ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಡೆ ಸ್ನಾನಕ್ಕೆ ಹೈಕೋರ್ಟ್ ಅನುಮತಿ

ಹಿಂದಿನಿಂದ ನಡೆದು ಬಂದಿದ್ದ ಮಡೆ ಸ್ನಾನ ಪದ್ಧತಿಯನ್ನು ಮುಂದುವರೆಸಲು...

ಬೆಂಗಳೂರು: ಹಿಂದಿನಿಂದ ನಡೆದು ಬಂದಿದ್ದ ಮಡೆ ಸ್ನಾನ ಪದ್ಧತಿಯನ್ನು ಮುಂದುವರೆಸಲು ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದು ಬರುತ್ತಿದ್ದ ಮಡೆ ಸ್ನಾನ ಪದ್ಧತಿಯನ್ನು ಮುಂದುವರೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಹಿಂದಿನ ಪದ್ಧತಿಯಲ್ಲೇ ನಡೆಸಿಕೊಂಡು ಹೋಗಬಹುದು ಎಂದು ಹೈಕೋರ್ಟ್‌ನ ವಿಭಾಗೀಯ ಪೀಠ ಹೇಳಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬ್ರಾಹ್ಮಣರು ಊಟದ ಮಾಡಿದ ಬಾಳೆ ಎಲೆ ಮೇಲೆ ಉರುಳು ಸೇವೆ ಮಾಡಿ, ನದಿಯಲ್ಲಿ ಮುಳುಗಿದರೆ ಶಾಪ ವಿಮೋಚನೆಯಾಗುತ್ತದೆ ಎಂಬ ನಂಬಿಕೆ ರೂಢಿಯಲ್ಲಿತ್ತು. ಇದನ್ನು ಮಡೆಸ್ನಾನ ಎಂದು ಕರೆಯಲಾಗುತ್ತಿತ್ತು. ಆದರೆ ಈ ಆಚರಣೆ ಶೋಷಣೆಗೆ ಕಾರಣವಾಗಿದೆ ಎಂದು ಆರೋಪಿಸಿ, ಇದನ್ನು ನಿಷೇಧಿಸಬೇಕೆಂದು ಪ್ರಗತಿಪರ ಸಂಘಟನೆಗಳು ಒತ್ತಾಯಿಸಿದ್ದವು.

ಪ್ರಗತಿಪರ ಸಂಘಟನೆಗಳ ಬೇಡಿಕೆಗೆ ಸ್ಪಂದಿಸಿದ ಸರ್ಕಾರ 2010ರಲ್ಲಿ ಮಡೆ ಸ್ನಾನವನ್ನು ನಿಷೇಧಿಸಿತ್ತು. ಆದರೆ ಈ ನಿಷೇಧವನ್ನು ಪ್ರಶ್ನಿಸಿ ಆದಿವಾಸಿ ಬುಡಕಟ್ಟು ಹಿತರಕ್ಷಣಾ ವೇದಿಕೆ ಹೈಕೋರ್ಟ್ ಮೆಟ್ಟಿಲೇರಿತ್ತು.

ವಿಚಾರಣೆ ನಡೆಸಿದ ಹೈಕೋರ್ಟ್, ಇನ್ನು ಮುಂದೆ ಹಳೇ ಪದ್ಧತಿಯಲ್ಲೇ ಮಡೆ ಸ್ನಾನ ಆಚರಣೆ ಮಾಡಬಹುದು ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT