ಐಸ್‌ಕ್ರೀಮ್ ಪಾರ್ಲರ್ ಬಳಿ ನಡೆದ ಘಟನೆಯ ಮೊಬೈಲ್ ಚಿತ್ರೀಕರಣದ ದೃಶ್ಯ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಮಹಿಳೆಯರಿಗೆ ಕಿರುಕುಳ ನೀಡಿದ್ದ ಆರು ಮಂದಿಯ ಬಂಧನ

ನಗರದ ಪ್ರತಿಷ್ಟಿತ ಮಹಾತ್ಮಾಗಾಂಧಿ ರಸ್ತೆಯಲ್ಲಿ ಮಹಿಳೆಯರನ್ನು ಹಿಂಬಾಲಿಸಿ, ಚುಡಾಯಿಸಿದ್ದ ಯುವಕರ ಗುಂಪನ್ನು..

ಬೆಂಗಳೂರು: ನಗರದ ಪ್ರತಿಷ್ಟಿತ ಮಹಾತ್ಮಾಗಾಂಧಿ ರಸ್ತೆಯಲ್ಲಿ ಮಹಿಳೆಯರನ್ನು ಹಿಂಬಾಲಿಸಿ, ಚುಡಾಯಿಸಿದ್ದ ಯುವಕರ ಗುಂಪನ್ನು ಕೇವಲ 48 ಗಂಟೆಯಲ್ಲೇ ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ಭಾನುವಾರ ರಾತ್ರಿ ಎಂಜಿ ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯರ ಕಾರನ್ನು ಯುವಕರ ಗುಂಪೊಂದು ಹಿಂಬಾಲಿಸಿದ್ದಲ್ಲದೇ, ಐಸ್‌ಕ್ರೀಮ್ ಪಾರ್ಲರ್ ಬಳಿ ಕಾರನ್ನು ತಡೆದು ನಿಲ್ಲಿಸಿ ಅವರಿಗೆ ಕಿರುಕುಳ ನೀಡಿದ್ದರು. ಅಲ್ಲದೆ ಕಾರಿನ ಬಾಗಿಲನ್ನು ತೆರೆಯುವಂತೆಯೂ ಮತ್ತು ತೆರೆಯದಿದ್ದರೆ ಕಾರಿನ ಬಾಗಿಲ ಗ್ಲಾಸ್ ಅನ್ನು ಹೊಡೆದುಹಾಕುವುದಾಗಿ ಹೆದರಿಸಿದ್ದರು. ಇವಿಷ್ಟು ದೃಶ್ಯಾವಳಿಗಳನ್ನು ಕಾರಿನಲ್ಲಿಯೇ ಇದ್ದ ಯುವತಿಯೊಬ್ಬಳು ಚಿತ್ರೀಕರಿಸಿದ್ದಾಳೆ.

ಮೊಬೈಲ್ ಚಿತ್ರೀಕರಣದ ದೃಶ್ಯಾವಳಿಯ ಆಧಾರದ ಮೇಲೆ ಪೊಲೀಸರು ಪ್ರಸ್ತುತ 6 ಮಂದಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಅವರು, 'ನಾನು ಮೊದಲೇ ಹೇಳಿದಂತೆ ದುಷ್ಕರ್ಮಿಗಳನ್ನು ಬಂಧಿಸಿದ್ದೇವೆ. ಸಂತೋಷದ ವಿಚಾರವೆಂದರೆ ಘಟನೆ ನಡೆದ ಕೇವಲ 48 ಗಂಟೆಗಳ ಒಳಗೇ ನಮ್ಮ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಎಲ್ಲ ಆರೋಪಿಗಳು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ಸಾರ್ವಜನಿಕವಾಗಿ ಅಸಭ್ಯ ವರ್ತನೆ ಮತ್ತು ಯುವತಿಯರನ್ನು ಚುಡಾಯಿಸಿದರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯುವತಿಯರ ಜೊತೆ ಪುರುಷರು ಇಲ್ಲದೇ ಇದ್ದ ಕಾರಣದಿಂದಲೇ ಯುವಕರು ಇವರ ಹಿಂದೆ ಬಿದ್ದಿದ್ದಾರೆ ಎಂದು ಹೇಳಿದರು.

ಕಳೆದ ಭಾನುವಾರ ರಾತ್ರಿ ಊಟಕ್ಕೆಂದು ಬಂದಿದ್ದ ಐವರು ಮಹಿಳೆಯರು ಎಂಜಿ ರಸ್ತೆಯಲ್ಲಿರುವ ಪ್ರತಿಷ್ಟಿತ ಐಸ್‌ಕ್ರೀಮ್ ಪಾರ್ಲರ್ ಬಳಿ ಕಾರನ್ನು ನಿಲ್ಲಿಸುತ್ತಿದ್ದಂತೆಯೇ ಅವರನ್ನೇ ಹಿಂಬಾಲಿಸಿಕೊಂಡು ಬಂದಿದ್ದ ಯುವಕರ ಗುಂಪು ಅವರನ್ನು ಚುಡಾಯಿಸಿತ್ತು. ಅಲ್ಲದೆ ಗುಂಪಿನಲ್ಲಿದ್ದ ಓರ್ವ ಕಾರಿನ ಬಾಗಿಲನ್ನು ಬಲವಂತವಾಗಿ ತೆರೆಯಲು ಪ್ರಯತ್ನಿಸಿದ್ದನು. ಈ ದಿಢೀರ್ ಘಟನೆಯಿಂದ ಗಾಬರಿಗೊಳಗಾದ ಕಾರಿನಲ್ಲಿದ್ದ ಮಹಿಳೆಯೊಬ್ಬಳು ತಮ್ಮ ಪತಿಗೆ ಫೋನಾಯಿಸಿ ವಿಷಯ ತಿಳಿಸಿದ್ದಾರೆ. ಕಾರಿನ ಬಾಗಿಲು ತೆರೆಯಲು ಪ್ರಯತ್ನಿಸುತ್ತಿದ್ದ ಪುಂಡರು ಫೋನಾಯಿಸುತ್ತಿದ್ದಂತೆಯೇ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT