ಜಗದೀಶ್ ಶೆಟ್ಟರ್ 
ಜಿಲ್ಲಾ ಸುದ್ದಿ

ಭೂ ಹಗರಣ: ಶೆಟ್ಟರ್ ವಿರುದ್ಧದ ತನಿಖೆ 'ಹೈ' ತಡೆಯಾಜ್ಞೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿರುದ್ಧದ ಭೂ ಹಗರಣದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬೆಂಗಳೂರಿನ ಶ್ರೀಗಂಧ ಕಾವಲ್‌ನಲ್ಲಿನ ನಾಲ್ಕು ಎಕರೆ ಭೂಮಿಯನ್ನು ಶೆಟ್ಟರ್ ಸಿಎಂ ಆಗಿದ್ದಾಗ ಅಕ್ರಮವಾಗಿ ಮಂಜೂರು ಮಾಡಿದ್ದಾರೆ ಎಂಬ ಆರೋಪವನ್ನು ಶೆಟ್ಟರ್ ಎದುರಿಸುತ್ತಿದ್ದು, ಇಂದು ವಿಚಾರಣೆ ನಡೆಸಿದ ಕೋರ್ಟ್ ಭೂ ಹಗರಣದ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಮುಂದೂಡಿದೆ.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎ. ಪ್ರಸಾದ್ ಅವರು ಬೆಂಗಳೂರು ಮಹಾನಗರ ಕಾರ್ಯಪಡೆ(ಬಿಎಂಟಿಎಫ್)ಗೆ ಸಲ್ಲಿಸಿದ್ದ ದೂರಿನ ಅನ್ವಯ ಜಗದೀಶ್ ಶೆಟ್ಟರ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು. ವಿಚಾರಣೆ ನಡೆಯುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗದೀಶ್ ಶೆಟ್ಟರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಶೆಟ್ಟರ್ ವಿಚಾರಣೆ ನಡೆಸದಂತೆ ಬಿಎಂಟಿಎಫ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅರ್ಜಿಯ ವಿಚಾರಣೆಯನ್ನು ಡಿ. 5ಕ್ಕೆ ಮುಂದೂಡಿದೆ.

ಬೆಂಗಳೂರಿನ ಶ್ರೀಗಂಧ ಕಾವಲ್‌ನಲ್ಲಿರುವ ನಾಲ್ಕು ಎಕರೆ ಭೂಮಿಯನ್ನು ಶೆಟ್ಟರ್ ಸಿಎಂ ಆಗಿದ್ದಾಗ ಅಕ್ರಮವಾಗಿ ಮಂಜೂರು ಮಾಡಿದ್ದಾರೆ ಎಂದು ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರೋ. ನಾಗರಾಜ್ ಆರೋಪಿಸಿದ್ದು, ಐಪಿಸಿ ಸೆಕ್ಷನ್ 420, 218, 166, 192(ಎ)ಮತ್ತು (ಬಿ) ಅಡಿಯಲ್ಲಿ ಜಗದೀಶ್ ಶೆಟ್ಟರ್, ಎಸ್ ಸುಂದರೇಶ್ ಮತ್ತು ಇತರೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT