ಮೂರು ಸಾವಿರ ಮಠದ ಸ್ವಾಮೀಜಿ ಶ್ರೀ ರಾಜಯೋಗೇಂದ್ರ 
ಜಿಲ್ಲಾ ಸುದ್ದಿ

ಮೂರು ಸಾವಿರ ಮಠ : ಶ್ರೀಗಳಿಂದ ಪೀಠ ತ್ಯಾಗ

ಹುಬ್ಬಳ್ಳಿಯ ಪ್ರತಿಷ್ಟಿತ ಮೂರು ಸಾವಿರ ಮಠದ ಸ್ವಾಮೀಜಿ ಶ್ರೀ ರಾಜಯೋಗೇಂದ್ರ ಅವರು ಪೀಠ ತ್ಯಾಗ

ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಟಿತ ಮೂರು ಸಾವಿರ ಮಠದ ಸ್ವಾಮೀಜಿ ಶ್ರೀ ರಾಜಯೋಗೇಂದ್ರ ಅವರು ಪೀಠ ತ್ಯಾಗ ಮಾಡಿ ಮೂಲ ಹಾನಗಲ್ ಮಠಕ್ಕೆ ಹಿಂತಿರುಗಿದ್ದಾರೆ ಎಂದು ತಿಳಿದು ಬಂದಿದೆ.

ಹಲವು ದಿನಗಳಿಂದ ಮಠದ ಸುತ್ತ ಹಲವಾರು ವಿವಾದಗಳು ಸೃಷ್ಟಿಯಾಗಿದ್ದವು. ಈ ಹಿಂದೆಯೂ ಸ್ವಾಮಿಗಳು ಪೀಠ ತೆರವು ಮಾಡಲು ಮುಂದಾಗಿದ್ದರು. ಆದರೆ ಭಕ್ತರ ಒತ್ತಡದಿಂದ ಹಿಂದೆ ಸರಿದಿದ್ದರು. ಉತ್ತರಾಧಿಕಾರಿ ನೇಮಕದ ವಿಷಯವಾಗಿ ಇಂದು ಮಠದಲ್ಲಿ ಸ್ವಾಮಿಯವರ ಅಧ್ಯಕ್ಷತೆಯಲ್ಲಿ ಸಭೆ ಸೇರಬೇಕಿತ್ತು. ಆದರೆ ಸಭೆ ನಾಳೆಗೆ ಮುಂದೂಡಲಾಯಿತು ಎಂದು ತಿಳಿದು ಬಂದಿದೆ. ಈಗ ಮಠ ಕಂಡ ಕೆಲವು ಕೆಟ್ಟ ಬೆಳವಣಿಗೆಗಳಿಂದ ಪೀಠ ತ್ಯಜಿಸಿದ್ದೇನೆ ಎಂದು ಶ್ರೀ ರಾಜಯೋಗೇಂದ್ರ ಸ್ವಾಮಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸ್ವಾಮಿಗಳು ಮಠ ತೊರೆಯುವ ಮುಂಚೆ ಅವರ ಕಾರನ್ನು ಅಡ್ಡಗಟ್ಟಿ, ಅಲ್ಲಿಯೇ ಉಳಿಯುವಂತೆ ಭಕ್ತರ ಬೇಡಿಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT