ವಿಜಯ್ ಪತ್ನಿ ನಾಗರತ್ನ 
ಜಿಲ್ಲಾ ಸುದ್ದಿ

ಮತ್ತೆ ಒಂದಾಯ್ತು 'ದುನಿಯಾ'

ಕೆಲ ವರ್ಷಗಳಿಂದ ನಟ ದುನಿಯಾ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದ್ದು, ದುನಿಯಾ ವಿಜಿ ದಂಪತಿಗಳು ಮತ್ತೆ ಒಂದಾಗಿ ಸುಖ ಸಂಸಾರ ನಡೆಸಲು ಮನಸು ಮಾಡಿದ್ದಾರೆ.

ಬೆಂಗಳೂರು: ಕೆಲ ವರ್ಷಗಳಿಂದ ನಟ ದುನಿಯಾ ವಿಜಯ್ ಸಂಸಾರದಲ್ಲಿ ಬಿರುಕು ಮೂಡಿದ್ದು, ದುನಿಯಾ ವಿಜಿ ದಂಪತಿಗಳು ಮತ್ತೆ ಒಂದಾಗಿ ಸುಖ ಸಂಸಾರ ನಡೆಸಲು ಮನಸು ಮಾಡಿದ್ದಾರೆ.

ಪತ್ನಿ ನಾಗರತ್ನ ಅವರಿಗೆ ವಿಚ್ಛೇದನ ನೀಡಲು ದುನಿಯಾ ವಿಜಯ್ ಬಯಸಿದ್ದರು. ಹೀಗಾಗಿ ಇಂದು ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡು ಕಡೆಯ ವಾದಗಳನ್ನು ಆಲಿಸಲಾಯಿತು.

ವಾದ ವಿವಾದಗಳನ್ನು ಆಲಿಸಿದ ಕೆ.ಎಸ್ ಶ್ರೀನಿವಾಸ್ ಅವರು ಕೊನೆಗೆ ಇಬ್ಬರ ನಡುವಿನ ಮನಸ್ಥಾಪವನ್ನು ತೊಡೆದು ಹಾಕಿದ್ದಾರೆ. ಹೀಗಾಗಿ ದುನಿಯಾ ವಿಜಿ ಹಾಗೂ ನಾಗರತ್ನ ಇಬ್ಬರು ಪರಸ್ಪರ ಒಂದಾಗಿ ಬಾಳುವ ಮನಸು ಮಾಡಿದ್ದಾರೆ. ಅಲ್ಲದೆ ಪರಸ್ಪರ ಇಬ್ಬರು ದಾಖಲಿಸಿದ್ದ ವಿಚ್ಛೇದನ ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದಾರೆ.

ದುನಿಯಾ ವಿಜಿ ದಾಂಪತ್ಯ ಬದುಕಿನಲ್ಲಿ ಬಿರುಕು ಮೂಡಿತ್ತು. ಇದರಿಂದಾಗಿ ವಿಜಯ್ ವಿಚ್ಛೇದನ ಪಡೆಯಲು ಬಯಸಿದ್ದರು. ಈ ಪ್ರಕರಣ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಇಬ್ಬರ ನಡುವಿನ ವಾದ ವಿವಾದಗಳನ್ನು ಆಲಿಸಲು ಮಧ್ಯಸ್ಥಿಕೆ ಕೇಂದ್ರದಲ್ಲಿ ವಿಚಾರಣೆ ನಡೆಸಲಾಯಿತು.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT