲ್ಲಿ ಶುಕ್ರವಾರ 5 ನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದವು. ಪರೀಕ್ಷೆ ಪ್ರಾರಂಭವಾಗಿನಂದ ಸಂಜೆಯವರೆಗೂ ವಿದ್ಯಾರ್ಥಿಗಳು ಪರೀಕ್ಷಾ ಪತ್ರಿಕೆಯಲ್ಲಿ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಿರಲಿಲ್ಲ. ಕೇವಲ ನಾಮ್‌ಕೆವಾಸ್ತೆ ಪರೀಕ್ಷೆಗೆ ಹಾಜರಾಗಿದ್ದರು. ನಂತರ ಆ ಪುಸ್ತಕಗಳನ್ನು ಗಾಂಧಿ ಬಜಾರ್‌ನ 3ನೇ ಹಂತದಲ್ಲಿರುವ  ಮನೆಯೊಂದಕ್ಕೆ ರವಾನಿಸಿ ಬೇರೆಯವರ ಕೈಯಲ್ಲಿ ಉತ್ತರ ಪತ್ರಿಕೆಯಲ್ಲಿ ಉತ್ತರಗಳನ್ನು ಬರೆಯಿಸಲಾಗಿತ್ತು.

ಈ ಬಗ್ಗೆ ಮೌಲ್ಯ ಮಾಪನ ಕುಲಸಚಿವರಿಗೆ ಸಂಜೆ 6.10 ನಿಮಿಷದ ವೇಳೆಗೆ ಮಾಹಿತಿ ದೊರೆತಿದೆ. ತನ್ನನ್ನು ವಿದ್ಯಾರ್ಥಿಯೆಂದು ಹೇಳಿದ ವ್ಯಕ್ತಿ  ಅಕ್ರಮದ ಬಗ್ಗೆ ವಿವರ ನೀಡಿದ್ದಾನೆ. ತಕ್ಷಣವೇ, ವಿವಿಯ ಮೌಲ್ಯಮಾಪನ ಕುಲಸಚಿವರು ಸ್ಥಳಕಕೆ ಭೇಟಿ ನೀಡಿದಾಗ ಪ್ರಾಂಶುಪಾಲ  ಮಾನೆ, ಉತ್ತರ ಬರೆಸುತ್ತಿರುವುದನ್ನು ಕಣ್ಣಾರೆ ಕಂಡಿದ್ದಾರೆ. ಈ ಕುರಿತು ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ಪ್ರಾಂಶುಪಾಲರು , ಸಿಬ್ಬಂದಿ ಹಾಗೂ ಏಳೆಂಟು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಪ್ರಾಂಶುಪಾಲರಾಗಿದ್ದವರು  ಈ ಹಿಂದೆ ಸಿಂಡಿಕೇಟ್ ಸದಸ್ಯರಾಗಿದ್ದರೆಂದು ತಿಳಿದು ಬಂದಿದೆ. ಈ ಸಂಬಂಧ ಕುಲಪತಿ ಡಾ.ಬಿ ತಿಮ್ಮೇಗೌಡ ಅವರೂ ಠಾಣೆಗೆ ಭೇಟಿ ನೀಡಿದ್ದರು.

ಮತ್ತೊಂದು ಪ್ರಕರಣ: ಸುರಾನಾ ಕಾಲೇಜಿನಲ್ಲಿ ಶೇ.75ರಷ್ಟು ಹಾಜರಿ ಇಲ್ಲದಿರುವ ವಿದ್ಯಾರ್ಥಿಗಳಿಂದ ಹಣ ಪಡೆದು ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಆ ಕುರಿತು ವಿವಿ ಪ್ರಾಂಶುಪಾಲರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, 3 ದಿನಗಳಲ್ಲಿ ವರದಿ ನೀಡುವಂತೆ ತಿಳಿಸಲಾಗಿದೆ. ವರದಿ ಆಧರಿಸಿ ತನಿಖೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT