ಹುಲಿ 
ಜಿಲ್ಲಾ ಸುದ್ದಿ

ಅಂತೂ ಬೋನಿಗೆ ಹುಲಿ

ಕಾಫಿ ತೋಟದ ಕೆಲಸಕ್ಕಾಗಿ ಹೋಗುತ್ತಿದ್ದ ಮಹಿಳೆಯನ್ನು ಸಾಯಿಸಿದ ಗಂಡು ಹುಲಿ...

ಚಿಕ್ಕಮಗಳೂರು: ಕಾಫಿ ತೋಟದ ಕೆಲಸಕ್ಕಾಗಿ ಹೋಗುತ್ತಿದ್ದ ಮಹಿಳೆಯನ್ನು ಸಾಯಿಸಿದ ಗಂಡು ಹುಲಿಯನ್ನು ಕೃತ್ಯ ನಡೆದ ಸ್ಥಳದಲ್ಲೇ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಸತತ 48 ಗಂಟೆ ಕಾಲ ಕಾರ್ಯಾರಣೆ ನಡೆಸಲಾಗಿದ್ದು, ಸೋಮವಾರ ಮಧ್ಯಾಹ್ನ ಸುಮಾರು 1.30ರ ವೇಳೆಯಲ್ಲಿ ಅರಿವಳಿಕೆ ಚುಚ್ಚುಮದ್ದು ನೀಡುವ ಮೂಲಕ ಹುಲಿ ಸೆರೆ ಹಿಡಿಯಲಾಗಿದೆ. ಹುಲಿಯನ್ನು ಎಲ್ಲಿಗೆ ಸಾಗಿಸಬೇಕೆಂಬ ಆದೇಶಕ್ಕಾಗಿ ಅರಣ್ಯಾಧಿಕಾರಿ ನಿರೀಕ್ಷೆಯಲ್ಲಿದ್ದು ಸಂಜೆ 6 ಗಂಟೆಯಾಗಿದ್ದರೂ ಆದೇಶ ಬಂದಿರಲಿಲ್ಲ. ಶನಿವಾರ ಬೆಳಗ್ಗೆ ಚಿಕ್ಕಿಮಗಳೂರು ತಾಲೂಕಿನ ಪಂಡರಹಳ್ಳಿ ಬಳಿ ಹುಲಿ ಸುಮಿತ್ರಾರವರನ್ನು ಕೊಂದು ಹಾಕಿತ್ತು.

ಈ ಘಟನೆ ಸಂಭವಿಸಿದ ನಂತರ ಅರಣ್ಯ ಇಲಾಖೆಯವರು ಹುಲಿಯನ್ನು ಸೆರೆ ಹಿಡಿಯಲು 50ಕ್ಕೂ ಹೆಚ್ಚು ಮಂದಿಯನ್ನು ನೇಮಿಸಿದ್ದರು. ಆದರೂ ಶನಿವಾರ ರಾತ್ರಿ ಅದೇ ಹುಲಿ 2 ಹಸುಗಳನ್ನೂ ತಿಂದು ಹಾಕಿತ್ತು. ಹುಲಿಯನ್ನು ಜೀವಂತ ಹಿಡಿಯಬೇಕೆಂಬ ಉದ್ದೇಶದಿಂದ ಅರಿವಳಿಕೆ ತಜ್ಞರನ್ನು ಕರೆಸಿ ಕಾರ್ಯಾಚರಣೆ ನಡೆಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT