ಮಡೆಸ್ನಾನ 
ಜಿಲ್ಲಾ ಸುದ್ದಿ

ಮಡೆ ಸ್ನಾನ: ನಾಳೆ ಪ್ರತಿಭಟನೆ

ಕುಕ್ಕೆ ಸುಬ್ರಹ್ಮಣ್ಯೇಶ್ವರ ದೇವಾಲಯದಲ್ಲಿ ಜರಗುವ ಮಡೆ ಮಡೆಸ್ನಾನವನ್ನು ಸದ್ಯಕ್ಕೆ ಮುಂದುವರಿಸುವಂತೆ...

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯೇಶ್ವರ ದೇವಾಲಯದಲ್ಲಿ ಜರಗುವ ಮಡೆ ಮಡೆಸ್ನಾನವನ್ನು ಸದ್ಯಕ್ಕೆ ಮುಂದುವರಿಸುವಂತೆ ಹೈಕೋರ್ಟ್ ನೀಡಿದ ಮಧ್ಯಾಂತರ ಆದೇಶವನ್ನು ಖಂಡಿಸಿ, ನಾಳೆ (ಮಂಗಳವಾರ) ಕರ್ನಾಟಕ ರಾಜ್ಯ ಹಿಂದುಳಿದ ವರ್ಗ ಜಾಗೃತಿ ವೇದಿಕೆ ಪ್ರತಿಭಟನೆ ನಡೆಸಲಿದೆ.

ಕುಕ್ಕೆ ಸುಬ್ರಮಣ್ಯ ದೇಗುಲದಲ್ಲಿ ಬ್ರಾಹ್ಮಣರು ಊಟ ಮಾಡಿದ ಎಂಜಲೆಲೆಯಲ್ಲಿ ಭಕ್ತರು ಹೊರಳಾಡುವ ಮಡೆ ಸ್ನಾನವನ್ನು ನಿಷೇಧಿಸಬೇಕೆಂದು ವ್ಯಾಪಕ ಕೂಗು ಎದ್ದಿತ್ತು. ಆದರೆ ಮಡೆಸ್ನಾನ ಮುಂದುವರಿಸುವಂತೆ ಹೈಕೋರ್ಟ್ ಮಧ್ಯಾಂತರ ಆದೇಶ ಹೊರಡಿಸಿತ್ತು.
 
ಪ್ರತಿಭಟನೆಯ ಬಗ್ಗೆ ವೇದಿಕೆಯ ಅಧ್ಯಕ್ಷ ಕೆ.ಎಸ್ .ಶಿವರಾಮು ಅವರು ಮಾತನಾಡಿದ್ದು, ಈ ಅಮಾನವೀಯ ಮತ್ತು ವಿಚಾರಹೀನ ಪದ್ದತಿಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ನ್ಯಾಯಾಂಗ ಹೋರಾಟ ನಡೆಸುವ ಬದಲು ಜನರನ್ನು ಜಾಗೃತಿಗೊಳಿಸಬೇಕಾದುದು ಮುಖ್ಯ. ಆದ್ದರಿಂದಲೇ ನಾವು ಪ್ರತಿಭಟನೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ.

ಅದೇ ವೇಳೆ ರಾಜ್ಯ ಸರ್ಕಾರ ಪಂಕ್ತಿ ಭೇದವನ್ನು ನಿಷೇಧಕ್ಕೊಳಪಡಿಸದೇ ಇದ್ದರೆ ನಾವು ಅದರ ವಿರುದ್ಧವೂ ಪ್ರತಿಭಟನೆ ನಡೆಸುತ್ತೇವೆ ಎಂದು ಶಿವರಾಮು ಹೇಳಿದ್ದಾರೆ .

ನಾಳೆ ಬೆಳಗ್ಗೆ 10.30ಕ್ಕೆ ಡೆಪ್ಯುಟಿ ಕಮಿಷನರ್ ಕಚೇರಿಯ ಹೊರಗೆ ಪ್ರತಿಭಟನೆ ನಡೆಯಲಿದ್ದು, ಇದರಲ್ಲಿ ದಲಿತ ಸಂಘಗಳು, ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸೇರಿದಂತೆ ಹಲವಾರು ಧಾರ್ಮಿಕ ಮುಖಂಡರು ಪಾಲ್ಗೊಳ್ಳಲಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT