ರಾಷ್ಟ್ರಪತಿ ಪ್ರಣಬ್ ಮುಖರ್ಜಿ-ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಆರೋಗ್ಯವಂತ ಸಮಾಜಕ್ಕೆ ವಿಜ್ಞಾನದಿಂದ ಪರಿಹಾರ ಕಂಡುಕೊಳ್ಳಿ: ರಾಷ್ಟ್ರಪತಿ

ಮೊದಲ ಪ್ರಯತ್ನದಲ್ಲಿಯೇ ಮಂಗಳಯಾನದಲ್ಲಿ ಯಶಸ್ವಿಯಾಗಿ ಭಾರತ ತನ್ನ ಸಾಮಾರ್ಥ್ಯವನ್ನು ಪ್ರದರ್ಶಿಸಿದೆ...

ಬೆಂಗಳೂರು: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವಿಜ್ಞಾನದ ಮೂಲಕ ಕಾಮನ್‌ವೆಲ್ತ್ ದೇಶಗಳು ಪರಿಹಾರ ಕಂಡುಕೊಳ್ಳಬೇಕಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಆರಂಭದಿಂದಲೂ ಕಾಮನ್‌ವೆಲ್ತ್ ದೇಶಗಳ ಮೂಲಕ ದೇಶದ ಅಭಿವೃದ್ಧಿಗೆ ಬುನಾದಿ ಹಾಕುವ ಕೆಲಸವನ್ನು ಭಾರತ ಮಾಡುತ್ತಿದೆ.

ಆದರೆ ಇಂದು ತುರ್ತಾಗಿ ಆರೋಗ್ಯ ಹಾಗೂ ನೀರಿನ ವಿಚಾರದಲ್ಲಿ ಕಾಮನ್‌ವೆಲ್ತ್ ದೇಶಗಳು ಒಟ್ಟಾಗಿ ಕೆಲಸ ಮಾಡಬೇಕಿದ್ದು, ಇದಕ್ಕೆ ವಿಜ್ಞಾನ ಹಾಗೂ ತಂತ್ರಜ್ಞಾನವನ್ನು ವೇದಿಕೆ ಮಾಡಿಕೊಳ್ಳಬೇಕಿದೆ ಎಂದು ಭಾರತದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ 'ಕಾಮನ್‌ವೆಲ್ತ್ ವಿಜ್ಞಾನ ಸಮ್ಮೇಳನ'ಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾದಿ ದಿ ರಾಯಲ್ ಸೊಸೈಟಿ ಲಂಡನ್ ವತಿಯಿಂದ ಬೆಂಗಳೂರಿನಲ್ಲಿ ನಾಲ್ಕು ದಿನಗಳ ಕಾಮನ್‌ವೆಲ್ತ್ ದೇಶಗಳ ಬೃಹತ್ ವಿಜ್ಞಾನ ಸಮ್ಮೇಳನ ಆಯೋಜಿಸಲಾಗಿದೆ. ಒಟ್ಟು 52 ದೇಶಗಳ ಖ್ಯಾತ ವಿಜ್ಞಾನಿಗಳು ಭಾಗವಹಿಸಿದರು.

ಮೊದಲ ಪ್ರಯತ್ನದಲ್ಲಿಯೇ ಮಂಗಳಯಾನದಲ್ಲಿ ಯಶಸ್ವಿಯಾಗಿ ಭಾರತ ತನ್ನ ಸಾಮಾರ್ಥ್ಯವನ್ನು ಜಾಗತಿಕ ಮಟ್ಟದಲ್ಲಿ ಪ್ರದರ್ಶಿಸಿದೆ. ನ್ಯಾನೋ ತಂತ್ರಜ್ಞಾನದಲ್ಲಿ ಸಿ.ಎನ್.ಆರ್.ರಾವ್ ಹಾಗೂ ಇತರ ವಿಜ್ಞಾನಿಗಳು ಛಾಪು ಮೂಡಿಸಿದ್ದಾರೆ. ದೇಶದ ವಿಜ್ಞಾನ ನಗರಿ ಎಂದು ಖ್ಯಾತಿಯಾಗಿರುವ ಬೆಂಗಳೂರು ವಿಶ್ವಕ್ಕೆ ಮಾದರಿಯಾಗುವಂತೆ ಸಂಶೋಧನಾ ಕೆಲಸದಲ್ಲಿ ನಿರತವಾಗಿದೆ.

ಭಾರತದ ಮೊದಲ ಪ್ರಧಾನಿ ನೆಹರು ಹೇಳಿದಂತೆ ಭವಿಷ್ಯವು ವಿಜ್ಞಾನದಲ್ಲಿದೆ. ನಾವು ವಿಜ್ಞಾನದೊಂದಿಗೆ ಸ್ನೇಹ ಬೆಳೆಸಬೇಕು. ಆದರೆ ಈ ಸ್ನೇಹವು ಸಮಾಜ ಕಟ್ಟುವ ನಿಟ್ಟಿನಲ್ಲಿರಬೇಕು ಎಂದು ಅವರು ತಿಳಿಸಿದರು.

ದೇಶ ಕಟ್ಟುವ ವಿಜ್ಞಾನಬೇಕು
19 ಹಾಗೂ 20ನೇ ಶತಮಾನದಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರಗಳು ದೊಡ್ಡ ಬದಲಾವಣೆ ಕಂಡವು. ಆದರೆ ಆ ಸಂಶೋಧನೆಗಳು ನಾನಾ ಯುದ್ಧ ಹಾಗೂ ಸಮಸ್ಯೆಗಳಿಗೆ ಕಾರಣವಾದವು. ಆದರೆ ಇಂದು ದೇಶಕಟ್ಟುವ ನಿಟ್ಟಿನಲ್ಲಿ ವಿಜ್ಞಾನ ಬೆಳೆಯಬೇಕಿದೆ.

ಭಾರತವು ಈ ನಿಟ್ಟಿನಲ್ಲಿ ತನ್ನ ಅಭಿಪ್ರಾಯವನ್ನು ಜಾಗತಿಕವಾಗಿ ಸ್ಪಷ್ಟಪಡಿಸಿದೆ. ಈ ಶತಮಾನದ ವಿಜ್ಞಾನವು ಮಾನವ ಹಾಗೂ ದೇಶವನ್ನು ಬೆಳೆಸುವ ನಿಟ್ಟಿನಲ್ಲಿರಬೇಕು ಎನ್ನುವುದು ನಮ್ಮ ವಾದವಾಗಿದೆ ಎಂದು ಕೇಂದ್ರ ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಹರ್ಷವರ್ಧನ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT