ಮಠಾಧೀಶರು 
ಜಿಲ್ಲಾ ಸುದ್ದಿ

ಮಠಾಧೀಶರಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು: ಸಮಾಜದಲ್ಲಿರುವ ಅನಿಷ್ಟ ಪದ್ಧತಿ, ಮೂಢನಂಬಿಕೆಗಳನ್ನು ತೊಡೆದುಹಾಕಿ ಉತ್ತಮ ಸಮಾಜ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕು.

ರಾಜ್ಯದ ಮಹಿಳೆಯರು, ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು, ಮುಂಬರುವ ಚಳಿಗಾಲದ ಅಧಿವೇಶನದಲ್ಲೇ ಈ ಸಮಸ್ಯೆಗಳನ್ನು ಬಗೆಹರಿಬೇಕು ಎಂದು ಆಗ್ರಹಿಸಿ ರಾಜ್ಯದ ನೂರಾರು ಮಠಾಧೀಶರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

13 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದ ಪ್ರಮುಖ ಸ್ವಾಮೀಜಿಗಳು ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಈ ಉಪವಾಸ ಸತ್ಯಾಗ್ರಹದ ನೇತೃತ್ವವನ್ನು ನಿಡುಮಾಮಿಡಿ ಮಹಾಸಂಸ್ಥಾನ ಮಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ವಹಿಸಿದ್ದಾರೆ. ಅಲ್ಲದೆ ಈ ಪ್ರತಿಭಟನೆಗೆ ಬರಹಗಾರರು, ಸಾಹಿತಿಗಳು, ಚಿಂತಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಮಾತನಾಡಿ, ಮೂಢನಂಬಿಕೆಗೆ ಸಂಬಂಧಿಸಿ ಈಗಾಗಲೇ ಸರ್ಕಾರದ ಮುಂದೆ ಎರಡು ಕರಡು ಮಸೂದೆಗಳಿವೆ. ಅವನ್ನು ಪರಿಷ್ಕರಿಸಿ ಶಿಫಾರಸು ಮಾಡಲು ಸದನ ಸಮಿತಿ ರಚಿಸಬೇಕು. ಈ ಸಂಬಂಧ ನಾಡಿನ ಪ್ರಮುಖರನ್ನು ಕರೆದು ಅಭಿಪ್ರಾಯ ಸಂಗ್ರಹಿಸಬೇಕು. ಮಡೆಸ್ನಾನ, ಪಂಕ್ತಿಭೇದ ನಿಷೇಧವಾಗಬೇಕು, ಅತ್ಯಂತ ಹಿಂದುಳಿದ ಮಲೆಕುಡಿಯರ ಏಳಿಗೆಗೆ ಸರ್ಕಾರ ವಿಶೇಷ ಆರ್ಥಿಕ ಯೋಜನೆ ರೂಪಿಸಬೇಕು, ಪೌರಕಾರ್ಮಿಕರನ್ನು 'ಡಿ' ದರ್ಜೆಗೇರಿಸಬೇಕು, ದೇವದಾಸಿ ಪದ್ದತಿ ಸೇರಿದಂತೆ ಇನ್ನೂ ಜೀವಂತವಾಗಿರುವ ಕೆಲ ಅನಿಷ್ಟ ಪದ್ಥತಿ ನಿರ್ಮೂಲನೆಗೆ ಮುಂದಾಗಬೇಕು.

ಅಲೆಮಾರಿ ಸಮುದಾಯದ ಅಭಿವೃದ್ಧಿಗೆ ಕರ್ನಾಟಕ ಅಲೆಮಾರಿ ಸಮುದಾಯ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂಬುದು ಸೇರಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಇದೇ ನವೆಂಬರ್ 25, 29 ಹಾಗೂ 30ರಂದು ಮಡೆಸ್ನಾನ, ಎಡೆಸ್ನಾನ ನಡೆಯುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಅನಿಷ್ಟ ಕಂದಾಚಾರಗಳನ್ನು ನಿಷೇಧಿಸುವಂತೆ ಸರ್ಕಾರದ ಗಮನ ಸೆಳೆಯಲು ಈ ಸತ್ಯಾಗ್ರಹ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!