ಜಿಲ್ಲಾ ಸುದ್ದಿ

ನಿಗಮ ಮಂಡಳಿ ನೇಮಕಾತಿ: ಅಂಬಿ ಬಣದಲ್ಲಿ ಅಸಮಾಧಾನ

Vishwanath S

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಅಂಬರೀಷ್ ಬಣದಲ್ಲಿ ಅಸಮಾಧಾನದ ಬೆಂಕಿ ಹೊಗೆಯಾಡುತ್ತಿದೆ.

ಜೆ.ಪಿ ನಗರದ ಅಂಬರೀಷ್ ಅವರ ಮನೆಗೆ ಮುತ್ತಿಗೆ ಹಾಕಿದ ಮಂಡ್ಯ ಜಿಲ್ಲಾ ಕಾರ್ಯಕರ್ತರು ಅಮರಾವತಿ ಚಂದ್ರಶೇಖರ್ ಅವರಿಗೆ ನಿಮಗ ಮಂಡಳಿಯಲ್ಲಿ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಕಾರ್ಯಕರ್ತರೊಂದಿಗೆ ಅಂಬರೀಷ್ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಅಂಬರೀಶ್, ನನ್ನ ಬೆಂಬಲಿಗರಿಗೂ ಸ್ಥಾನ ನೀಡಿ ಎಂದು ಹೇಳಿದ್ದಾರೆ.

ನಿಗಮ ಮಂಡಳಿಯಲ್ಲಿ ಹುದ್ದೆ ಪ್ರಭಾವಿ ವ್ಯಕ್ತಿಗಳಿಗೆ ಮಾತ್ರ ಸೀಮಿತವಾಗಿರಬಾರದು. ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೂ ಅವಕಾಶ ಸಿಗಬೇಕು ಎಂಬುದು ಕಾರ್ಯಕರ್ತರ ಒತ್ತಾಯವಾಗಿದೆ.

ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ಕೆಲ ಸಂಭಾವ್ಯ ಅಧ್ಯಕ್ಷರ ಪಟ್ಟಿ ಬಹಿರಂಗಗೊಂಡಿದ್ದರಿಂದ ಕಾರ್ಯಕರ್ತರಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ.

SCROLL FOR NEXT