ಮೂರು ಸಾವಿರ ಮಠದ ಸ್ವಾಮೀಜಿ ಶ್ರೀ ರಾಜಯೋಗೇಂದ್ರ 
ಜಿಲ್ಲಾ ಸುದ್ದಿ

ಮೂರು ಸಾವಿರ ಮಠ : ಶ್ರೀಗಳಿಂದ ಪೀಠ ತ್ಯಾಗ

ಹುಬ್ಬಳ್ಳಿಯ ಪ್ರತಿಷ್ಟಿತ ಮೂರು ಸಾವಿರ ಮಠದ ಸ್ವಾಮೀಜಿ ಶ್ರೀ ರಾಜಯೋಗೇಂದ್ರ ಅವರು ಪೀಠ ತ್ಯಾಗ

ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಟಿತ ಮೂರು ಸಾವಿರ ಮಠದ ಸ್ವಾಮೀಜಿ ಶ್ರೀ ರಾಜಯೋಗೇಂದ್ರ ಅವರು ಪೀಠ ತ್ಯಾಗ ಮಾಡಿ ಮೂಲ ಹಾನಗಲ್ ಮಠಕ್ಕೆ ಹಿಂತಿರುಗಿದ್ದಾರೆ ಎಂದು ತಿಳಿದು ಬಂದಿದೆ.

ಹಲವು ದಿನಗಳಿಂದ ಮಠದ ಸುತ್ತ ಹಲವಾರು ವಿವಾದಗಳು ಸೃಷ್ಟಿಯಾಗಿದ್ದವು. ಈ ಹಿಂದೆಯೂ ಸ್ವಾಮಿಗಳು ಪೀಠ ತೆರವು ಮಾಡಲು ಮುಂದಾಗಿದ್ದರು. ಆದರೆ ಭಕ್ತರ ಒತ್ತಡದಿಂದ ಹಿಂದೆ ಸರಿದಿದ್ದರು. ಉತ್ತರಾಧಿಕಾರಿ ನೇಮಕದ ವಿಷಯವಾಗಿ ಇಂದು ಮಠದಲ್ಲಿ ಸ್ವಾಮಿಯವರ ಅಧ್ಯಕ್ಷತೆಯಲ್ಲಿ ಸಭೆ ಸೇರಬೇಕಿತ್ತು. ಆದರೆ ಸಭೆ ನಾಳೆಗೆ ಮುಂದೂಡಲಾಯಿತು ಎಂದು ತಿಳಿದು ಬಂದಿದೆ. ಈಗ ಮಠ ಕಂಡ ಕೆಲವು ಕೆಟ್ಟ ಬೆಳವಣಿಗೆಗಳಿಂದ ಪೀಠ ತ್ಯಜಿಸಿದ್ದೇನೆ ಎಂದು ಶ್ರೀ ರಾಜಯೋಗೇಂದ್ರ ಸ್ವಾಮಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸ್ವಾಮಿಗಳು ಮಠ ತೊರೆಯುವ ಮುಂಚೆ ಅವರ ಕಾರನ್ನು ಅಡ್ಡಗಟ್ಟಿ, ಅಲ್ಲಿಯೇ ಉಳಿಯುವಂತೆ ಭಕ್ತರ ಬೇಡಿಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT