ಐಸ್‌ಕ್ರೀಮ್ ಪಾರ್ಲರ್ ಬಳಿ ನಡೆದ ಘಟನೆಯ ಮೊಬೈಲ್ ಚಿತ್ರೀಕರಣದ ದೃಶ್ಯ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಮಹಿಳೆಯರಿಗೆ ಕಿರುಕುಳ ನೀಡಿದ್ದ ಆರು ಮಂದಿಯ ಬಂಧನ

ನಗರದ ಪ್ರತಿಷ್ಟಿತ ಮಹಾತ್ಮಾಗಾಂಧಿ ರಸ್ತೆಯಲ್ಲಿ ಮಹಿಳೆಯರನ್ನು ಹಿಂಬಾಲಿಸಿ, ಚುಡಾಯಿಸಿದ್ದ ಯುವಕರ ಗುಂಪನ್ನು..

ಬೆಂಗಳೂರು: ನಗರದ ಪ್ರತಿಷ್ಟಿತ ಮಹಾತ್ಮಾಗಾಂಧಿ ರಸ್ತೆಯಲ್ಲಿ ಮಹಿಳೆಯರನ್ನು ಹಿಂಬಾಲಿಸಿ, ಚುಡಾಯಿಸಿದ್ದ ಯುವಕರ ಗುಂಪನ್ನು ಕೇವಲ 48 ಗಂಟೆಯಲ್ಲೇ ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ಭಾನುವಾರ ರಾತ್ರಿ ಎಂಜಿ ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯರ ಕಾರನ್ನು ಯುವಕರ ಗುಂಪೊಂದು ಹಿಂಬಾಲಿಸಿದ್ದಲ್ಲದೇ, ಐಸ್‌ಕ್ರೀಮ್ ಪಾರ್ಲರ್ ಬಳಿ ಕಾರನ್ನು ತಡೆದು ನಿಲ್ಲಿಸಿ ಅವರಿಗೆ ಕಿರುಕುಳ ನೀಡಿದ್ದರು. ಅಲ್ಲದೆ ಕಾರಿನ ಬಾಗಿಲನ್ನು ತೆರೆಯುವಂತೆಯೂ ಮತ್ತು ತೆರೆಯದಿದ್ದರೆ ಕಾರಿನ ಬಾಗಿಲ ಗ್ಲಾಸ್ ಅನ್ನು ಹೊಡೆದುಹಾಕುವುದಾಗಿ ಹೆದರಿಸಿದ್ದರು. ಇವಿಷ್ಟು ದೃಶ್ಯಾವಳಿಗಳನ್ನು ಕಾರಿನಲ್ಲಿಯೇ ಇದ್ದ ಯುವತಿಯೊಬ್ಬಳು ಚಿತ್ರೀಕರಿಸಿದ್ದಾಳೆ.

ಮೊಬೈಲ್ ಚಿತ್ರೀಕರಣದ ದೃಶ್ಯಾವಳಿಯ ಆಧಾರದ ಮೇಲೆ ಪೊಲೀಸರು ಪ್ರಸ್ತುತ 6 ಮಂದಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಅವರು, 'ನಾನು ಮೊದಲೇ ಹೇಳಿದಂತೆ ದುಷ್ಕರ್ಮಿಗಳನ್ನು ಬಂಧಿಸಿದ್ದೇವೆ. ಸಂತೋಷದ ವಿಚಾರವೆಂದರೆ ಘಟನೆ ನಡೆದ ಕೇವಲ 48 ಗಂಟೆಗಳ ಒಳಗೇ ನಮ್ಮ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಎಲ್ಲ ಆರೋಪಿಗಳು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ಸಾರ್ವಜನಿಕವಾಗಿ ಅಸಭ್ಯ ವರ್ತನೆ ಮತ್ತು ಯುವತಿಯರನ್ನು ಚುಡಾಯಿಸಿದರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯುವತಿಯರ ಜೊತೆ ಪುರುಷರು ಇಲ್ಲದೇ ಇದ್ದ ಕಾರಣದಿಂದಲೇ ಯುವಕರು ಇವರ ಹಿಂದೆ ಬಿದ್ದಿದ್ದಾರೆ ಎಂದು ಹೇಳಿದರು.

ಕಳೆದ ಭಾನುವಾರ ರಾತ್ರಿ ಊಟಕ್ಕೆಂದು ಬಂದಿದ್ದ ಐವರು ಮಹಿಳೆಯರು ಎಂಜಿ ರಸ್ತೆಯಲ್ಲಿರುವ ಪ್ರತಿಷ್ಟಿತ ಐಸ್‌ಕ್ರೀಮ್ ಪಾರ್ಲರ್ ಬಳಿ ಕಾರನ್ನು ನಿಲ್ಲಿಸುತ್ತಿದ್ದಂತೆಯೇ ಅವರನ್ನೇ ಹಿಂಬಾಲಿಸಿಕೊಂಡು ಬಂದಿದ್ದ ಯುವಕರ ಗುಂಪು ಅವರನ್ನು ಚುಡಾಯಿಸಿತ್ತು. ಅಲ್ಲದೆ ಗುಂಪಿನಲ್ಲಿದ್ದ ಓರ್ವ ಕಾರಿನ ಬಾಗಿಲನ್ನು ಬಲವಂತವಾಗಿ ತೆರೆಯಲು ಪ್ರಯತ್ನಿಸಿದ್ದನು. ಈ ದಿಢೀರ್ ಘಟನೆಯಿಂದ ಗಾಬರಿಗೊಳಗಾದ ಕಾರಿನಲ್ಲಿದ್ದ ಮಹಿಳೆಯೊಬ್ಬಳು ತಮ್ಮ ಪತಿಗೆ ಫೋನಾಯಿಸಿ ವಿಷಯ ತಿಳಿಸಿದ್ದಾರೆ. ಕಾರಿನ ಬಾಗಿಲು ತೆರೆಯಲು ಪ್ರಯತ್ನಿಸುತ್ತಿದ್ದ ಪುಂಡರು ಫೋನಾಯಿಸುತ್ತಿದ್ದಂತೆಯೇ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT